Homeಮುಖಪುಟ#WorldFekuDay | ಪ್ರಧಾನಿ ಮೋದಿ ಜನ್ಮದಿನ - ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

#WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿಗೆ ಇಂದು ಎಪ್ಪತ್ತೊಂದನೇ ವರ್ಷದ ಹುಟ್ಟ ಹಬ್ಬ. ಬಿಜೆಪಿ ಅವರ ಹುಟ್ಟುಹಬ್ಬವನ್ನು ಒಂದು ವಾರಗಳ ಕಾಲ ಆಚರಿಸುವುದಾಗಿ ಹೇಳಿದೆ. ಜೊತೆಗೆ ಬಿಜೆಪಿಯ ನಾಯಕರು, ಬೆಂಬಲಿಗರು ಸಾಮಾಜಿಕ ಜಾಲತಾಣಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದು, ‘ಹುಟ್ಟಹಬ್ಬದ ಶುಭಾಶಯಗಳು ಮೋದಿಯವರೇ’ #HappyBdayModiji ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

ಈ ನಡುವೆ ಟ್ವಿಟರ್‌ನಲ್ಲಿ ‘ವಿಶ್ವ ಫೇಕು ದಿನ’ #WorldFekuDay, ‘ರಾಷ್ಟ್ರೀಯ ನಿರುದ್ಯೋಗ ದಿನ’ #NationalUnemploymentDay, ‘ಮೋದಿ ಕೆಲಸ ಕೊಡಿ’ #मोदी_रोजगार_दो, ಜುಮ್ಲಾ ದಿವಸ್ #JumlaDiwas ಹ್ಯಾಶ್ ಟ್ಯಾಗ್‌ಗಳು ಟ್ರೆಂಡ್‌ ಆಗಿವೆ.

ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಅದರಂತೆ ಟ್ವಿಟರ್‌ನಲ್ಲಿ #WorldFekuDay, #NationalUnemploymentDay, #मोदी_रोजगार_दो, #JumlaDiwas ಹ್ಯಾಶ್ ಟ್ಯಾಗ್‌ ಟ್ರೆಂಡ್‌ ಆಗಿದೆ.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಯೂತ್‌ ಕಾಂಗ್ರೆಸ್‌‌ನ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರು ಟ್ವೀಟ್ ಮಾಡಿ, “ಮೋದಿಯವರ ಜನ್ಮದಿಕ್ಕೆ ಶುಭಕೋರಿದವರಿಗಿಂತ ನಾಲ್ಕು ಪಟ್ಟು ಹೆಚ್ಚು ನಿರುದ್ಯೋಗ ದಿನದ ಟ್ವೀಟ್‌ ಆಗಿದೆ. ಮೋದಿಯವರೇ ನೀವು ಇದನ್ನು ನೋಡುತ್ತಿದ್ದೀರಲ್ವಾ?” ಎಂದು ಪ್ರಧಾನಿಗೆ ಕೇಳಿದ್ದಾರೆ.

ಅವರು ತಮ್ಮ ಮತ್ತೊಂದು ಟ್ವೀಟ್‌‌ನಲ್ಲಿ ನೀವು ಮೋದಿಯವರ ಜನ್ಮದಿನವನ್ನು ಆಚರಿಸುತ್ತಿದ್ದೀರಾ ಅಥವಾ ರಾಷ್ಟ್ರೀಯ ನಿರುದ್ಯೋಗ ದಿನವನ್ನು ಈ ದೇಶದ ಯುವಕರೊಂದಿಗೆ ಆಚರಿಸುತ್ತಿರುವಿರಾ? ನಿರುದ್ಯೋಗ ಸಮಸ್ಯೆಯ ಕುರಿತು ಈಗಾಗಲೇ 1 ಮಿಲಿಯನ್‌ಗಿಂತಲೂ ಹೆಚ್ಚು ಟ್ವೀಟ್‌ಗಳು ಆಗಿದೆ. ಪತ್ರಿಕೋದ್ಯಮ ಜೀವಂತವಾಗಿದ್ದರೆ ವಾಸ್ತವಾಂಶಗಳನ್ನು ವರದಿ ಮಾಡಿ ಎಂದು ಹೇಳಿದ್ದಾರೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಸುಧೀರ್‌ ಯಾದವ್ ಅವರು, “ಅವರು ಜೋಲಿಗೆ ಎತ್ತಿಕೊಂಡು ನಡೆಯುತ್ತಾರೆ. ದೇಶ ಯುವಕರು ಎಚ್ಚೆತ್ತು, ಈ ಹೆಮ್ಮೆಯ ಮನುಷ್ಯನನ್ನು ಇಲ್ಲಿಂದ ಓಡಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸಾ ಅವರು, ಪ್ರಧಾನಿ ಮೋದಿ ಅವರು ದೇಶಕ್ಕೆ ನೀಡಿರುವ ಕೊಡುಗೆಗಳ ಪಟ್ಟಯನ್ನು ನೀಡಿದ್ದಾರೆ. ಅವುಗಳಲ್ಲಿ, 15 ಕೋಟಿ ಉದ್ಯೋಗ ನಷ್ಟ, 23 ಕೋಟಿ ಜನರು ಬಡತನ ರೇಖೆಗಿಂತ ಕೆಳಗೆ ಇಳಿದಿದ್ದು, ಭಾರತದ ತಲಾ ಆದಾಯ ಬಾಂಗ್ಲಾದೇಶಕ್ಕಿಂತ ಇಳಿದಿದ್ದು, ಲಾಭದಾಯಕ ಸರ್ಕಾರಿ ಉದ್ದಿಮೆಗಳನ್ನು ಮಾಡಿದ್ದು, ಕೊರೊನಾ ದುರಾಡಳಿತ, ಎಲ್‌ಪಿಜಿಗೆ 900 ರೂ, ಪೆಟ್ರೋಲ್‌ಗೆ 110 ರೂ, ಅಡುಗೆ ಎಣ್ಣೆಗೆ 200 ರೂ.

ಒಬೈದುಲ್ಲಾ ಅವರು, “ಭಾರತದಲ್ಲಿ ಮೊಟ್ಟಮೊದಲ ಡಿಜಿಟಲ್ ಕ್ಯಾಮೆರಾ ಮಾರಾಟವಾಗಿದ್ದು 1995 ರಲ್ಲಿ. ಆದರೆ ಮೋದಿ ಅದನ್ನು 1987-88ರಲ್ಲಿ ಬಳಸಿದ್ದಾರೆ” ಎಂದು ಪ್ರಧಾನಿ ಮೋದಿ ಅವರು ಡಿಜಿಟಲ್‌ ಕ್ಯಾಮೆರಾ ಬಗ್ಗೆ ಖಾಸಗಿ ಚಾನೆಲ್‌ ಒಂದರಲ್ಲಿ ಸುಳ್ಳು ಹೇಳುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಜಾಹೀರಾತಿಗೆ ದೆಹಲಿ ಸರ್ಕಾರಿ ಶಾಲೆಗಳ ಫೋಟೊ ಬಳಕೆ: ಥ್ಯಾಂಕ್ಯೂ ಮೋದಿಜೀ ಎಂದ ಆಪ್

ಅನುಪಮ್‌ ಅವರು, “ಇವತ್ತಿನ ‘ಜುಮ್ಲಾ ದಿವಸ್’ ನಿರುದ್ಯೋಗದ ಬಿಕ್ಕಟ್ಟನ್ನು ನಿರ್ಲಕ್ಷಿಸದಂತೆ ಮೋದಿ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನೋಜ್ ಮೆಹ್ತಾ ಅವರು, “ಒಂದು ದಿನ ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ನಿಮ್ಮನ್ನು ಓಡಿಸುತ್ತಾರೆ. ಆಗ ಮೊದಲು ತಪ್ಪಿಸಿಕೊಳ್ಳುವುದು ನಿಮ್ಮ ಕಾರ್ಪೊರೇಟ್ ಸ್ನೇಹಿತರು” ಎಂದು ಬರೆದಿದ್ದಾರೆ.

ವಿನಯ್ ಕುಮಾರ್‌ ದೊಕಾನಿಯಾ ಅವರು, “ಈ ಸಹಸ್ರಮಾನದ ಮಾರಾಟಗಾರ ವಿಶ್ವ ಫೇಕು ದಿನವನ್ನು ಆಚರಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಮಧುರೇಂದ್ರ ಸಿಂಗ್‌ ಅವರು, “ದೇಶಕ್ಕಾಗಿ ಕೊಡುಗೆ ನೀಡಲು ಸಾಧ್ಯವಿಲ್ಲದ ಕಾರಣ ಮಾಲಿಂಗ ನಿವೃತ್ತರಾದರು, ಮೋದಿಜಿ ನೀವು ಯಾವಾಗ ನಿವೃತ್ತರಾಗುತ್ತೀರಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...