Homeಮುಖಪುಟ#WorldFekuDay | ಪ್ರಧಾನಿ ಮೋದಿ ಜನ್ಮದಿನ - ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

#WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿಗೆ ಇಂದು ಎಪ್ಪತ್ತೊಂದನೇ ವರ್ಷದ ಹುಟ್ಟ ಹಬ್ಬ. ಬಿಜೆಪಿ ಅವರ ಹುಟ್ಟುಹಬ್ಬವನ್ನು ಒಂದು ವಾರಗಳ ಕಾಲ ಆಚರಿಸುವುದಾಗಿ ಹೇಳಿದೆ. ಜೊತೆಗೆ ಬಿಜೆಪಿಯ ನಾಯಕರು, ಬೆಂಬಲಿಗರು ಸಾಮಾಜಿಕ ಜಾಲತಾಣಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದು, ‘ಹುಟ್ಟಹಬ್ಬದ ಶುಭಾಶಯಗಳು ಮೋದಿಯವರೇ’ #HappyBdayModiji ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

ಈ ನಡುವೆ ಟ್ವಿಟರ್‌ನಲ್ಲಿ ‘ವಿಶ್ವ ಫೇಕು ದಿನ’ #WorldFekuDay, ‘ರಾಷ್ಟ್ರೀಯ ನಿರುದ್ಯೋಗ ದಿನ’ #NationalUnemploymentDay, ‘ಮೋದಿ ಕೆಲಸ ಕೊಡಿ’ #मोदी_रोजगार_दो, ಜುಮ್ಲಾ ದಿವಸ್ #JumlaDiwas ಹ್ಯಾಶ್ ಟ್ಯಾಗ್‌ಗಳು ಟ್ರೆಂಡ್‌ ಆಗಿವೆ.

ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಅದರಂತೆ ಟ್ವಿಟರ್‌ನಲ್ಲಿ #WorldFekuDay, #NationalUnemploymentDay, #मोदी_रोजगार_दो, #JumlaDiwas ಹ್ಯಾಶ್ ಟ್ಯಾಗ್‌ ಟ್ರೆಂಡ್‌ ಆಗಿದೆ.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಯೂತ್‌ ಕಾಂಗ್ರೆಸ್‌‌ನ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರು ಟ್ವೀಟ್ ಮಾಡಿ, “ಮೋದಿಯವರ ಜನ್ಮದಿಕ್ಕೆ ಶುಭಕೋರಿದವರಿಗಿಂತ ನಾಲ್ಕು ಪಟ್ಟು ಹೆಚ್ಚು ನಿರುದ್ಯೋಗ ದಿನದ ಟ್ವೀಟ್‌ ಆಗಿದೆ. ಮೋದಿಯವರೇ ನೀವು ಇದನ್ನು ನೋಡುತ್ತಿದ್ದೀರಲ್ವಾ?” ಎಂದು ಪ್ರಧಾನಿಗೆ ಕೇಳಿದ್ದಾರೆ.

ಅವರು ತಮ್ಮ ಮತ್ತೊಂದು ಟ್ವೀಟ್‌‌ನಲ್ಲಿ ನೀವು ಮೋದಿಯವರ ಜನ್ಮದಿನವನ್ನು ಆಚರಿಸುತ್ತಿದ್ದೀರಾ ಅಥವಾ ರಾಷ್ಟ್ರೀಯ ನಿರುದ್ಯೋಗ ದಿನವನ್ನು ಈ ದೇಶದ ಯುವಕರೊಂದಿಗೆ ಆಚರಿಸುತ್ತಿರುವಿರಾ? ನಿರುದ್ಯೋಗ ಸಮಸ್ಯೆಯ ಕುರಿತು ಈಗಾಗಲೇ 1 ಮಿಲಿಯನ್‌ಗಿಂತಲೂ ಹೆಚ್ಚು ಟ್ವೀಟ್‌ಗಳು ಆಗಿದೆ. ಪತ್ರಿಕೋದ್ಯಮ ಜೀವಂತವಾಗಿದ್ದರೆ ವಾಸ್ತವಾಂಶಗಳನ್ನು ವರದಿ ಮಾಡಿ ಎಂದು ಹೇಳಿದ್ದಾರೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಸುಧೀರ್‌ ಯಾದವ್ ಅವರು, “ಅವರು ಜೋಲಿಗೆ ಎತ್ತಿಕೊಂಡು ನಡೆಯುತ್ತಾರೆ. ದೇಶ ಯುವಕರು ಎಚ್ಚೆತ್ತು, ಈ ಹೆಮ್ಮೆಯ ಮನುಷ್ಯನನ್ನು ಇಲ್ಲಿಂದ ಓಡಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸಾ ಅವರು, ಪ್ರಧಾನಿ ಮೋದಿ ಅವರು ದೇಶಕ್ಕೆ ನೀಡಿರುವ ಕೊಡುಗೆಗಳ ಪಟ್ಟಯನ್ನು ನೀಡಿದ್ದಾರೆ. ಅವುಗಳಲ್ಲಿ, 15 ಕೋಟಿ ಉದ್ಯೋಗ ನಷ್ಟ, 23 ಕೋಟಿ ಜನರು ಬಡತನ ರೇಖೆಗಿಂತ ಕೆಳಗೆ ಇಳಿದಿದ್ದು, ಭಾರತದ ತಲಾ ಆದಾಯ ಬಾಂಗ್ಲಾದೇಶಕ್ಕಿಂತ ಇಳಿದಿದ್ದು, ಲಾಭದಾಯಕ ಸರ್ಕಾರಿ ಉದ್ದಿಮೆಗಳನ್ನು ಮಾಡಿದ್ದು, ಕೊರೊನಾ ದುರಾಡಳಿತ, ಎಲ್‌ಪಿಜಿಗೆ 900 ರೂ, ಪೆಟ್ರೋಲ್‌ಗೆ 110 ರೂ, ಅಡುಗೆ ಎಣ್ಣೆಗೆ 200 ರೂ.

ಒಬೈದುಲ್ಲಾ ಅವರು, “ಭಾರತದಲ್ಲಿ ಮೊಟ್ಟಮೊದಲ ಡಿಜಿಟಲ್ ಕ್ಯಾಮೆರಾ ಮಾರಾಟವಾಗಿದ್ದು 1995 ರಲ್ಲಿ. ಆದರೆ ಮೋದಿ ಅದನ್ನು 1987-88ರಲ್ಲಿ ಬಳಸಿದ್ದಾರೆ” ಎಂದು ಪ್ರಧಾನಿ ಮೋದಿ ಅವರು ಡಿಜಿಟಲ್‌ ಕ್ಯಾಮೆರಾ ಬಗ್ಗೆ ಖಾಸಗಿ ಚಾನೆಲ್‌ ಒಂದರಲ್ಲಿ ಸುಳ್ಳು ಹೇಳುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಜಾಹೀರಾತಿಗೆ ದೆಹಲಿ ಸರ್ಕಾರಿ ಶಾಲೆಗಳ ಫೋಟೊ ಬಳಕೆ: ಥ್ಯಾಂಕ್ಯೂ ಮೋದಿಜೀ ಎಂದ ಆಪ್

ಅನುಪಮ್‌ ಅವರು, “ಇವತ್ತಿನ ‘ಜುಮ್ಲಾ ದಿವಸ್’ ನಿರುದ್ಯೋಗದ ಬಿಕ್ಕಟ್ಟನ್ನು ನಿರ್ಲಕ್ಷಿಸದಂತೆ ಮೋದಿ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನೋಜ್ ಮೆಹ್ತಾ ಅವರು, “ಒಂದು ದಿನ ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ನಿಮ್ಮನ್ನು ಓಡಿಸುತ್ತಾರೆ. ಆಗ ಮೊದಲು ತಪ್ಪಿಸಿಕೊಳ್ಳುವುದು ನಿಮ್ಮ ಕಾರ್ಪೊರೇಟ್ ಸ್ನೇಹಿತರು” ಎಂದು ಬರೆದಿದ್ದಾರೆ.

ವಿನಯ್ ಕುಮಾರ್‌ ದೊಕಾನಿಯಾ ಅವರು, “ಈ ಸಹಸ್ರಮಾನದ ಮಾರಾಟಗಾರ ವಿಶ್ವ ಫೇಕು ದಿನವನ್ನು ಆಚರಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಮಧುರೇಂದ್ರ ಸಿಂಗ್‌ ಅವರು, “ದೇಶಕ್ಕಾಗಿ ಕೊಡುಗೆ ನೀಡಲು ಸಾಧ್ಯವಿಲ್ಲದ ಕಾರಣ ಮಾಲಿಂಗ ನಿವೃತ್ತರಾದರು, ಮೋದಿಜಿ ನೀವು ಯಾವಾಗ ನಿವೃತ್ತರಾಗುತ್ತೀರಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...