Homeಮುಖಪುಟ#WorldFekuDay | ಪ್ರಧಾನಿ ಮೋದಿ ಜನ್ಮದಿನ - ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

#WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿಗೆ ಇಂದು ಎಪ್ಪತ್ತೊಂದನೇ ವರ್ಷದ ಹುಟ್ಟ ಹಬ್ಬ. ಬಿಜೆಪಿ ಅವರ ಹುಟ್ಟುಹಬ್ಬವನ್ನು ಒಂದು ವಾರಗಳ ಕಾಲ ಆಚರಿಸುವುದಾಗಿ ಹೇಳಿದೆ. ಜೊತೆಗೆ ಬಿಜೆಪಿಯ ನಾಯಕರು, ಬೆಂಬಲಿಗರು ಸಾಮಾಜಿಕ ಜಾಲತಾಣಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದು, ‘ಹುಟ್ಟಹಬ್ಬದ ಶುಭಾಶಯಗಳು ಮೋದಿಯವರೇ’ #HappyBdayModiji ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

ಈ ನಡುವೆ ಟ್ವಿಟರ್‌ನಲ್ಲಿ ‘ವಿಶ್ವ ಫೇಕು ದಿನ’ #WorldFekuDay, ‘ರಾಷ್ಟ್ರೀಯ ನಿರುದ್ಯೋಗ ದಿನ’ #NationalUnemploymentDay, ‘ಮೋದಿ ಕೆಲಸ ಕೊಡಿ’ #मोदी_रोजगार_दो, ಜುಮ್ಲಾ ದಿವಸ್ #JumlaDiwas ಹ್ಯಾಶ್ ಟ್ಯಾಗ್‌ಗಳು ಟ್ರೆಂಡ್‌ ಆಗಿವೆ.

ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಅದರಂತೆ ಟ್ವಿಟರ್‌ನಲ್ಲಿ #WorldFekuDay, #NationalUnemploymentDay, #मोदी_रोजगार_दो, #JumlaDiwas ಹ್ಯಾಶ್ ಟ್ಯಾಗ್‌ ಟ್ರೆಂಡ್‌ ಆಗಿದೆ.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಯೂತ್‌ ಕಾಂಗ್ರೆಸ್‌‌ನ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರು ಟ್ವೀಟ್ ಮಾಡಿ, “ಮೋದಿಯವರ ಜನ್ಮದಿಕ್ಕೆ ಶುಭಕೋರಿದವರಿಗಿಂತ ನಾಲ್ಕು ಪಟ್ಟು ಹೆಚ್ಚು ನಿರುದ್ಯೋಗ ದಿನದ ಟ್ವೀಟ್‌ ಆಗಿದೆ. ಮೋದಿಯವರೇ ನೀವು ಇದನ್ನು ನೋಡುತ್ತಿದ್ದೀರಲ್ವಾ?” ಎಂದು ಪ್ರಧಾನಿಗೆ ಕೇಳಿದ್ದಾರೆ.

ಅವರು ತಮ್ಮ ಮತ್ತೊಂದು ಟ್ವೀಟ್‌‌ನಲ್ಲಿ ನೀವು ಮೋದಿಯವರ ಜನ್ಮದಿನವನ್ನು ಆಚರಿಸುತ್ತಿದ್ದೀರಾ ಅಥವಾ ರಾಷ್ಟ್ರೀಯ ನಿರುದ್ಯೋಗ ದಿನವನ್ನು ಈ ದೇಶದ ಯುವಕರೊಂದಿಗೆ ಆಚರಿಸುತ್ತಿರುವಿರಾ? ನಿರುದ್ಯೋಗ ಸಮಸ್ಯೆಯ ಕುರಿತು ಈಗಾಗಲೇ 1 ಮಿಲಿಯನ್‌ಗಿಂತಲೂ ಹೆಚ್ಚು ಟ್ವೀಟ್‌ಗಳು ಆಗಿದೆ. ಪತ್ರಿಕೋದ್ಯಮ ಜೀವಂತವಾಗಿದ್ದರೆ ವಾಸ್ತವಾಂಶಗಳನ್ನು ವರದಿ ಮಾಡಿ ಎಂದು ಹೇಳಿದ್ದಾರೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಸುಧೀರ್‌ ಯಾದವ್ ಅವರು, “ಅವರು ಜೋಲಿಗೆ ಎತ್ತಿಕೊಂಡು ನಡೆಯುತ್ತಾರೆ. ದೇಶ ಯುವಕರು ಎಚ್ಚೆತ್ತು, ಈ ಹೆಮ್ಮೆಯ ಮನುಷ್ಯನನ್ನು ಇಲ್ಲಿಂದ ಓಡಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸಾ ಅವರು, ಪ್ರಧಾನಿ ಮೋದಿ ಅವರು ದೇಶಕ್ಕೆ ನೀಡಿರುವ ಕೊಡುಗೆಗಳ ಪಟ್ಟಯನ್ನು ನೀಡಿದ್ದಾರೆ. ಅವುಗಳಲ್ಲಿ, 15 ಕೋಟಿ ಉದ್ಯೋಗ ನಷ್ಟ, 23 ಕೋಟಿ ಜನರು ಬಡತನ ರೇಖೆಗಿಂತ ಕೆಳಗೆ ಇಳಿದಿದ್ದು, ಭಾರತದ ತಲಾ ಆದಾಯ ಬಾಂಗ್ಲಾದೇಶಕ್ಕಿಂತ ಇಳಿದಿದ್ದು, ಲಾಭದಾಯಕ ಸರ್ಕಾರಿ ಉದ್ದಿಮೆಗಳನ್ನು ಮಾಡಿದ್ದು, ಕೊರೊನಾ ದುರಾಡಳಿತ, ಎಲ್‌ಪಿಜಿಗೆ 900 ರೂ, ಪೆಟ್ರೋಲ್‌ಗೆ 110 ರೂ, ಅಡುಗೆ ಎಣ್ಣೆಗೆ 200 ರೂ.

ಒಬೈದುಲ್ಲಾ ಅವರು, “ಭಾರತದಲ್ಲಿ ಮೊಟ್ಟಮೊದಲ ಡಿಜಿಟಲ್ ಕ್ಯಾಮೆರಾ ಮಾರಾಟವಾಗಿದ್ದು 1995 ರಲ್ಲಿ. ಆದರೆ ಮೋದಿ ಅದನ್ನು 1987-88ರಲ್ಲಿ ಬಳಸಿದ್ದಾರೆ” ಎಂದು ಪ್ರಧಾನಿ ಮೋದಿ ಅವರು ಡಿಜಿಟಲ್‌ ಕ್ಯಾಮೆರಾ ಬಗ್ಗೆ ಖಾಸಗಿ ಚಾನೆಲ್‌ ಒಂದರಲ್ಲಿ ಸುಳ್ಳು ಹೇಳುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಜಾಹೀರಾತಿಗೆ ದೆಹಲಿ ಸರ್ಕಾರಿ ಶಾಲೆಗಳ ಫೋಟೊ ಬಳಕೆ: ಥ್ಯಾಂಕ್ಯೂ ಮೋದಿಜೀ ಎಂದ ಆಪ್

ಅನುಪಮ್‌ ಅವರು, “ಇವತ್ತಿನ ‘ಜುಮ್ಲಾ ದಿವಸ್’ ನಿರುದ್ಯೋಗದ ಬಿಕ್ಕಟ್ಟನ್ನು ನಿರ್ಲಕ್ಷಿಸದಂತೆ ಮೋದಿ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನೋಜ್ ಮೆಹ್ತಾ ಅವರು, “ಒಂದು ದಿನ ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ನಿಮ್ಮನ್ನು ಓಡಿಸುತ್ತಾರೆ. ಆಗ ಮೊದಲು ತಪ್ಪಿಸಿಕೊಳ್ಳುವುದು ನಿಮ್ಮ ಕಾರ್ಪೊರೇಟ್ ಸ್ನೇಹಿತರು” ಎಂದು ಬರೆದಿದ್ದಾರೆ.

ವಿನಯ್ ಕುಮಾರ್‌ ದೊಕಾನಿಯಾ ಅವರು, “ಈ ಸಹಸ್ರಮಾನದ ಮಾರಾಟಗಾರ ವಿಶ್ವ ಫೇಕು ದಿನವನ್ನು ಆಚರಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಮಧುರೇಂದ್ರ ಸಿಂಗ್‌ ಅವರು, “ದೇಶಕ್ಕಾಗಿ ಕೊಡುಗೆ ನೀಡಲು ಸಾಧ್ಯವಿಲ್ಲದ ಕಾರಣ ಮಾಲಿಂಗ ನಿವೃತ್ತರಾದರು, ಮೋದಿಜಿ ನೀವು ಯಾವಾಗ ನಿವೃತ್ತರಾಗುತ್ತೀರಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...