Homeಮುಖಪುಟಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ಕರ್ನಾಟಕದಲ್ಲಿ 5 ವರ್ಷಗಳ ಅವಧಿಯಲ್ಲಿ 56,035 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ ಶೇಕಡಾ 75ರಷ್ಟು ಮಂದಿ ಪುರುಷರು ಮತ್ತು ಶೇಕಡಾ 24.96 ಮಂದಿ ಮಹಿಳೆಯರಿದ್ದಾರೆ.

- Advertisement -
- Advertisement -

ಪ್ರತಿ ವರ್ಷ ಸೆ.10ರಂದು ವಿಶ್ವ ಆತ್ಮಹತ್ಯೆ ತಡೆ ದಿನ ಆಚರಿಸಲಾಗುತ್ತದೆ. ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಆಚರಣೆ ಮಾಡಲಾಗುತ್ತದೆ. ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್ (ಐಎಎಸ್ಪಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆಯು ಸೆಪ್ಟೆಂಬರ್ 10, 2003 ರಂದು ಈ ದಿನವನ್ನು ಜಾರಿಗೆ ತಂದವು. ಮೊದಲ ಬಾರಿ ವಿಶ್ವ ಆತ್ಮಹತ್ಯೆ ವರದಿಯನ್ನು 2014 ರಲ್ಲಿ ವಿಶ್ವಸಂಸ್ಥೆ ಬಿಡುಗಡೆ ಮಾಡಿತು.

ಆತ್ಮಹತ್ಯೆ ಪ್ರಕರಣಗಳು ಪ್ರತಿವರ್ಷ ಹೆಚ್ಚಾಗುತ್ತಲೇ ಸಾಗುತ್ತಿವೆ. ಆದರೆ ಸೆಲೆಬ್ರಟಿಗಳು ಆತ್ಮಹತ್ಯೆ ಮಾಡಿಕೊಂಡಾಗ ಹೆಚ್ಚು ಚರ್ಚೆಗೆ ಬರುತ್ತವೆ. ಆತ್ಮಹತ್ಯೆ ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ.

ಓಡುತ್ತಿರುವ ಈ ಜಗತ್ತಿನಲ್ಲಿ ಯಾರಿಗೂ ಸಮಯವೇ ಇಲ್ಲ ಎಂಬ ಮಾತಿದೆ. ಬಯಸಿದ್ದು ಸಿಗದಿರುವುದು, ಅವಮಾನ ಸಹಿಸಿಕೊಳ್ಳದಿರುವುದು, ಕೆಲಸದ ಒತ್ತಡ, ಖಿನ್ನತೆ, ಕುಟುಂಬದಿಂದ ದೂರದಲ್ಲಿರುವುದು, ಸ್ನೇಹಿತರ ಚಿಂತೆ, ಆರೋಗ್ಯದ ಕಡೆ ಗಮನ ಕೊಡದಿರುವುದು ಹಣಕಾಸು ಮತ್ತು ಕೆಲಸದ ಹೊರೆ, ಜೊತೆಗೆ ಭವಿಷ್ಯದ ಅನಿಶ್ಚಿತತೆಯ ಬಗ್ಗೆ ಚಿಂತೆ ಒಂದಾ, ಎರಡಾ… ಸಮಸ್ಯೆಗಳ ಆಗರವನ್ನೇ ಮನುಷ್ಯ ತಾನಾಗಿಯೇ ಕಟ್ಟಿಕೊಂಡಿದ್ದಾನೆ ಇವುಗಳಿಂದ ಹೊರ ಬರಲಾಗದೇ ಆತ್ಮಹತ್ಯೆಗೆ ಶರಣಾಗುತ್ತಾನೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಹಾಗಾದರೇ ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಪರಿಹಾರವೇ..? ಖಂಡಿತ ಇಲ್ಲ. ಮನುಷ್ಯ ಹುಟ್ಟಲೂ ಸಹ ಹೋರಾಟ ನಡೆಸಿರುತ್ತಾನೆ. ಅಂತಹದರಲ್ಲಿ ಜೀವನದ ಸಮಸ್ಯೆಗಳು ಎಂದಿಗೂ ದೊಡ್ಡದಲ್ಲ. ಪ್ರತಿ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಆದರೆ ಕೋಪ, ಖಿನ್ನತೆಯಲ್ಲಿ ನಿರ್ಧಾರ ತೆಗೆದುಕೊಳ್ಳಬಾರದು ಅಷ್ಟೇ. ಇಂದು ದೊಡ್ಡ ಬೆಟ್ಟವಾಗಿ ಕಾಣುವ ಸಮಸ್ಯೆ, ನಾಳೆ ಕುಳಿತು ಯೋಚಿಸಿದರೇ ಅದು ಸಮಸ್ಯೆಯೇ ಅಲ್ಲ ಎನ್ನಿಸಬಹುದು.

ಇತ್ತಿಚೆಗೆ ಭಾರಿ ಸದ್ದು ಮಾಡಿದ ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯೋ ಅಲ್ಲವೋ ಎಂಬುದರ ಕುರಿತು ದೊಡ್ಡ ಚರ್ಚೆಯೆಬ್ಬಿಸಿದೆ. ಆತ ತಾನು ಖಿನ್ನತೆಯಿಂದ ಬಳಲುತ್ತಿದೆ ಎಂದು ಆತನೇ ಹೇಳಿದರೂ ಕೂಡ ಪ್ರಕರಣ ಬೇರೆಡೆಗೆ ಹಾದಿ ತಪ್ಪುತ್ತಿದೆ. ಇಲ್ಲಿ ನಾವು ಪ್ರಾಮುಖ್ಯತೆ ನೀಡಬೇಕಾಗಿದದ್ದು, ಮಾನಸಿಕ ಖಿನ್ನತೆ ಜನರ ಜೀವವನ್ನು ಹೇಗೆ ಸಾವಿನೆಡೆಗೆ ತಳ್ಳುತ್ತದೆ ಎಂಬ ವಿಚಾರದ ಬಗ್ಗೆ. ನಾವು ಈ ಪ್ರಕರಣದಿಂದ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬಹುದಾಗಿತ್ತು. ಮಾನಸಿಕ ಖಿನ್ನತೆಗೆ ಬಡವ, ಶ್ರೀಮಂತ ಎಂಬ ಭೇದವಿಲ್ಲ ಎಂಬುದನ್ನು ಅರಿಯಬೇಕು. ಯಾವುದೇ ಜಾತಿ, ವಯಸ್ಸು, ವರ್ಗ, ವರ್ಣಗಳ ಭೇದವಿಲ್ಲದೆ ಮುಂದುವರಿದ ಹಾಗೆ ಜಗತ್ತೇ ಎದುರಿಸುತ್ತಿರುವ ಅತೀ ಅಪಾಯಕಾರಿ ಪಿಡುಗು ಈ ಆತ್ಮಹತ್ಯೆ.

ಕೊವೀಡ್ ಸಾಂಕ್ರಾಮಿಕದಿಂದಾಗಿ ಈ ವರ್ಷ ವಿಶ್ವ ಆತ್ಮಹತ್ಯೆ ತಡೆ ದಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಮಾನಸಿಕ ಖಿನ್ನತೆಯನ್ನು ತಪ್ಪಿಸಲು, ನಿಯಂತ್ರಿಸಲು ಈ ಪರಿಸ್ಥಿತಿ ಮತ್ತೊಮ್ಮೆ ಜಾಗತಿಕವಾಗಿ, ರಾಷ್ಟ್ರೀಯವಾಗಿ ಮತ್ತು ಸ್ಥಳೀಯ ಮಟ್ಟದಲ್ಲೂ ಜಾಗೃತಿ ಮೂಡಿಸುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಒತ್ತಿ ಹೇಳುತ್ತದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿಗೆ ಕಾರಣ ತಿಳಿಯಬೇಕಾದರೆ ಬಾಲಿವುಡ್ ಎಂಬ ಚಕ್ರವ್ಯೂಹ ಅರಿಯಿರಿ..

ಕೊರೊನಾದ ಭಾವನಾತ್ಮಕ ಪರಿಣಾಮವನ್ನು ತಿಳಿಯಲು ಮಾನಸಿಕ ಆರೋಗ್ಯ ಮತ್ತು ವರ್ತನೆಯ ವಿಜ್ಞಾನ ಇಲಾಖೆ, ಮ್ಯಾಕ್ಸ್ ಹೆಲ್ತ್‌ಕೇರ್ (ನವದೆಹಲಿ) ನಡೆಸಿದ ವೆಬ್ ಆಧಾರಿತ ಅಧ್ಯಯನದ ಪ್ರಕಾರ, ಭಾರತದಾದ್ಯಂತ ಒಟ್ಟು 1,069 ಪ್ರತಿಕ್ರಿಯೆಗಳಲ್ಲಿ 25 ಪ್ರತಿಶತದಷ್ಟು ಜನರಲ್ಲಿ ಸಾವು ಮತ್ತು ಆತ್ಮಹತ್ಯೆಯ ಕಲ್ಪನೆ ಇದ್ದರೆ, ಇನ್ನು ಶೇಕಡಾ 10 ರಷ್ಟು ಜನರಿಗೆ ಆಗ್ಗಾಗ್ಗೆ ಆತ್ಮಹತ್ಯೆ ಬಗ್ಗೆ ಆಲೋಚನೆ ಬರುತ್ತದೆ ಎಂದು ತಿಳಿದುಬಂದಿದೆ.

ದೇಶದಲ್ಲಿ 2015ರಿಂದ 2019ರ 5 ವರ್ಷಗಳ ತುಲನಾತ್ಮಕ ವರದಿ ಪ್ರಕಾರ ಪ್ರತಿವರ್ಷ 1.33 ಲಕ್ಷ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ ತಿಳಿಸಿದೆ. 2019ರಲ್ಲಿ ದೇಶದಲ್ಲಿ 1.36 ಲಕ್ಷ ಆತ್ಮಹತ್ಯೆ ಸಂಭವಿಸಿವೆ. ಅತ್ಯಧಿಕ ಆತ್ಮಹತ್ಯೆ ಪ್ರಕರಣಗಳು ಸಂಭವಿಸಿರುವುದು ಮಹಾರಾಷ್ಟ್ರದಲ್ಲಿ.

ಇನ್ನು ರಾಜ್ಯದಲ್ಲಿ ನೋಡುವುದಾದರೇ 5 ವರ್ಷಗಳ ಅವಧಿಯಲ್ಲಿ 56,035 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ ಶೇಕಡಾ 75ರಷ್ಟು ಮಂದಿ ಪುರುಷರು ಮತ್ತು ಶೇಕಡಾ 24.96 ಮಂದಿ ಮಹಿಳೆಯರಿದ್ದಾರೆ. ಅನಾರೋಗ್ಯ ಜನರ ಆತ್ಮಹತ್ಯೆಗಳಿಗೆ ಪ್ರಮುಖ ಕಾರಣ ಎನ್ನಲಾಗಿದೆ.

PC: Rastriya Khabars

ಇದನ್ನೂ ಓದಿ: ಸಾವಿಗೆ ಮುನ್ನ ತಾಯಿ ನೆನೆದು, ಕ್ಷಣಿಕ ಜೀವನ ಎಂದಿದ್ದ ಸುಶಾಂತ್ ಸಿಂಗ್ ರಜಪೂತ್

ಆತ್ಮಹತ್ಯೆ ತಡೆಗಟ್ಟುವಲ್ಲಿ ನಮ್ಮ ಪಾತ್ರವೇನು..?

  • ಒಬ್ಬ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ, ಸಾವಿನ ಕುರಿತು ಮಾತಾಡುತ್ತಿದ್ದಾನೆಂದರೆ ಅವರನ್ನು ಒಂದೆರಡು ಗಂಟೆ, ಒಂದೆರಡು ದಿನಗಳ ಮಟ್ಟಿಗೆ ನಮ್ಮ ಆಪ್ತ ಪರಿಧಿಯೊಳಗೆ ಇಟ್ಟುಕೊಳ್ಳುವುದು.
  • ಖಿನ್ನತೆಯಲ್ಲಿರುವವರಿಗೆ ಆಪ್ತ ಸಮಾಲೋಚನೆ ಕೊಡಿಸಲು ಪ್ರಯತ್ನಿಸುವುದು.
  • ಅತಿಯಾಗಿ ಒಂಟಿತನ ಬಯಸುವವರ ಮೇಲೆ ನಿಗಾ ಇಡುವುದು
  • ಇನ್ನೊಬ್ಬರ ಸಮಸ್ಯೆಗೆ, ನೋವಿಗೆ ಕಿವಿಯಾಗುವ ಕನಿಷ್ಠ ಹೃದಯವಂತಿಕೆ ತೋರಿಸೋದು
  • ಸಮಸ್ಯೆ ತಿಳಿದು, ಸರಿಯಾದ ಚಿಕಿತ್ಸೆ ದೊರೆಯುವಂತೆ ಮಾಡುವುದು. ಚಿಕಿತ್ಸೆ ಪಡೆಯಲು ಅವರನ್ನು ಓಲೈಸುವುದು.
  • ಜೀವನದಲ್ಲಿ ಗೆಲ್ಲುವುದೇ ಮುಖ್ಯವಲ್ಲ ಎಂಬುದನ್ನು ಅರ್ಥ ಮಾಡಿಸಿದರೇ ಆತ್ಮಹತ್ಯೆಯೆಂಬ ಯೋಚನೆಯಿಂದ ಮುಕ್ಕಾಲು ಭಾಗ ಗೆದ್ದಂತೆಯೇ.
  • ಜೀವದ ಮಹತ್ವವನ್ನು ಅರ್ಥ ಮಾಡಿಸುವುದು.
  • ತನ್ನ ಕುಟುಂಬ, ಸ್ನೇಹ ಬಳಗದ ಜೊತೆ ಆದಷ್ಟು ಸಂಪರ್ಕದಲ್ಲಿರುವಂತೆ ಮಾಡುವುದು
  • ಉತ್ತಮ ಹವ್ಯಾಸಗಳನ್ನು, ಸೃಜನಾತ್ಮಕ ಚಟುವಟಿಕೆಗಳನ್ನು ಪರಿಚಯಿಸುವುದು. ಇದರಿಂದ ಮನಸ್ಸು ಬೇರೆಡೆಗೆ ಹರಿಯುತ್ತದೆ.
  • ಆತ್ಮಹತ್ಯೆ ಬಗ್ಗೆ ತಿಳಿದಷ್ಟು ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು.

ಮನುಷ್ಯ ತನ್ನ ಜೀವಿತಾವಧಿಯಲ್ಲಿ ಕನಿಷ್ಠ 5 ಬಾರಿಯಾದರೂ ಆತ್ಮಹತ್ಯೆ ಬಗ್ಗೆ ಯೋಚಿಸುತ್ತಾನೆ ಎಂದು ಸಂಶೋಧನೆಯೊಂದು ತಿಳಿಸುತ್ತದೆ. ಇಂದಿನ ಯುಗದಲ್ಲಿ ಮನುಷ್ಯ ಸಂಬಂಧಗಳಿಂದ ಕೊಂಡಿ ಕಳಚಿಕೊಂಡು ಓಡುತ್ತಿರುವವರಿಗೆ ಈ ದಿನದ ಅಗತ್ಯತೆಯ ಅರಿವಾಗಬೇಕಿದೆ.

ತನ್ನ ಹುಟ್ಟು ತನ್ನ ಆಯ್ಕೆ ಆಗದಿದ್ದಾಗ ಸಾವನ್ನು ತನ್ನಿಷ್ಟದಂತೆ ಆಯ್ಕೆ ಮಾಡುವುದು ಅಪರಾಧವೂ, ಪ್ರಕೃತಿಗೆ ವಿರೋದ್ಧವೂ ಹೌದು. ಹೀಗಾಗಿಯೇ ಆತ್ಮಹತ್ಯೆಯನ್ನು ಅಪರಾಧ ಎಂದು ಪರಿಗಣಿಸಲಾಗಿದೆ. ಆತ್ಮಹತ್ಯೆಗೆ ಮುಂದಾಗುವ ವ್ಯಕ್ತಿ ಯಾವುದಾದರೂ ರೂಪದಲ್ಲಿ ಸೂಚನೆ ನೀಡಿಯೇ ಇರುತ್ತಾನೆ. ಅದನ್ನು ಗಮನಿಸುವ ತಾಳ್ಮೆ, ಸೂಕ್ಷ ಮನಸ್ಸು, ತಮ್ಮ ಸುತ್ತಲಿನವರ ಬಗ್ಗೆ ಕೊಂಚ ಕಾಳಜಿ ಇದ್ದರೂ ಸಾಕು ಅದೇಷ್ಟೋ ಆತ್ಮಹತ್ಯೆಗಳು ತಪ್ಪುತ್ತವೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....