Homeಮುಖಪುಟ#WorldFekuDay | ಪ್ರಧಾನಿ ಮೋದಿ ಜನ್ಮದಿನ - ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

#WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿಗೆ ಇಂದು ಎಪ್ಪತ್ತೊಂದನೇ ವರ್ಷದ ಹುಟ್ಟ ಹಬ್ಬ. ಬಿಜೆಪಿ ಅವರ ಹುಟ್ಟುಹಬ್ಬವನ್ನು ಒಂದು ವಾರಗಳ ಕಾಲ ಆಚರಿಸುವುದಾಗಿ ಹೇಳಿದೆ. ಜೊತೆಗೆ ಬಿಜೆಪಿಯ ನಾಯಕರು, ಬೆಂಬಲಿಗರು ಸಾಮಾಜಿಕ ಜಾಲತಾಣಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದು, ‘ಹುಟ್ಟಹಬ್ಬದ ಶುಭಾಶಯಗಳು ಮೋದಿಯವರೇ’ #HappyBdayModiji ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

ಈ ನಡುವೆ ಟ್ವಿಟರ್‌ನಲ್ಲಿ ‘ವಿಶ್ವ ಫೇಕು ದಿನ’ #WorldFekuDay, ‘ರಾಷ್ಟ್ರೀಯ ನಿರುದ್ಯೋಗ ದಿನ’ #NationalUnemploymentDay, ‘ಮೋದಿ ಕೆಲಸ ಕೊಡಿ’ #मोदी_रोजगार_दो, ಜುಮ್ಲಾ ದಿವಸ್ #JumlaDiwas ಹ್ಯಾಶ್ ಟ್ಯಾಗ್‌ಗಳು ಟ್ರೆಂಡ್‌ ಆಗಿವೆ.

ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಅದರಂತೆ ಟ್ವಿಟರ್‌ನಲ್ಲಿ #WorldFekuDay, #NationalUnemploymentDay, #मोदी_रोजगार_दो, #JumlaDiwas ಹ್ಯಾಶ್ ಟ್ಯಾಗ್‌ ಟ್ರೆಂಡ್‌ ಆಗಿದೆ.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಯೂತ್‌ ಕಾಂಗ್ರೆಸ್‌‌ನ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರು ಟ್ವೀಟ್ ಮಾಡಿ, “ಮೋದಿಯವರ ಜನ್ಮದಿಕ್ಕೆ ಶುಭಕೋರಿದವರಿಗಿಂತ ನಾಲ್ಕು ಪಟ್ಟು ಹೆಚ್ಚು ನಿರುದ್ಯೋಗ ದಿನದ ಟ್ವೀಟ್‌ ಆಗಿದೆ. ಮೋದಿಯವರೇ ನೀವು ಇದನ್ನು ನೋಡುತ್ತಿದ್ದೀರಲ್ವಾ?” ಎಂದು ಪ್ರಧಾನಿಗೆ ಕೇಳಿದ್ದಾರೆ.

ಅವರು ತಮ್ಮ ಮತ್ತೊಂದು ಟ್ವೀಟ್‌‌ನಲ್ಲಿ ನೀವು ಮೋದಿಯವರ ಜನ್ಮದಿನವನ್ನು ಆಚರಿಸುತ್ತಿದ್ದೀರಾ ಅಥವಾ ರಾಷ್ಟ್ರೀಯ ನಿರುದ್ಯೋಗ ದಿನವನ್ನು ಈ ದೇಶದ ಯುವಕರೊಂದಿಗೆ ಆಚರಿಸುತ್ತಿರುವಿರಾ? ನಿರುದ್ಯೋಗ ಸಮಸ್ಯೆಯ ಕುರಿತು ಈಗಾಗಲೇ 1 ಮಿಲಿಯನ್‌ಗಿಂತಲೂ ಹೆಚ್ಚು ಟ್ವೀಟ್‌ಗಳು ಆಗಿದೆ. ಪತ್ರಿಕೋದ್ಯಮ ಜೀವಂತವಾಗಿದ್ದರೆ ವಾಸ್ತವಾಂಶಗಳನ್ನು ವರದಿ ಮಾಡಿ ಎಂದು ಹೇಳಿದ್ದಾರೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಸುಧೀರ್‌ ಯಾದವ್ ಅವರು, “ಅವರು ಜೋಲಿಗೆ ಎತ್ತಿಕೊಂಡು ನಡೆಯುತ್ತಾರೆ. ದೇಶ ಯುವಕರು ಎಚ್ಚೆತ್ತು, ಈ ಹೆಮ್ಮೆಯ ಮನುಷ್ಯನನ್ನು ಇಲ್ಲಿಂದ ಓಡಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸಾ ಅವರು, ಪ್ರಧಾನಿ ಮೋದಿ ಅವರು ದೇಶಕ್ಕೆ ನೀಡಿರುವ ಕೊಡುಗೆಗಳ ಪಟ್ಟಯನ್ನು ನೀಡಿದ್ದಾರೆ. ಅವುಗಳಲ್ಲಿ, 15 ಕೋಟಿ ಉದ್ಯೋಗ ನಷ್ಟ, 23 ಕೋಟಿ ಜನರು ಬಡತನ ರೇಖೆಗಿಂತ ಕೆಳಗೆ ಇಳಿದಿದ್ದು, ಭಾರತದ ತಲಾ ಆದಾಯ ಬಾಂಗ್ಲಾದೇಶಕ್ಕಿಂತ ಇಳಿದಿದ್ದು, ಲಾಭದಾಯಕ ಸರ್ಕಾರಿ ಉದ್ದಿಮೆಗಳನ್ನು ಮಾಡಿದ್ದು, ಕೊರೊನಾ ದುರಾಡಳಿತ, ಎಲ್‌ಪಿಜಿಗೆ 900 ರೂ, ಪೆಟ್ರೋಲ್‌ಗೆ 110 ರೂ, ಅಡುಗೆ ಎಣ್ಣೆಗೆ 200 ರೂ.

ಒಬೈದುಲ್ಲಾ ಅವರು, “ಭಾರತದಲ್ಲಿ ಮೊಟ್ಟಮೊದಲ ಡಿಜಿಟಲ್ ಕ್ಯಾಮೆರಾ ಮಾರಾಟವಾಗಿದ್ದು 1995 ರಲ್ಲಿ. ಆದರೆ ಮೋದಿ ಅದನ್ನು 1987-88ರಲ್ಲಿ ಬಳಸಿದ್ದಾರೆ” ಎಂದು ಪ್ರಧಾನಿ ಮೋದಿ ಅವರು ಡಿಜಿಟಲ್‌ ಕ್ಯಾಮೆರಾ ಬಗ್ಗೆ ಖಾಸಗಿ ಚಾನೆಲ್‌ ಒಂದರಲ್ಲಿ ಸುಳ್ಳು ಹೇಳುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಜಾಹೀರಾತಿಗೆ ದೆಹಲಿ ಸರ್ಕಾರಿ ಶಾಲೆಗಳ ಫೋಟೊ ಬಳಕೆ: ಥ್ಯಾಂಕ್ಯೂ ಮೋದಿಜೀ ಎಂದ ಆಪ್

ಅನುಪಮ್‌ ಅವರು, “ಇವತ್ತಿನ ‘ಜುಮ್ಲಾ ದಿವಸ್’ ನಿರುದ್ಯೋಗದ ಬಿಕ್ಕಟ್ಟನ್ನು ನಿರ್ಲಕ್ಷಿಸದಂತೆ ಮೋದಿ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನೋಜ್ ಮೆಹ್ತಾ ಅವರು, “ಒಂದು ದಿನ ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ನಿಮ್ಮನ್ನು ಓಡಿಸುತ್ತಾರೆ. ಆಗ ಮೊದಲು ತಪ್ಪಿಸಿಕೊಳ್ಳುವುದು ನಿಮ್ಮ ಕಾರ್ಪೊರೇಟ್ ಸ್ನೇಹಿತರು” ಎಂದು ಬರೆದಿದ್ದಾರೆ.

ವಿನಯ್ ಕುಮಾರ್‌ ದೊಕಾನಿಯಾ ಅವರು, “ಈ ಸಹಸ್ರಮಾನದ ಮಾರಾಟಗಾರ ವಿಶ್ವ ಫೇಕು ದಿನವನ್ನು ಆಚರಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಮಧುರೇಂದ್ರ ಸಿಂಗ್‌ ಅವರು, “ದೇಶಕ್ಕಾಗಿ ಕೊಡುಗೆ ನೀಡಲು ಸಾಧ್ಯವಿಲ್ಲದ ಕಾರಣ ಮಾಲಿಂಗ ನಿವೃತ್ತರಾದರು, ಮೋದಿಜಿ ನೀವು ಯಾವಾಗ ನಿವೃತ್ತರಾಗುತ್ತೀರಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...