Homeಅಂತರಾಷ್ಟ್ರೀಯಮುಂದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ: ಸೌದಿ ರಾಜಕುಮಾರ ಸಲ್ಮಾನ್ ಕಳವಳ

ಮುಂದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಲಿದೆ: ಸೌದಿ ರಾಜಕುಮಾರ ಸಲ್ಮಾನ್ ಕಳವಳ

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ. ವಿವಿಧ ರಾಷ್ಟ್ರಗಳಿಗೆ ತೈಲ ರಫ್ತು ಮಾಡುವ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದು. ಇರಾನ್ ದೇಶದ ಆಕ್ರಮಣಕಾರಿ ನೀತಿಯನ್ನು ತಡೆಯದಿದ್ದರೆ, ಸಮಸ್ಯೆ ಉಲ್ಬಣಗೊಳ್ಳಲ್ಲಿದ್ದು ಹಿಂದೆಂದೂ ಕಾಣದ ರೀತಿಯಲ್ಲಿ ತೈಲಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಸೌದಿ ಅರೆಬಿಯಾದ ರಾಜ ಮಹಮ್ಮದ್ ಬಿನ್ ಸಲ್ಮಾನ್ ಕಳವಳ ವ್ಯಕ್ತಪಡಿಸಿದ್ದಾರೆ.

60 ನಿಮಿಷದ ಸಿಬಿಎಸ್ ಕಾರ್ಯಕ್ರಮದ ಸಂದರ್ಶನದಲ್ಲಿ ಮಾತನಾಡಿದ ಸೌದಿ ಅರೆಬಿಯಾ ರಾಜ ಮಹಮ್ಮದ್, ವರ್ಷದ ಹಿಂದೆ ಸೌದಿ ಕಾರ್ಯಕರ್ತರಿಂದ ಪತ್ರಕರ್ತ ಜಮಾಲ್ ಖುಶೋಗಿ ಹತ್ಯೆಯಾಗಿರುವುದರ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತೇನೆ ಆದರೆ ಖುಶೋಗಿ ಅವರ ಹತ್ಯೆಗೆ ನಾನು ಆದೇಶಿಸಿದ್ದೆ ಎಂಬ ಸುದ್ದಿ ಸತ್ಯಕ್ಕೆ ದೂರ ಎಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ಸುದ್ದಿಯಾದ ಖುಶೋಗಿ ಹತ್ಯೆ ತಮ್ಮ ಖ್ಯಾತಿಗೆ ಧಕ್ಕೆ ತಂದಿದೆ ಎಂದು ಹೇಳಿದರು.

ಈಗ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಒಂದು ಸಮಸ್ಯೆಯಾಗಿದೆ. ಸೆಪ್ಟಂಬರ್ 14ರಂದು ಸೌದಿ ತೈಲೋದ್ಯಮದ ಹೃದಯ ಭಾಗದ ಮೇಲೆ ನಡೆದ ದ್ರೋನ್ ದಾಳಿಯ ನಂತರ ಇದು ಮತ್ತಷ್ಟು ವಿಸ್ತಾರಗೊಂಡಿದೆ. ಜಾಗತಿಕ ಮಟ್ಟದಲ್ಲಿ ವಿವಿಧ ರಾಷ್ಟ್ರಗಳು ಒಂದಾಗಿ ಇರಾನ್ ದೇಶದ ತೈಲ ಪ್ರತಿಗಾಮಿ ನೀತಿಯನ್ನು ತಡೆಯದಿದ್ದರೆ, ಸಮಸ್ಯೆ ಉಲ್ಬಣಗೊಳ್ಳಲಿದೆ. ಇದು ತೈಲ ಸರಬರಾಜಿಗೆ ಹೆಚ್ಚು ಅಪಾಯಕಾರಿ. ಹಾಗಾದಲ್ಲಿ ನಮ್ಮ ಜೀವಿತಾವಧಿಯಲ್ಲಿ ಹಿಂದೆಂದೂ ಕಾಣದ ಮಟ್ಟಿಗೆ ತೈಲಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

ಸೌದಿ ತೈಲೋದ್ಯಮದ ಮೇಲೆ ಸೆಪ್ಟಂಬರ್ 14ರಂದು ಹೌಥಿ ಮಿಲಿಟೆಂಟ್ ಗುಂಪುಗಳು ನಡೆಸಿದ ದ್ರೋನ್ ದಾಳಿಯಿಂದ ತೈಲೋಧ್ಯಮದಲ್ಲಿ ಶೇಕಡಾ 5ಕ್ಕಿಂದ ಹೆಚ್ಚು ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ ಎಂದು ಅಮೆರಿಕದ ಕಾರ್ಯದರ್ಶಿ ಮೈಕ್ ಪೊಂಪಿಯೋ ಹೇಳಿಕೆಯನ್ನು ಸೌದಿ ರಾಜಕುಮಾರ ಒಪ್ಪಿಕೊಂಡಿದ್ದಾರೆ. ಇದು ಇರಾನ್ ವಿರುದ್ಧ ಯುದ್ಧದ ಮುನ್ಸೂಚನೆ ನೀಡುತ್ತಿದೆ. ಆದರೆ ಇರಾನ್ ವಿರುದ್ಧ ಯುದ್ಧ ಮಾಡುವುದೊಂದೇ ಸಮಸ್ಯೆಗೆ ಪರಿಹಾರವಲ್ಲ. ಶಾಂತಿಯುತವಾಗಿ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಒಂದು ವೇಳೆ ಸೌದಿ ಅರೆಬಿಯಾ ಹಾಗೂ ಇರಾನ್ ಮಧ್ಯೆ ಯುದ್ಧವಾದರೆ ಅದು ಜಾಗತಿಕ ಆರ್ಥಿಕ ಅಭಿವೃದ್ಧಿ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಮಿಲಿಟರಿ ಶಕ್ತಿ ಬಳಕೆಗಿಂತ ಶಾಂತಿಯುತ ಚರ್ಚೆಯೇ ಇದಕ್ಕೆ ಪರಿಹಾರ ನೀಡಬಲ್ಲದು ಎಂದು ಅಭಿಪ್ರಾಯಪಟ್ಟರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಅಧ್ಯಕ್ಷ ಹಸನ್ ರೋಹಾನಿ ಅವರನ್ನು ಭೇಟಿಯಾಗಿ ತೆಹ್ರನ್ ನ್ಯೂಕ್ಲಿಯರ್ ಪ್ರೋಗ್ರಾಮ್ ಬಗ್ಗೆ ಹೊಸ ಒಪ್ಪಂದ ಮಾಡಿಕೊಳ್ಳಬೇಕು. ಮಧ್ಯ ಹಾಗೂ ಪೂರ್ವ ಏಷ್ಯಾ ಭಾಗದಲ್ಲಿ ಇದರ ಪ್ರಭಾವ ಬೀರುವಂತಾಗಬೇಕು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...