Homeಅಂತರಾಷ್ಟ್ರೀಯಮುಂದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ: ಸೌದಿ ರಾಜಕುಮಾರ ಸಲ್ಮಾನ್ ಕಳವಳ

ಮುಂದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ: ಸೌದಿ ರಾಜಕುಮಾರ ಸಲ್ಮಾನ್ ಕಳವಳ

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ. ವಿವಿಧ ರಾಷ್ಟ್ರಗಳಿಗೆ ತೈಲ ರಫ್ತು ಮಾಡುವ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದು. ಇರಾನ್ ದೇಶದ ಆಕ್ರಮಣಕಾರಿ ನೀತಿಯನ್ನು ತಡೆಯದಿದ್ದರೆ, ಸಮಸ್ಯೆ ಉಲ್ಬಣಗೊಳ್ಳಲ್ಲಿದ್ದು ಹಿಂದೆಂದೂ ಕಾಣದ ರೀತಿಯಲ್ಲಿ ತೈಲಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಸೌದಿ ಅರೆಬಿಯಾದ ರಾಜ ಮಹಮ್ಮದ್ ಬಿನ್ ಸಲ್ಮಾನ್ ಕಳವಳ ವ್ಯಕ್ತಪಡಿಸಿದ್ದಾರೆ.

60 ನಿಮಿಷದ ಸಿಬಿಎಸ್ ಕಾರ್ಯಕ್ರಮದ ಸಂದರ್ಶನದಲ್ಲಿ ಮಾತನಾಡಿದ ಸೌದಿ ಅರೆಬಿಯಾ ರಾಜ ಮಹಮ್ಮದ್, ವರ್ಷದ ಹಿಂದೆ ಸೌದಿ ಕಾರ್ಯಕರ್ತರಿಂದ ಪತ್ರಕರ್ತ ಜಮಾಲ್ ಖುಶೋಗಿ ಹತ್ಯೆಯಾಗಿರುವುದರ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತೇನೆ ಆದರೆ ಖುಶೋಗಿ ಅವರ ಹತ್ಯೆಗೆ ನಾನು ಆದೇಶಿಸಿದ್ದೆ ಎಂಬ ಸುದ್ದಿ ಸತ್ಯಕ್ಕೆ ದೂರ ಎಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ಸುದ್ದಿಯಾದ ಖುಶೋಗಿ ಹತ್ಯೆ ತಮ್ಮ ಖ್ಯಾತಿಗೆ ಧಕ್ಕೆ ತಂದಿದೆ ಎಂದು ಹೇಳಿದರು.

ಈಗ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಒಂದು ಸಮಸ್ಯೆಯಾಗಿದೆ. ಸೆಪ್ಟಂಬರ್ 14ರಂದು ಸೌದಿ ತೈಲೋದ್ಯಮದ ಹೃದಯ ಭಾಗದ ಮೇಲೆ ನಡೆದ ದ್ರೋನ್ ದಾಳಿಯ ನಂತರ ಇದು ಮತ್ತಷ್ಟು ವಿಸ್ತಾರಗೊಂಡಿದೆ. ಜಾಗತಿಕ ಮಟ್ಟದಲ್ಲಿ ವಿವಿಧ ರಾಷ್ಟ್ರಗಳು ಒಂದಾಗಿ ಇರಾನ್ ದೇಶದ ತೈಲ ಪ್ರತಿಗಾಮಿ ನೀತಿಯನ್ನು ತಡೆಯದಿದ್ದರೆ, ಸಮಸ್ಯೆ ಉಲ್ಬಣಗೊಳ್ಳಲಿದೆ. ಇದು ತೈಲ ಸರಬರಾಜಿಗೆ ಹೆಚ್ಚು ಅಪಾಯಕಾರಿ. ಹಾಗಾದಲ್ಲಿ ನಮ್ಮ ಜೀವಿತಾವಧಿಯಲ್ಲಿ ಹಿಂದೆಂದೂ ಕಾಣದ ಮಟ್ಟಿಗೆ ತೈಲಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

ಸೌದಿ ತೈಲೋದ್ಯಮದ ಮೇಲೆ ಸೆಪ್ಟಂಬರ್ 14ರಂದು ಹೌಥಿ ಮಿಲಿಟೆಂಟ್ ಗುಂಪುಗಳು ನಡೆಸಿದ ದ್ರೋನ್ ದಾಳಿಯಿಂದ ತೈಲೋಧ್ಯಮದಲ್ಲಿ ಶೇಕಡಾ 5ಕ್ಕಿಂದ ಹೆಚ್ಚು ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ ಎಂದು ಅಮೆರಿಕದ ಕಾರ್ಯದರ್ಶಿ ಮೈಕ್ ಪೊಂಪಿಯೋ ಹೇಳಿಕೆಯನ್ನು ಸೌದಿ ರಾಜಕುಮಾರ ಒಪ್ಪಿಕೊಂಡಿದ್ದಾರೆ. ಇದು ಇರಾನ್ ವಿರುದ್ಧ ಯುದ್ಧದ ಮುನ್ಸೂಚನೆ ನೀಡುತ್ತಿದೆ. ಆದರೆ ಇರಾನ್ ವಿರುದ್ಧ ಯುದ್ಧ ಮಾಡುವುದೊಂದೇ ಸಮಸ್ಯೆಗೆ ಪರಿಹಾರವಲ್ಲ. ಶಾಂತಿಯುತವಾಗಿ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಒಂದು ವೇಳೆ ಸೌದಿ ಅರೆಬಿಯಾ ಹಾಗೂ ಇರಾನ್ ಮಧ್ಯೆ ಯುದ್ಧವಾದರೆ ಅದು ಜಾಗತಿಕ ಆರ್ಥಿಕ ಅಭಿವೃದ್ಧಿ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಮಿಲಿಟರಿ ಶಕ್ತಿ ಬಳಕೆಗಿಂತ ಶಾಂತಿಯುತ ಚರ್ಚೆಯೇ ಇದಕ್ಕೆ ಪರಿಹಾರ ನೀಡಬಲ್ಲದು ಎಂದು ಅಭಿಪ್ರಾಯಪಟ್ಟರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಅಧ್ಯಕ್ಷ ಹಸನ್ ರೋಹಾನಿ ಅವರನ್ನು ಭೇಟಿಯಾಗಿ ತೆಹ್ರನ್ ನ್ಯೂಕ್ಲಿಯರ್ ಪ್ರೋಗ್ರಾಮ್ ಬಗ್ಗೆ ಹೊಸ ಒಪ್ಪಂದ ಮಾಡಿಕೊಳ್ಳಬೇಕು. ಮಧ್ಯ ಹಾಗೂ ಪೂರ್ವ ಏಷ್ಯಾ ಭಾಗದಲ್ಲಿ ಇದರ ಪ್ರಭಾವ ಬೀರುವಂತಾಗಬೇಕು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...