Homeಮುಖಪುಟಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ಕರ್ನಾಟಕದಲ್ಲಿ 5 ವರ್ಷಗಳ ಅವಧಿಯಲ್ಲಿ 56,035 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ ಶೇಕಡಾ 75ರಷ್ಟು ಮಂದಿ ಪುರುಷರು ಮತ್ತು ಶೇಕಡಾ 24.96 ಮಂದಿ ಮಹಿಳೆಯರಿದ್ದಾರೆ.

- Advertisement -
- Advertisement -

ಪ್ರತಿ ವರ್ಷ ಸೆ.10ರಂದು ವಿಶ್ವ ಆತ್ಮಹತ್ಯೆ ತಡೆ ದಿನ ಆಚರಿಸಲಾಗುತ್ತದೆ. ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಆಚರಣೆ ಮಾಡಲಾಗುತ್ತದೆ. ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್ (ಐಎಎಸ್ಪಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆಯು ಸೆಪ್ಟೆಂಬರ್ 10, 2003 ರಂದು ಈ ದಿನವನ್ನು ಜಾರಿಗೆ ತಂದವು. ಮೊದಲ ಬಾರಿ ವಿಶ್ವ ಆತ್ಮಹತ್ಯೆ ವರದಿಯನ್ನು 2014 ರಲ್ಲಿ ವಿಶ್ವಸಂಸ್ಥೆ ಬಿಡುಗಡೆ ಮಾಡಿತು.

ಆತ್ಮಹತ್ಯೆ ಪ್ರಕರಣಗಳು ಪ್ರತಿವರ್ಷ ಹೆಚ್ಚಾಗುತ್ತಲೇ ಸಾಗುತ್ತಿವೆ. ಆದರೆ ಸೆಲೆಬ್ರಟಿಗಳು ಆತ್ಮಹತ್ಯೆ ಮಾಡಿಕೊಂಡಾಗ ಹೆಚ್ಚು ಚರ್ಚೆಗೆ ಬರುತ್ತವೆ. ಆತ್ಮಹತ್ಯೆ ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ.

ಓಡುತ್ತಿರುವ ಈ ಜಗತ್ತಿನಲ್ಲಿ ಯಾರಿಗೂ ಸಮಯವೇ ಇಲ್ಲ ಎಂಬ ಮಾತಿದೆ. ಬಯಸಿದ್ದು ಸಿಗದಿರುವುದು, ಅವಮಾನ ಸಹಿಸಿಕೊಳ್ಳದಿರುವುದು, ಕೆಲಸದ ಒತ್ತಡ, ಖಿನ್ನತೆ, ಕುಟುಂಬದಿಂದ ದೂರದಲ್ಲಿರುವುದು, ಸ್ನೇಹಿತರ ಚಿಂತೆ, ಆರೋಗ್ಯದ ಕಡೆ ಗಮನ ಕೊಡದಿರುವುದು ಹಣಕಾಸು ಮತ್ತು ಕೆಲಸದ ಹೊರೆ, ಜೊತೆಗೆ ಭವಿಷ್ಯದ ಅನಿಶ್ಚಿತತೆಯ ಬಗ್ಗೆ ಚಿಂತೆ ಒಂದಾ, ಎರಡಾ… ಸಮಸ್ಯೆಗಳ ಆಗರವನ್ನೇ ಮನುಷ್ಯ ತಾನಾಗಿಯೇ ಕಟ್ಟಿಕೊಂಡಿದ್ದಾನೆ ಇವುಗಳಿಂದ ಹೊರ ಬರಲಾಗದೇ ಆತ್ಮಹತ್ಯೆಗೆ ಶರಣಾಗುತ್ತಾನೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಹಾಗಾದರೇ ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಪರಿಹಾರವೇ..? ಖಂಡಿತ ಇಲ್ಲ. ಮನುಷ್ಯ ಹುಟ್ಟಲೂ ಸಹ ಹೋರಾಟ ನಡೆಸಿರುತ್ತಾನೆ. ಅಂತಹದರಲ್ಲಿ ಜೀವನದ ಸಮಸ್ಯೆಗಳು ಎಂದಿಗೂ ದೊಡ್ಡದಲ್ಲ. ಪ್ರತಿ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಆದರೆ ಕೋಪ, ಖಿನ್ನತೆಯಲ್ಲಿ ನಿರ್ಧಾರ ತೆಗೆದುಕೊಳ್ಳಬಾರದು ಅಷ್ಟೇ. ಇಂದು ದೊಡ್ಡ ಬೆಟ್ಟವಾಗಿ ಕಾಣುವ ಸಮಸ್ಯೆ, ನಾಳೆ ಕುಳಿತು ಯೋಚಿಸಿದರೇ ಅದು ಸಮಸ್ಯೆಯೇ ಅಲ್ಲ ಎನ್ನಿಸಬಹುದು.

ಇತ್ತಿಚೆಗೆ ಭಾರಿ ಸದ್ದು ಮಾಡಿದ ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯೋ ಅಲ್ಲವೋ ಎಂಬುದರ ಕುರಿತು ದೊಡ್ಡ ಚರ್ಚೆಯೆಬ್ಬಿಸಿದೆ. ಆತ ತಾನು ಖಿನ್ನತೆಯಿಂದ ಬಳಲುತ್ತಿದೆ ಎಂದು ಆತನೇ ಹೇಳಿದರೂ ಕೂಡ ಪ್ರಕರಣ ಬೇರೆಡೆಗೆ ಹಾದಿ ತಪ್ಪುತ್ತಿದೆ. ಇಲ್ಲಿ ನಾವು ಪ್ರಾಮುಖ್ಯತೆ ನೀಡಬೇಕಾಗಿದದ್ದು, ಮಾನಸಿಕ ಖಿನ್ನತೆ ಜನರ ಜೀವವನ್ನು ಹೇಗೆ ಸಾವಿನೆಡೆಗೆ ತಳ್ಳುತ್ತದೆ ಎಂಬ ವಿಚಾರದ ಬಗ್ಗೆ. ನಾವು ಈ ಪ್ರಕರಣದಿಂದ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬಹುದಾಗಿತ್ತು. ಮಾನಸಿಕ ಖಿನ್ನತೆಗೆ ಬಡವ, ಶ್ರೀಮಂತ ಎಂಬ ಭೇದವಿಲ್ಲ ಎಂಬುದನ್ನು ಅರಿಯಬೇಕು. ಯಾವುದೇ ಜಾತಿ, ವಯಸ್ಸು, ವರ್ಗ, ವರ್ಣಗಳ ಭೇದವಿಲ್ಲದೆ ಮುಂದುವರಿದ ಹಾಗೆ ಜಗತ್ತೇ ಎದುರಿಸುತ್ತಿರುವ ಅತೀ ಅಪಾಯಕಾರಿ ಪಿಡುಗು ಈ ಆತ್ಮಹತ್ಯೆ.

ಕೊವೀಡ್ ಸಾಂಕ್ರಾಮಿಕದಿಂದಾಗಿ ಈ ವರ್ಷ ವಿಶ್ವ ಆತ್ಮಹತ್ಯೆ ತಡೆ ದಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಮಾನಸಿಕ ಖಿನ್ನತೆಯನ್ನು ತಪ್ಪಿಸಲು, ನಿಯಂತ್ರಿಸಲು ಈ ಪರಿಸ್ಥಿತಿ ಮತ್ತೊಮ್ಮೆ ಜಾಗತಿಕವಾಗಿ, ರಾಷ್ಟ್ರೀಯವಾಗಿ ಮತ್ತು ಸ್ಥಳೀಯ ಮಟ್ಟದಲ್ಲೂ ಜಾಗೃತಿ ಮೂಡಿಸುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಒತ್ತಿ ಹೇಳುತ್ತದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿಗೆ ಕಾರಣ ತಿಳಿಯಬೇಕಾದರೆ ಬಾಲಿವುಡ್ ಎಂಬ ಚಕ್ರವ್ಯೂಹ ಅರಿಯಿರಿ..

ಕೊರೊನಾದ ಭಾವನಾತ್ಮಕ ಪರಿಣಾಮವನ್ನು ತಿಳಿಯಲು ಮಾನಸಿಕ ಆರೋಗ್ಯ ಮತ್ತು ವರ್ತನೆಯ ವಿಜ್ಞಾನ ಇಲಾಖೆ, ಮ್ಯಾಕ್ಸ್ ಹೆಲ್ತ್‌ಕೇರ್ (ನವದೆಹಲಿ) ನಡೆಸಿದ ವೆಬ್ ಆಧಾರಿತ ಅಧ್ಯಯನದ ಪ್ರಕಾರ, ಭಾರತದಾದ್ಯಂತ ಒಟ್ಟು 1,069 ಪ್ರತಿಕ್ರಿಯೆಗಳಲ್ಲಿ 25 ಪ್ರತಿಶತದಷ್ಟು ಜನರಲ್ಲಿ ಸಾವು ಮತ್ತು ಆತ್ಮಹತ್ಯೆಯ ಕಲ್ಪನೆ ಇದ್ದರೆ, ಇನ್ನು ಶೇಕಡಾ 10 ರಷ್ಟು ಜನರಿಗೆ ಆಗ್ಗಾಗ್ಗೆ ಆತ್ಮಹತ್ಯೆ ಬಗ್ಗೆ ಆಲೋಚನೆ ಬರುತ್ತದೆ ಎಂದು ತಿಳಿದುಬಂದಿದೆ.

ದೇಶದಲ್ಲಿ 2015ರಿಂದ 2019ರ 5 ವರ್ಷಗಳ ತುಲನಾತ್ಮಕ ವರದಿ ಪ್ರಕಾರ ಪ್ರತಿವರ್ಷ 1.33 ಲಕ್ಷ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ ತಿಳಿಸಿದೆ. 2019ರಲ್ಲಿ ದೇಶದಲ್ಲಿ 1.36 ಲಕ್ಷ ಆತ್ಮಹತ್ಯೆ ಸಂಭವಿಸಿವೆ. ಅತ್ಯಧಿಕ ಆತ್ಮಹತ್ಯೆ ಪ್ರಕರಣಗಳು ಸಂಭವಿಸಿರುವುದು ಮಹಾರಾಷ್ಟ್ರದಲ್ಲಿ.

ಇನ್ನು ರಾಜ್ಯದಲ್ಲಿ ನೋಡುವುದಾದರೇ 5 ವರ್ಷಗಳ ಅವಧಿಯಲ್ಲಿ 56,035 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ ಶೇಕಡಾ 75ರಷ್ಟು ಮಂದಿ ಪುರುಷರು ಮತ್ತು ಶೇಕಡಾ 24.96 ಮಂದಿ ಮಹಿಳೆಯರಿದ್ದಾರೆ. ಅನಾರೋಗ್ಯ ಜನರ ಆತ್ಮಹತ್ಯೆಗಳಿಗೆ ಪ್ರಮುಖ ಕಾರಣ ಎನ್ನಲಾಗಿದೆ.

PC: Rastriya Khabars

ಇದನ್ನೂ ಓದಿ: ಸಾವಿಗೆ ಮುನ್ನ ತಾಯಿ ನೆನೆದು, ಕ್ಷಣಿಕ ಜೀವನ ಎಂದಿದ್ದ ಸುಶಾಂತ್ ಸಿಂಗ್ ರಜಪೂತ್

ಆತ್ಮಹತ್ಯೆ ತಡೆಗಟ್ಟುವಲ್ಲಿ ನಮ್ಮ ಪಾತ್ರವೇನು..?

  • ಒಬ್ಬ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ, ಸಾವಿನ ಕುರಿತು ಮಾತಾಡುತ್ತಿದ್ದಾನೆಂದರೆ ಅವರನ್ನು ಒಂದೆರಡು ಗಂಟೆ, ಒಂದೆರಡು ದಿನಗಳ ಮಟ್ಟಿಗೆ ನಮ್ಮ ಆಪ್ತ ಪರಿಧಿಯೊಳಗೆ ಇಟ್ಟುಕೊಳ್ಳುವುದು.
  • ಖಿನ್ನತೆಯಲ್ಲಿರುವವರಿಗೆ ಆಪ್ತ ಸಮಾಲೋಚನೆ ಕೊಡಿಸಲು ಪ್ರಯತ್ನಿಸುವುದು.
  • ಅತಿಯಾಗಿ ಒಂಟಿತನ ಬಯಸುವವರ ಮೇಲೆ ನಿಗಾ ಇಡುವುದು
  • ಇನ್ನೊಬ್ಬರ ಸಮಸ್ಯೆಗೆ, ನೋವಿಗೆ ಕಿವಿಯಾಗುವ ಕನಿಷ್ಠ ಹೃದಯವಂತಿಕೆ ತೋರಿಸೋದು
  • ಸಮಸ್ಯೆ ತಿಳಿದು, ಸರಿಯಾದ ಚಿಕಿತ್ಸೆ ದೊರೆಯುವಂತೆ ಮಾಡುವುದು. ಚಿಕಿತ್ಸೆ ಪಡೆಯಲು ಅವರನ್ನು ಓಲೈಸುವುದು.
  • ಜೀವನದಲ್ಲಿ ಗೆಲ್ಲುವುದೇ ಮುಖ್ಯವಲ್ಲ ಎಂಬುದನ್ನು ಅರ್ಥ ಮಾಡಿಸಿದರೇ ಆತ್ಮಹತ್ಯೆಯೆಂಬ ಯೋಚನೆಯಿಂದ ಮುಕ್ಕಾಲು ಭಾಗ ಗೆದ್ದಂತೆಯೇ.
  • ಜೀವದ ಮಹತ್ವವನ್ನು ಅರ್ಥ ಮಾಡಿಸುವುದು.
  • ತನ್ನ ಕುಟುಂಬ, ಸ್ನೇಹ ಬಳಗದ ಜೊತೆ ಆದಷ್ಟು ಸಂಪರ್ಕದಲ್ಲಿರುವಂತೆ ಮಾಡುವುದು
  • ಉತ್ತಮ ಹವ್ಯಾಸಗಳನ್ನು, ಸೃಜನಾತ್ಮಕ ಚಟುವಟಿಕೆಗಳನ್ನು ಪರಿಚಯಿಸುವುದು. ಇದರಿಂದ ಮನಸ್ಸು ಬೇರೆಡೆಗೆ ಹರಿಯುತ್ತದೆ.
  • ಆತ್ಮಹತ್ಯೆ ಬಗ್ಗೆ ತಿಳಿದಷ್ಟು ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು.

ಮನುಷ್ಯ ತನ್ನ ಜೀವಿತಾವಧಿಯಲ್ಲಿ ಕನಿಷ್ಠ 5 ಬಾರಿಯಾದರೂ ಆತ್ಮಹತ್ಯೆ ಬಗ್ಗೆ ಯೋಚಿಸುತ್ತಾನೆ ಎಂದು ಸಂಶೋಧನೆಯೊಂದು ತಿಳಿಸುತ್ತದೆ. ಇಂದಿನ ಯುಗದಲ್ಲಿ ಮನುಷ್ಯ ಸಂಬಂಧಗಳಿಂದ ಕೊಂಡಿ ಕಳಚಿಕೊಂಡು ಓಡುತ್ತಿರುವವರಿಗೆ ಈ ದಿನದ ಅಗತ್ಯತೆಯ ಅರಿವಾಗಬೇಕಿದೆ.

ತನ್ನ ಹುಟ್ಟು ತನ್ನ ಆಯ್ಕೆ ಆಗದಿದ್ದಾಗ ಸಾವನ್ನು ತನ್ನಿಷ್ಟದಂತೆ ಆಯ್ಕೆ ಮಾಡುವುದು ಅಪರಾಧವೂ, ಪ್ರಕೃತಿಗೆ ವಿರೋದ್ಧವೂ ಹೌದು. ಹೀಗಾಗಿಯೇ ಆತ್ಮಹತ್ಯೆಯನ್ನು ಅಪರಾಧ ಎಂದು ಪರಿಗಣಿಸಲಾಗಿದೆ. ಆತ್ಮಹತ್ಯೆಗೆ ಮುಂದಾಗುವ ವ್ಯಕ್ತಿ ಯಾವುದಾದರೂ ರೂಪದಲ್ಲಿ ಸೂಚನೆ ನೀಡಿಯೇ ಇರುತ್ತಾನೆ. ಅದನ್ನು ಗಮನಿಸುವ ತಾಳ್ಮೆ, ಸೂಕ್ಷ ಮನಸ್ಸು, ತಮ್ಮ ಸುತ್ತಲಿನವರ ಬಗ್ಗೆ ಕೊಂಚ ಕಾಳಜಿ ಇದ್ದರೂ ಸಾಕು ಅದೇಷ್ಟೋ ಆತ್ಮಹತ್ಯೆಗಳು ತಪ್ಪುತ್ತವೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...