Homeಅಂತರಾಷ್ಟ್ರೀಯಮುಂದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ: ಸೌದಿ ರಾಜಕುಮಾರ ಸಲ್ಮಾನ್ ಕಳವಳ

ಮುಂದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ: ಸೌದಿ ರಾಜಕುಮಾರ ಸಲ್ಮಾನ್ ಕಳವಳ

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ. ವಿವಿಧ ರಾಷ್ಟ್ರಗಳಿಗೆ ತೈಲ ರಫ್ತು ಮಾಡುವ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದು. ಇರಾನ್ ದೇಶದ ಆಕ್ರಮಣಕಾರಿ ನೀತಿಯನ್ನು ತಡೆಯದಿದ್ದರೆ, ಸಮಸ್ಯೆ ಉಲ್ಬಣಗೊಳ್ಳಲ್ಲಿದ್ದು ಹಿಂದೆಂದೂ ಕಾಣದ ರೀತಿಯಲ್ಲಿ ತೈಲಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಸೌದಿ ಅರೆಬಿಯಾದ ರಾಜ ಮಹಮ್ಮದ್ ಬಿನ್ ಸಲ್ಮಾನ್ ಕಳವಳ ವ್ಯಕ್ತಪಡಿಸಿದ್ದಾರೆ.

60 ನಿಮಿಷದ ಸಿಬಿಎಸ್ ಕಾರ್ಯಕ್ರಮದ ಸಂದರ್ಶನದಲ್ಲಿ ಮಾತನಾಡಿದ ಸೌದಿ ಅರೆಬಿಯಾ ರಾಜ ಮಹಮ್ಮದ್, ವರ್ಷದ ಹಿಂದೆ ಸೌದಿ ಕಾರ್ಯಕರ್ತರಿಂದ ಪತ್ರಕರ್ತ ಜಮಾಲ್ ಖುಶೋಗಿ ಹತ್ಯೆಯಾಗಿರುವುದರ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತೇನೆ ಆದರೆ ಖುಶೋಗಿ ಅವರ ಹತ್ಯೆಗೆ ನಾನು ಆದೇಶಿಸಿದ್ದೆ ಎಂಬ ಸುದ್ದಿ ಸತ್ಯಕ್ಕೆ ದೂರ ಎಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ಸುದ್ದಿಯಾದ ಖುಶೋಗಿ ಹತ್ಯೆ ತಮ್ಮ ಖ್ಯಾತಿಗೆ ಧಕ್ಕೆ ತಂದಿದೆ ಎಂದು ಹೇಳಿದರು.

ಈಗ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಒಂದು ಸಮಸ್ಯೆಯಾಗಿದೆ. ಸೆಪ್ಟಂಬರ್ 14ರಂದು ಸೌದಿ ತೈಲೋದ್ಯಮದ ಹೃದಯ ಭಾಗದ ಮೇಲೆ ನಡೆದ ದ್ರೋನ್ ದಾಳಿಯ ನಂತರ ಇದು ಮತ್ತಷ್ಟು ವಿಸ್ತಾರಗೊಂಡಿದೆ. ಜಾಗತಿಕ ಮಟ್ಟದಲ್ಲಿ ವಿವಿಧ ರಾಷ್ಟ್ರಗಳು ಒಂದಾಗಿ ಇರಾನ್ ದೇಶದ ತೈಲ ಪ್ರತಿಗಾಮಿ ನೀತಿಯನ್ನು ತಡೆಯದಿದ್ದರೆ, ಸಮಸ್ಯೆ ಉಲ್ಬಣಗೊಳ್ಳಲಿದೆ. ಇದು ತೈಲ ಸರಬರಾಜಿಗೆ ಹೆಚ್ಚು ಅಪಾಯಕಾರಿ. ಹಾಗಾದಲ್ಲಿ ನಮ್ಮ ಜೀವಿತಾವಧಿಯಲ್ಲಿ ಹಿಂದೆಂದೂ ಕಾಣದ ಮಟ್ಟಿಗೆ ತೈಲಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

ಸೌದಿ ತೈಲೋದ್ಯಮದ ಮೇಲೆ ಸೆಪ್ಟಂಬರ್ 14ರಂದು ಹೌಥಿ ಮಿಲಿಟೆಂಟ್ ಗುಂಪುಗಳು ನಡೆಸಿದ ದ್ರೋನ್ ದಾಳಿಯಿಂದ ತೈಲೋಧ್ಯಮದಲ್ಲಿ ಶೇಕಡಾ 5ಕ್ಕಿಂದ ಹೆಚ್ಚು ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ ಎಂದು ಅಮೆರಿಕದ ಕಾರ್ಯದರ್ಶಿ ಮೈಕ್ ಪೊಂಪಿಯೋ ಹೇಳಿಕೆಯನ್ನು ಸೌದಿ ರಾಜಕುಮಾರ ಒಪ್ಪಿಕೊಂಡಿದ್ದಾರೆ. ಇದು ಇರಾನ್ ವಿರುದ್ಧ ಯುದ್ಧದ ಮುನ್ಸೂಚನೆ ನೀಡುತ್ತಿದೆ. ಆದರೆ ಇರಾನ್ ವಿರುದ್ಧ ಯುದ್ಧ ಮಾಡುವುದೊಂದೇ ಸಮಸ್ಯೆಗೆ ಪರಿಹಾರವಲ್ಲ. ಶಾಂತಿಯುತವಾಗಿ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಒಂದು ವೇಳೆ ಸೌದಿ ಅರೆಬಿಯಾ ಹಾಗೂ ಇರಾನ್ ಮಧ್ಯೆ ಯುದ್ಧವಾದರೆ ಅದು ಜಾಗತಿಕ ಆರ್ಥಿಕ ಅಭಿವೃದ್ಧಿ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಮಿಲಿಟರಿ ಶಕ್ತಿ ಬಳಕೆಗಿಂತ ಶಾಂತಿಯುತ ಚರ್ಚೆಯೇ ಇದಕ್ಕೆ ಪರಿಹಾರ ನೀಡಬಲ್ಲದು ಎಂದು ಅಭಿಪ್ರಾಯಪಟ್ಟರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಅಧ್ಯಕ್ಷ ಹಸನ್ ರೋಹಾನಿ ಅವರನ್ನು ಭೇಟಿಯಾಗಿ ತೆಹ್ರನ್ ನ್ಯೂಕ್ಲಿಯರ್ ಪ್ರೋಗ್ರಾಮ್ ಬಗ್ಗೆ ಹೊಸ ಒಪ್ಪಂದ ಮಾಡಿಕೊಳ್ಳಬೇಕು. ಮಧ್ಯ ಹಾಗೂ ಪೂರ್ವ ಏಷ್ಯಾ ಭಾಗದಲ್ಲಿ ಇದರ ಪ್ರಭಾವ ಬೀರುವಂತಾಗಬೇಕು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...