Homeಮುಖಪುಟ#WorldFekuDay | ಪ್ರಧಾನಿ ಮೋದಿ ಜನ್ಮದಿನ - ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

#WorldFekuDay | ಪ್ರಧಾನಿ ಮೋದಿ ಜನ್ಮದಿನ – ‘ವಿಶ್ವ ಫೇಕು ದಿನ’ ಟ್ವಿಟರ್‌ ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿಗೆ ಇಂದು ಎಪ್ಪತ್ತೊಂದನೇ ವರ್ಷದ ಹುಟ್ಟ ಹಬ್ಬ. ಬಿಜೆಪಿ ಅವರ ಹುಟ್ಟುಹಬ್ಬವನ್ನು ಒಂದು ವಾರಗಳ ಕಾಲ ಆಚರಿಸುವುದಾಗಿ ಹೇಳಿದೆ. ಜೊತೆಗೆ ಬಿಜೆಪಿಯ ನಾಯಕರು, ಬೆಂಬಲಿಗರು ಸಾಮಾಜಿಕ ಜಾಲತಾಣಲ್ಲಿ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದು, ‘ಹುಟ್ಟಹಬ್ಬದ ಶುಭಾಶಯಗಳು ಮೋದಿಯವರೇ’ #HappyBdayModiji ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

ಈ ನಡುವೆ ಟ್ವಿಟರ್‌ನಲ್ಲಿ ‘ವಿಶ್ವ ಫೇಕು ದಿನ’ #WorldFekuDay, ‘ರಾಷ್ಟ್ರೀಯ ನಿರುದ್ಯೋಗ ದಿನ’ #NationalUnemploymentDay, ‘ಮೋದಿ ಕೆಲಸ ಕೊಡಿ’ #मोदी_रोजगार_दो, ಜುಮ್ಲಾ ದಿವಸ್ #JumlaDiwas ಹ್ಯಾಶ್ ಟ್ಯಾಗ್‌ಗಳು ಟ್ರೆಂಡ್‌ ಆಗಿವೆ.

ಪ್ರಧಾನಿ ಮೋದಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ ಎಂದು ಆಚರಿಸುವುದಾಗಿ ಕಾಂಗ್ರೆಸ್‌ ಸೇರಿದಂತೆ ಹಲವಾರು ವಿಪಕ್ಷಗಳು, ಜನಪರ ಸಂಘಟನೆಗಳು ಈ ಹಿಂದೆಯೆ ಹೇಳಿದ್ದವು. ಅದರಂತೆ ಟ್ವಿಟರ್‌ನಲ್ಲಿ #WorldFekuDay, #NationalUnemploymentDay, #मोदी_रोजगार_दो, #JumlaDiwas ಹ್ಯಾಶ್ ಟ್ಯಾಗ್‌ ಟ್ರೆಂಡ್‌ ಆಗಿದೆ.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಯೂತ್‌ ಕಾಂಗ್ರೆಸ್‌‌ನ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರು ಟ್ವೀಟ್ ಮಾಡಿ, “ಮೋದಿಯವರ ಜನ್ಮದಿಕ್ಕೆ ಶುಭಕೋರಿದವರಿಗಿಂತ ನಾಲ್ಕು ಪಟ್ಟು ಹೆಚ್ಚು ನಿರುದ್ಯೋಗ ದಿನದ ಟ್ವೀಟ್‌ ಆಗಿದೆ. ಮೋದಿಯವರೇ ನೀವು ಇದನ್ನು ನೋಡುತ್ತಿದ್ದೀರಲ್ವಾ?” ಎಂದು ಪ್ರಧಾನಿಗೆ ಕೇಳಿದ್ದಾರೆ.

ಅವರು ತಮ್ಮ ಮತ್ತೊಂದು ಟ್ವೀಟ್‌‌ನಲ್ಲಿ ನೀವು ಮೋದಿಯವರ ಜನ್ಮದಿನವನ್ನು ಆಚರಿಸುತ್ತಿದ್ದೀರಾ ಅಥವಾ ರಾಷ್ಟ್ರೀಯ ನಿರುದ್ಯೋಗ ದಿನವನ್ನು ಈ ದೇಶದ ಯುವಕರೊಂದಿಗೆ ಆಚರಿಸುತ್ತಿರುವಿರಾ? ನಿರುದ್ಯೋಗ ಸಮಸ್ಯೆಯ ಕುರಿತು ಈಗಾಗಲೇ 1 ಮಿಲಿಯನ್‌ಗಿಂತಲೂ ಹೆಚ್ಚು ಟ್ವೀಟ್‌ಗಳು ಆಗಿದೆ. ಪತ್ರಿಕೋದ್ಯಮ ಜೀವಂತವಾಗಿದ್ದರೆ ವಾಸ್ತವಾಂಶಗಳನ್ನು ವರದಿ ಮಾಡಿ ಎಂದು ಹೇಳಿದ್ದಾರೆ.

ರೈತ ಹೋರಾಟದ ಟ್ವಿಟರ್‌ನ ಮುಖವಾದ ಕಿಸಾನ್ ಏಕ್ತಾ ಮೋರ್ಚಾ, “ಅನಿರೀಕ್ಷಿತವಾಗಿ, ಪ್ರಧಾನಿ ಮೋದಿಯವರ ಜನ್ಮವು ರಾಷ್ಟ್ರವನ್ನು ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹಾಳುಮಾಡಿದೆ. ಮೋದಿ ಸರ್ಕಾರ, ತನ್ನ ಜನರನ್ನು ಕೊಲ್ಲುವುದು, ಆಹಾರ ಉತ್ಪಾದಿಸುವವರನ್ನು ಅವಮಾನಿಸುವುದು, ಕೀಳುಮಟ್ಟದ ಮತ್ತು ಕ್ರೂರ ವಿಧಾನಗಳನ್ನು ಅಳವಡಿಸಿ ಸಾಮಾನ್ಯ ಮನುಷ್ಯನ ಹಕ್ಕುಗಳನ್ನು ದಮನಿಸುತ್ತಿದೆ. ನಾಚಿಕೆಗೇಡು, ಎಷ್ಟು ನಿರ್ದಯ ಪ್ರಧಾನಿ ಆಗಿರಬಹುದು ಅವರು. ಮೋದಿ ಹುಟ್ಟಿದ್ದೇ ಪ್ರಜಾಪ್ರಭುತ್ವವನ್ನು ನಾಶ ಮಾಡಲು” ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಸುಧೀರ್‌ ಯಾದವ್ ಅವರು, “ಅವರು ಜೋಲಿಗೆ ಎತ್ತಿಕೊಂಡು ನಡೆಯುತ್ತಾರೆ. ದೇಶ ಯುವಕರು ಎಚ್ಚೆತ್ತು, ಈ ಹೆಮ್ಮೆಯ ಮನುಷ್ಯನನ್ನು ಇಲ್ಲಿಂದ ಓಡಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸಾ ಅವರು, ಪ್ರಧಾನಿ ಮೋದಿ ಅವರು ದೇಶಕ್ಕೆ ನೀಡಿರುವ ಕೊಡುಗೆಗಳ ಪಟ್ಟಯನ್ನು ನೀಡಿದ್ದಾರೆ. ಅವುಗಳಲ್ಲಿ, 15 ಕೋಟಿ ಉದ್ಯೋಗ ನಷ್ಟ, 23 ಕೋಟಿ ಜನರು ಬಡತನ ರೇಖೆಗಿಂತ ಕೆಳಗೆ ಇಳಿದಿದ್ದು, ಭಾರತದ ತಲಾ ಆದಾಯ ಬಾಂಗ್ಲಾದೇಶಕ್ಕಿಂತ ಇಳಿದಿದ್ದು, ಲಾಭದಾಯಕ ಸರ್ಕಾರಿ ಉದ್ದಿಮೆಗಳನ್ನು ಮಾಡಿದ್ದು, ಕೊರೊನಾ ದುರಾಡಳಿತ, ಎಲ್‌ಪಿಜಿಗೆ 900 ರೂ, ಪೆಟ್ರೋಲ್‌ಗೆ 110 ರೂ, ಅಡುಗೆ ಎಣ್ಣೆಗೆ 200 ರೂ.

ಒಬೈದುಲ್ಲಾ ಅವರು, “ಭಾರತದಲ್ಲಿ ಮೊಟ್ಟಮೊದಲ ಡಿಜಿಟಲ್ ಕ್ಯಾಮೆರಾ ಮಾರಾಟವಾಗಿದ್ದು 1995 ರಲ್ಲಿ. ಆದರೆ ಮೋದಿ ಅದನ್ನು 1987-88ರಲ್ಲಿ ಬಳಸಿದ್ದಾರೆ” ಎಂದು ಪ್ರಧಾನಿ ಮೋದಿ ಅವರು ಡಿಜಿಟಲ್‌ ಕ್ಯಾಮೆರಾ ಬಗ್ಗೆ ಖಾಸಗಿ ಚಾನೆಲ್‌ ಒಂದರಲ್ಲಿ ಸುಳ್ಳು ಹೇಳುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಜಾಹೀರಾತಿಗೆ ದೆಹಲಿ ಸರ್ಕಾರಿ ಶಾಲೆಗಳ ಫೋಟೊ ಬಳಕೆ: ಥ್ಯಾಂಕ್ಯೂ ಮೋದಿಜೀ ಎಂದ ಆಪ್

ಅನುಪಮ್‌ ಅವರು, “ಇವತ್ತಿನ ‘ಜುಮ್ಲಾ ದಿವಸ್’ ನಿರುದ್ಯೋಗದ ಬಿಕ್ಕಟ್ಟನ್ನು ನಿರ್ಲಕ್ಷಿಸದಂತೆ ಮೋದಿ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನೋಜ್ ಮೆಹ್ತಾ ಅವರು, “ಒಂದು ದಿನ ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ನಿಮ್ಮನ್ನು ಓಡಿಸುತ್ತಾರೆ. ಆಗ ಮೊದಲು ತಪ್ಪಿಸಿಕೊಳ್ಳುವುದು ನಿಮ್ಮ ಕಾರ್ಪೊರೇಟ್ ಸ್ನೇಹಿತರು” ಎಂದು ಬರೆದಿದ್ದಾರೆ.

ವಿನಯ್ ಕುಮಾರ್‌ ದೊಕಾನಿಯಾ ಅವರು, “ಈ ಸಹಸ್ರಮಾನದ ಮಾರಾಟಗಾರ ವಿಶ್ವ ಫೇಕು ದಿನವನ್ನು ಆಚರಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಮಧುರೇಂದ್ರ ಸಿಂಗ್‌ ಅವರು, “ದೇಶಕ್ಕಾಗಿ ಕೊಡುಗೆ ನೀಡಲು ಸಾಧ್ಯವಿಲ್ಲದ ಕಾರಣ ಮಾಲಿಂಗ ನಿವೃತ್ತರಾದರು, ಮೋದಿಜಿ ನೀವು ಯಾವಾಗ ನಿವೃತ್ತರಾಗುತ್ತೀರಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...