Homeಅಂತರಾಷ್ಟ್ರೀಯಬರೋಬ್ಬರಿ 1098 ಕ್ಯಾರೆಟ್‌ನ ಜಗತ್ತಿನ ಮೂರನೇ ಅತಿದೊಡ್ಡ ವಜ್ರ ಬೋಟ್ಸ್ವಾನದಲ್ಲಿ ಪತ್ತೆ

ಬರೋಬ್ಬರಿ 1098 ಕ್ಯಾರೆಟ್‌ನ ಜಗತ್ತಿನ ಮೂರನೇ ಅತಿದೊಡ್ಡ ವಜ್ರ ಬೋಟ್ಸ್ವಾನದಲ್ಲಿ ಪತ್ತೆ

- Advertisement -
- Advertisement -

ಜಗತ್ತಿನಲ್ಲಿ ಅತ್ಯಂತ ಅಮೂಲ್ಯ ವಸ್ತುಗಳ ಪಟ್ಟಿಯಲ್ಲಿ ವಜ್ರವು ಅಗ್ರಸ್ಥಾನವನ್ನು ಪಡೆದಿದೆ. ಅಮೂಲ್ಯವಾದ ವಜ್ರದ ಹರಳುಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಇದೆ. ವಜ್ರದ ಗಣಿಗಳು ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ. ಆಫ್ರಿಕಾದ ಕೆಲವು ದೇಶಗಳನ್ನು ಹೊರತುಪಡಿಸಿದರೆ ಜಗತ್ತಿನಲ್ಲಿ‌ ಇನ್ನೆಲ್ಲೂ ಹೇರಳವಾದ ವಜ್ರದ ಗಣಿಗಳಿಲ್ಲ. ಈಗ ಜಗತ್ತಿನಲ್ಲಿ ಅನೇಕರ ಹುಬ್ಬೇರಿಸುವ ಅತಿದೊಡ್ಡ ವಜ್ರವೊಂದು ಬೋಟ್ಸ್ವಾನದಲ್ಲಿ ದೊರೆತಿದೆ. ಅತ್ಯಂತ ಶ್ರೇಷ್ಠ ಗುಣಮಟ್ಟದ ಈ ವಜ್ರ ಬರೋಬ್ಬರಿ 1098 ಕ್ಯಾರೆಟ್‌ನದ್ದಾಗಿದೆ. ಸದ್ಯ ಈ ವಜ್ರವನ್ನು ಬೋಟ್ಸ್ವಾನದ ಅಧ್ಯಕ್ಷ ಮೊಕಗ್ವೀತ್ಸಿ ಮಸಿಸಿ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಇದು ಜಗತ್ತಿನ 3 ನೇ ಅತಿದೊಡ್ಡ ವಜ್ರ ಎಂಬ ಹೆಗ್ಗಳಿಕೆ ಪಡೆದಿದೆ.

ಬೋಟ್ಸ್ವಾನ ರಾಜಧಾನಿ ಗಾಬೊರೇನೆ ಪಟ್ಟಣದಿಂದ 75 ಮೈಲಿ ದೂರವಿರುವ ಜ್ವನೆಂಗ್ ಗಣಿಯಿಂದ ಜೂನ್ ಮೊದಲ ವಾರದಲ್ಲಿ ಅದನ್ನು ಹೊರತೆಗೆಯಲಾಗಿತ್ತು.

ಈ ವಜ್ರದ ಗಣಿಯು ದೇಬಸ್ವಾನಾ‌ ಮೈನಿಂಗ್ ಕಂಪನಿ ಮತ್ತು ಬೋಟ್ಸ್ವಾನ ಸರ್ಕಾರದ ಜಂಟಿ ಆಡಳಿತದಲ್ಲಿ ನಡೆಯುತ್ತಿದೆ.

ಈ ವಜ್ರದಿಂದ ಬರುವ ಹಣವನ್ನು ದೇಶದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಬೋಟ್ಸ್ವಾನ ಸರ್ಕಾರ ಟ್ವೀಟ್ ಮಾಡಿದೆ.

1982 ರಲ್ಲಿ ಆರಂಭವಾದ ದಬಸ್ವಾನ ವಜ್ರದ ಗಣಿಯಲ್ಲಿ ವರ್ಷಕ್ಕೆ 12.5 ಮಿಲಯನ್ ನಿಂದ 15 ಮಿಲಯನ್ ಕ್ಯಾರೆಟ್ ವರೆಗೆ ವಜ್ರವನ್ನು ಹೊರತೆಗೆಯಲಾಗುತ್ತದೆ. 1967 ರಲ್ಲಿ ಮೊಟ್ಟ ಮೊದಲ ಬಾರಿಗೆ ಬೋಸ್ವಾನಾದಲ್ಲಿ ವಜ್ರ ಸಿಕ್ಕಿತ್ತು.

ಜಗತ್ತಿನ ಅತಿದೊಡ್ಡ ವಜ್ರವು 1905 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿತ್ತು. ಅದನ್ನು ಕ್ಯುಲಿನನ್ ಡೈಮೆಂಡ್ ಎಂದು ಕರೆಯಲಾಗುತ್ತದೆ. 3,106 ಕ್ಯಾರೆಟ್‌ನ ಓ ವಜ್ರವನ್ನು ಚಿಕ್ಕ ಚಿಕ್ಕ ತುಣುಕುಗಳನ್ನಾಗಿ ಮಾಡಿ ಬ್ರಿಟನ್ ರಾಣಿಯ ಕಿರೀಟಕ್ಕೆ ಅಲಂಕರಿಸಲಾಗಿತ್ತು.

ಜಗತ್ತಿನ ಎರಡನೇ ಅತಿದೊಡ್ಡ ವಜ್ರವು 2015 ರಲ್ಲಿ ಬೋಟ್ಸ್ವಾನದಲ್ಲಿಯೇ ಪತ್ತೆಯಾಗಿತ್ತು. ಕೆನಡಾದ ಮೈನಿಂಗ್ ಕಂಪನಿ ಲ್ಯುಕಾರ ಕರೋವೆ ಗಣಿಯಲ್ಲಿ ಈ ವಜ್ರವನ್ನು ಹೊರತೆಗೆದಿತ್ತು. ಎರಡು ವರ್ಷಗಳ ನಂತರ 1,109 ಕ್ಯಾರೆಟ್‌ನ ಈ ವಜ್ರವನ್ನು 55 ಮಿಲಿಯನ್ ಡಾಲರ್ ಬೆಲೆಗೆ ಪ್ರಸಿದ್ಧ ವಜ್ರಾಭರಣ ತಯಾರಿಕಾ ಸಂಸ್ಥೆ ಗ್ರಾಫ್ ಖರೀದಿಸಿತ್ತು.


ಇದನ್ನೂ ಓದಿ: ಮುಸ್ಲಿಂ ವೃದ್ಧರ ಮೇಲೆ ಹಲ್ಲೆ ಪ್ರಕರಣ: ಟ್ವಿಟರ್‌ ಇಂಡಿಯಾ ಎಂಡಿಗೆ ಯುಪಿ ಪೊಲೀಸರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...