Homeಅಂತರಾಷ್ಟ್ರೀಯಮುಂದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ: ಸೌದಿ ರಾಜಕುಮಾರ ಸಲ್ಮಾನ್ ಕಳವಳ

ಮುಂದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ: ಸೌದಿ ರಾಜಕುಮಾರ ಸಲ್ಮಾನ್ ಕಳವಳ

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ. ವಿವಿಧ ರಾಷ್ಟ್ರಗಳಿಗೆ ತೈಲ ರಫ್ತು ಮಾಡುವ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದು. ಇರಾನ್ ದೇಶದ ಆಕ್ರಮಣಕಾರಿ ನೀತಿಯನ್ನು ತಡೆಯದಿದ್ದರೆ, ಸಮಸ್ಯೆ ಉಲ್ಬಣಗೊಳ್ಳಲ್ಲಿದ್ದು ಹಿಂದೆಂದೂ ಕಾಣದ ರೀತಿಯಲ್ಲಿ ತೈಲಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಸೌದಿ ಅರೆಬಿಯಾದ ರಾಜ ಮಹಮ್ಮದ್ ಬಿನ್ ಸಲ್ಮಾನ್ ಕಳವಳ ವ್ಯಕ್ತಪಡಿಸಿದ್ದಾರೆ.

60 ನಿಮಿಷದ ಸಿಬಿಎಸ್ ಕಾರ್ಯಕ್ರಮದ ಸಂದರ್ಶನದಲ್ಲಿ ಮಾತನಾಡಿದ ಸೌದಿ ಅರೆಬಿಯಾ ರಾಜ ಮಹಮ್ಮದ್, ವರ್ಷದ ಹಿಂದೆ ಸೌದಿ ಕಾರ್ಯಕರ್ತರಿಂದ ಪತ್ರಕರ್ತ ಜಮಾಲ್ ಖುಶೋಗಿ ಹತ್ಯೆಯಾಗಿರುವುದರ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತೇನೆ ಆದರೆ ಖುಶೋಗಿ ಅವರ ಹತ್ಯೆಗೆ ನಾನು ಆದೇಶಿಸಿದ್ದೆ ಎಂಬ ಸುದ್ದಿ ಸತ್ಯಕ್ಕೆ ದೂರ ಎಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ಸುದ್ದಿಯಾದ ಖುಶೋಗಿ ಹತ್ಯೆ ತಮ್ಮ ಖ್ಯಾತಿಗೆ ಧಕ್ಕೆ ತಂದಿದೆ ಎಂದು ಹೇಳಿದರು.

ಈಗ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಒಂದು ಸಮಸ್ಯೆಯಾಗಿದೆ. ಸೆಪ್ಟಂಬರ್ 14ರಂದು ಸೌದಿ ತೈಲೋದ್ಯಮದ ಹೃದಯ ಭಾಗದ ಮೇಲೆ ನಡೆದ ದ್ರೋನ್ ದಾಳಿಯ ನಂತರ ಇದು ಮತ್ತಷ್ಟು ವಿಸ್ತಾರಗೊಂಡಿದೆ. ಜಾಗತಿಕ ಮಟ್ಟದಲ್ಲಿ ವಿವಿಧ ರಾಷ್ಟ್ರಗಳು ಒಂದಾಗಿ ಇರಾನ್ ದೇಶದ ತೈಲ ಪ್ರತಿಗಾಮಿ ನೀತಿಯನ್ನು ತಡೆಯದಿದ್ದರೆ, ಸಮಸ್ಯೆ ಉಲ್ಬಣಗೊಳ್ಳಲಿದೆ. ಇದು ತೈಲ ಸರಬರಾಜಿಗೆ ಹೆಚ್ಚು ಅಪಾಯಕಾರಿ. ಹಾಗಾದಲ್ಲಿ ನಮ್ಮ ಜೀವಿತಾವಧಿಯಲ್ಲಿ ಹಿಂದೆಂದೂ ಕಾಣದ ಮಟ್ಟಿಗೆ ತೈಲಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

ಸೌದಿ ತೈಲೋದ್ಯಮದ ಮೇಲೆ ಸೆಪ್ಟಂಬರ್ 14ರಂದು ಹೌಥಿ ಮಿಲಿಟೆಂಟ್ ಗುಂಪುಗಳು ನಡೆಸಿದ ದ್ರೋನ್ ದಾಳಿಯಿಂದ ತೈಲೋಧ್ಯಮದಲ್ಲಿ ಶೇಕಡಾ 5ಕ್ಕಿಂದ ಹೆಚ್ಚು ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ ಎಂದು ಅಮೆರಿಕದ ಕಾರ್ಯದರ್ಶಿ ಮೈಕ್ ಪೊಂಪಿಯೋ ಹೇಳಿಕೆಯನ್ನು ಸೌದಿ ರಾಜಕುಮಾರ ಒಪ್ಪಿಕೊಂಡಿದ್ದಾರೆ. ಇದು ಇರಾನ್ ವಿರುದ್ಧ ಯುದ್ಧದ ಮುನ್ಸೂಚನೆ ನೀಡುತ್ತಿದೆ. ಆದರೆ ಇರಾನ್ ವಿರುದ್ಧ ಯುದ್ಧ ಮಾಡುವುದೊಂದೇ ಸಮಸ್ಯೆಗೆ ಪರಿಹಾರವಲ್ಲ. ಶಾಂತಿಯುತವಾಗಿ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಒಂದು ವೇಳೆ ಸೌದಿ ಅರೆಬಿಯಾ ಹಾಗೂ ಇರಾನ್ ಮಧ್ಯೆ ಯುದ್ಧವಾದರೆ ಅದು ಜಾಗತಿಕ ಆರ್ಥಿಕ ಅಭಿವೃದ್ಧಿ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಮಿಲಿಟರಿ ಶಕ್ತಿ ಬಳಕೆಗಿಂತ ಶಾಂತಿಯುತ ಚರ್ಚೆಯೇ ಇದಕ್ಕೆ ಪರಿಹಾರ ನೀಡಬಲ್ಲದು ಎಂದು ಅಭಿಪ್ರಾಯಪಟ್ಟರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಅಧ್ಯಕ್ಷ ಹಸನ್ ರೋಹಾನಿ ಅವರನ್ನು ಭೇಟಿಯಾಗಿ ತೆಹ್ರನ್ ನ್ಯೂಕ್ಲಿಯರ್ ಪ್ರೋಗ್ರಾಮ್ ಬಗ್ಗೆ ಹೊಸ ಒಪ್ಪಂದ ಮಾಡಿಕೊಳ್ಳಬೇಕು. ಮಧ್ಯ ಹಾಗೂ ಪೂರ್ವ ಏಷ್ಯಾ ಭಾಗದಲ್ಲಿ ಇದರ ಪ್ರಭಾವ ಬೀರುವಂತಾಗಬೇಕು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...