Homeಅಂತರಾಷ್ಟ್ರೀಯಬರೋಬ್ಬರಿ 1098 ಕ್ಯಾರೆಟ್‌ನ ಜಗತ್ತಿನ ಮೂರನೇ ಅತಿದೊಡ್ಡ ವಜ್ರ ಬೋಟ್ಸ್ವಾನದಲ್ಲಿ ಪತ್ತೆ

ಬರೋಬ್ಬರಿ 1098 ಕ್ಯಾರೆಟ್‌ನ ಜಗತ್ತಿನ ಮೂರನೇ ಅತಿದೊಡ್ಡ ವಜ್ರ ಬೋಟ್ಸ್ವಾನದಲ್ಲಿ ಪತ್ತೆ

- Advertisement -
- Advertisement -

ಜಗತ್ತಿನಲ್ಲಿ ಅತ್ಯಂತ ಅಮೂಲ್ಯ ವಸ್ತುಗಳ ಪಟ್ಟಿಯಲ್ಲಿ ವಜ್ರವು ಅಗ್ರಸ್ಥಾನವನ್ನು ಪಡೆದಿದೆ. ಅಮೂಲ್ಯವಾದ ವಜ್ರದ ಹರಳುಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಇದೆ. ವಜ್ರದ ಗಣಿಗಳು ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ. ಆಫ್ರಿಕಾದ ಕೆಲವು ದೇಶಗಳನ್ನು ಹೊರತುಪಡಿಸಿದರೆ ಜಗತ್ತಿನಲ್ಲಿ‌ ಇನ್ನೆಲ್ಲೂ ಹೇರಳವಾದ ವಜ್ರದ ಗಣಿಗಳಿಲ್ಲ. ಈಗ ಜಗತ್ತಿನಲ್ಲಿ ಅನೇಕರ ಹುಬ್ಬೇರಿಸುವ ಅತಿದೊಡ್ಡ ವಜ್ರವೊಂದು ಬೋಟ್ಸ್ವಾನದಲ್ಲಿ ದೊರೆತಿದೆ. ಅತ್ಯಂತ ಶ್ರೇಷ್ಠ ಗುಣಮಟ್ಟದ ಈ ವಜ್ರ ಬರೋಬ್ಬರಿ 1098 ಕ್ಯಾರೆಟ್‌ನದ್ದಾಗಿದೆ. ಸದ್ಯ ಈ ವಜ್ರವನ್ನು ಬೋಟ್ಸ್ವಾನದ ಅಧ್ಯಕ್ಷ ಮೊಕಗ್ವೀತ್ಸಿ ಮಸಿಸಿ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಇದು ಜಗತ್ತಿನ 3 ನೇ ಅತಿದೊಡ್ಡ ವಜ್ರ ಎಂಬ ಹೆಗ್ಗಳಿಕೆ ಪಡೆದಿದೆ.

ಬೋಟ್ಸ್ವಾನ ರಾಜಧಾನಿ ಗಾಬೊರೇನೆ ಪಟ್ಟಣದಿಂದ 75 ಮೈಲಿ ದೂರವಿರುವ ಜ್ವನೆಂಗ್ ಗಣಿಯಿಂದ ಜೂನ್ ಮೊದಲ ವಾರದಲ್ಲಿ ಅದನ್ನು ಹೊರತೆಗೆಯಲಾಗಿತ್ತು.

ಈ ವಜ್ರದ ಗಣಿಯು ದೇಬಸ್ವಾನಾ‌ ಮೈನಿಂಗ್ ಕಂಪನಿ ಮತ್ತು ಬೋಟ್ಸ್ವಾನ ಸರ್ಕಾರದ ಜಂಟಿ ಆಡಳಿತದಲ್ಲಿ ನಡೆಯುತ್ತಿದೆ.

ಈ ವಜ್ರದಿಂದ ಬರುವ ಹಣವನ್ನು ದೇಶದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಬೋಟ್ಸ್ವಾನ ಸರ್ಕಾರ ಟ್ವೀಟ್ ಮಾಡಿದೆ.

1982 ರಲ್ಲಿ ಆರಂಭವಾದ ದಬಸ್ವಾನ ವಜ್ರದ ಗಣಿಯಲ್ಲಿ ವರ್ಷಕ್ಕೆ 12.5 ಮಿಲಯನ್ ನಿಂದ 15 ಮಿಲಯನ್ ಕ್ಯಾರೆಟ್ ವರೆಗೆ ವಜ್ರವನ್ನು ಹೊರತೆಗೆಯಲಾಗುತ್ತದೆ. 1967 ರಲ್ಲಿ ಮೊಟ್ಟ ಮೊದಲ ಬಾರಿಗೆ ಬೋಸ್ವಾನಾದಲ್ಲಿ ವಜ್ರ ಸಿಕ್ಕಿತ್ತು.

ಜಗತ್ತಿನ ಅತಿದೊಡ್ಡ ವಜ್ರವು 1905 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿತ್ತು. ಅದನ್ನು ಕ್ಯುಲಿನನ್ ಡೈಮೆಂಡ್ ಎಂದು ಕರೆಯಲಾಗುತ್ತದೆ. 3,106 ಕ್ಯಾರೆಟ್‌ನ ಓ ವಜ್ರವನ್ನು ಚಿಕ್ಕ ಚಿಕ್ಕ ತುಣುಕುಗಳನ್ನಾಗಿ ಮಾಡಿ ಬ್ರಿಟನ್ ರಾಣಿಯ ಕಿರೀಟಕ್ಕೆ ಅಲಂಕರಿಸಲಾಗಿತ್ತು.

ಜಗತ್ತಿನ ಎರಡನೇ ಅತಿದೊಡ್ಡ ವಜ್ರವು 2015 ರಲ್ಲಿ ಬೋಟ್ಸ್ವಾನದಲ್ಲಿಯೇ ಪತ್ತೆಯಾಗಿತ್ತು. ಕೆನಡಾದ ಮೈನಿಂಗ್ ಕಂಪನಿ ಲ್ಯುಕಾರ ಕರೋವೆ ಗಣಿಯಲ್ಲಿ ಈ ವಜ್ರವನ್ನು ಹೊರತೆಗೆದಿತ್ತು. ಎರಡು ವರ್ಷಗಳ ನಂತರ 1,109 ಕ್ಯಾರೆಟ್‌ನ ಈ ವಜ್ರವನ್ನು 55 ಮಿಲಿಯನ್ ಡಾಲರ್ ಬೆಲೆಗೆ ಪ್ರಸಿದ್ಧ ವಜ್ರಾಭರಣ ತಯಾರಿಕಾ ಸಂಸ್ಥೆ ಗ್ರಾಫ್ ಖರೀದಿಸಿತ್ತು.


ಇದನ್ನೂ ಓದಿ: ಮುಸ್ಲಿಂ ವೃದ್ಧರ ಮೇಲೆ ಹಲ್ಲೆ ಪ್ರಕರಣ: ಟ್ವಿಟರ್‌ ಇಂಡಿಯಾ ಎಂಡಿಗೆ ಯುಪಿ ಪೊಲೀಸರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...