Homeಅಂತರಾಷ್ಟ್ರೀಯಮುಂದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ: ಸೌದಿ ರಾಜಕುಮಾರ ಸಲ್ಮಾನ್ ಕಳವಳ

ಮುಂದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ: ಸೌದಿ ರಾಜಕುಮಾರ ಸಲ್ಮಾನ್ ಕಳವಳ

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ. ವಿವಿಧ ರಾಷ್ಟ್ರಗಳಿಗೆ ತೈಲ ರಫ್ತು ಮಾಡುವ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದು. ಇರಾನ್ ದೇಶದ ಆಕ್ರಮಣಕಾರಿ ನೀತಿಯನ್ನು ತಡೆಯದಿದ್ದರೆ, ಸಮಸ್ಯೆ ಉಲ್ಬಣಗೊಳ್ಳಲ್ಲಿದ್ದು ಹಿಂದೆಂದೂ ಕಾಣದ ರೀತಿಯಲ್ಲಿ ತೈಲಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಸೌದಿ ಅರೆಬಿಯಾದ ರಾಜ ಮಹಮ್ಮದ್ ಬಿನ್ ಸಲ್ಮಾನ್ ಕಳವಳ ವ್ಯಕ್ತಪಡಿಸಿದ್ದಾರೆ.

60 ನಿಮಿಷದ ಸಿಬಿಎಸ್ ಕಾರ್ಯಕ್ರಮದ ಸಂದರ್ಶನದಲ್ಲಿ ಮಾತನಾಡಿದ ಸೌದಿ ಅರೆಬಿಯಾ ರಾಜ ಮಹಮ್ಮದ್, ವರ್ಷದ ಹಿಂದೆ ಸೌದಿ ಕಾರ್ಯಕರ್ತರಿಂದ ಪತ್ರಕರ್ತ ಜಮಾಲ್ ಖುಶೋಗಿ ಹತ್ಯೆಯಾಗಿರುವುದರ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತೇನೆ ಆದರೆ ಖುಶೋಗಿ ಅವರ ಹತ್ಯೆಗೆ ನಾನು ಆದೇಶಿಸಿದ್ದೆ ಎಂಬ ಸುದ್ದಿ ಸತ್ಯಕ್ಕೆ ದೂರ ಎಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ಸುದ್ದಿಯಾದ ಖುಶೋಗಿ ಹತ್ಯೆ ತಮ್ಮ ಖ್ಯಾತಿಗೆ ಧಕ್ಕೆ ತಂದಿದೆ ಎಂದು ಹೇಳಿದರು.

ಈಗ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಒಂದು ಸಮಸ್ಯೆಯಾಗಿದೆ. ಸೆಪ್ಟಂಬರ್ 14ರಂದು ಸೌದಿ ತೈಲೋದ್ಯಮದ ಹೃದಯ ಭಾಗದ ಮೇಲೆ ನಡೆದ ದ್ರೋನ್ ದಾಳಿಯ ನಂತರ ಇದು ಮತ್ತಷ್ಟು ವಿಸ್ತಾರಗೊಂಡಿದೆ. ಜಾಗತಿಕ ಮಟ್ಟದಲ್ಲಿ ವಿವಿಧ ರಾಷ್ಟ್ರಗಳು ಒಂದಾಗಿ ಇರಾನ್ ದೇಶದ ತೈಲ ಪ್ರತಿಗಾಮಿ ನೀತಿಯನ್ನು ತಡೆಯದಿದ್ದರೆ, ಸಮಸ್ಯೆ ಉಲ್ಬಣಗೊಳ್ಳಲಿದೆ. ಇದು ತೈಲ ಸರಬರಾಜಿಗೆ ಹೆಚ್ಚು ಅಪಾಯಕಾರಿ. ಹಾಗಾದಲ್ಲಿ ನಮ್ಮ ಜೀವಿತಾವಧಿಯಲ್ಲಿ ಹಿಂದೆಂದೂ ಕಾಣದ ಮಟ್ಟಿಗೆ ತೈಲಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

ಸೌದಿ ತೈಲೋದ್ಯಮದ ಮೇಲೆ ಸೆಪ್ಟಂಬರ್ 14ರಂದು ಹೌಥಿ ಮಿಲಿಟೆಂಟ್ ಗುಂಪುಗಳು ನಡೆಸಿದ ದ್ರೋನ್ ದಾಳಿಯಿಂದ ತೈಲೋಧ್ಯಮದಲ್ಲಿ ಶೇಕಡಾ 5ಕ್ಕಿಂದ ಹೆಚ್ಚು ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ ಎಂದು ಅಮೆರಿಕದ ಕಾರ್ಯದರ್ಶಿ ಮೈಕ್ ಪೊಂಪಿಯೋ ಹೇಳಿಕೆಯನ್ನು ಸೌದಿ ರಾಜಕುಮಾರ ಒಪ್ಪಿಕೊಂಡಿದ್ದಾರೆ. ಇದು ಇರಾನ್ ವಿರುದ್ಧ ಯುದ್ಧದ ಮುನ್ಸೂಚನೆ ನೀಡುತ್ತಿದೆ. ಆದರೆ ಇರಾನ್ ವಿರುದ್ಧ ಯುದ್ಧ ಮಾಡುವುದೊಂದೇ ಸಮಸ್ಯೆಗೆ ಪರಿಹಾರವಲ್ಲ. ಶಾಂತಿಯುತವಾಗಿ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಒಂದು ವೇಳೆ ಸೌದಿ ಅರೆಬಿಯಾ ಹಾಗೂ ಇರಾನ್ ಮಧ್ಯೆ ಯುದ್ಧವಾದರೆ ಅದು ಜಾಗತಿಕ ಆರ್ಥಿಕ ಅಭಿವೃದ್ಧಿ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಮಿಲಿಟರಿ ಶಕ್ತಿ ಬಳಕೆಗಿಂತ ಶಾಂತಿಯುತ ಚರ್ಚೆಯೇ ಇದಕ್ಕೆ ಪರಿಹಾರ ನೀಡಬಲ್ಲದು ಎಂದು ಅಭಿಪ್ರಾಯಪಟ್ಟರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಅಧ್ಯಕ್ಷ ಹಸನ್ ರೋಹಾನಿ ಅವರನ್ನು ಭೇಟಿಯಾಗಿ ತೆಹ್ರನ್ ನ್ಯೂಕ್ಲಿಯರ್ ಪ್ರೋಗ್ರಾಮ್ ಬಗ್ಗೆ ಹೊಸ ಒಪ್ಪಂದ ಮಾಡಿಕೊಳ್ಳಬೇಕು. ಮಧ್ಯ ಹಾಗೂ ಪೂರ್ವ ಏಷ್ಯಾ ಭಾಗದಲ್ಲಿ ಇದರ ಪ್ರಭಾವ ಬೀರುವಂತಾಗಬೇಕು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...