Homeಅಂತರಾಷ್ಟ್ರೀಯಬರೋಬ್ಬರಿ 1098 ಕ್ಯಾರೆಟ್‌ನ ಜಗತ್ತಿನ ಮೂರನೇ ಅತಿದೊಡ್ಡ ವಜ್ರ ಬೋಟ್ಸ್ವಾನದಲ್ಲಿ ಪತ್ತೆ

ಬರೋಬ್ಬರಿ 1098 ಕ್ಯಾರೆಟ್‌ನ ಜಗತ್ತಿನ ಮೂರನೇ ಅತಿದೊಡ್ಡ ವಜ್ರ ಬೋಟ್ಸ್ವಾನದಲ್ಲಿ ಪತ್ತೆ

- Advertisement -
- Advertisement -

ಜಗತ್ತಿನಲ್ಲಿ ಅತ್ಯಂತ ಅಮೂಲ್ಯ ವಸ್ತುಗಳ ಪಟ್ಟಿಯಲ್ಲಿ ವಜ್ರವು ಅಗ್ರಸ್ಥಾನವನ್ನು ಪಡೆದಿದೆ. ಅಮೂಲ್ಯವಾದ ವಜ್ರದ ಹರಳುಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಇದೆ. ವಜ್ರದ ಗಣಿಗಳು ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ. ಆಫ್ರಿಕಾದ ಕೆಲವು ದೇಶಗಳನ್ನು ಹೊರತುಪಡಿಸಿದರೆ ಜಗತ್ತಿನಲ್ಲಿ‌ ಇನ್ನೆಲ್ಲೂ ಹೇರಳವಾದ ವಜ್ರದ ಗಣಿಗಳಿಲ್ಲ. ಈಗ ಜಗತ್ತಿನಲ್ಲಿ ಅನೇಕರ ಹುಬ್ಬೇರಿಸುವ ಅತಿದೊಡ್ಡ ವಜ್ರವೊಂದು ಬೋಟ್ಸ್ವಾನದಲ್ಲಿ ದೊರೆತಿದೆ. ಅತ್ಯಂತ ಶ್ರೇಷ್ಠ ಗುಣಮಟ್ಟದ ಈ ವಜ್ರ ಬರೋಬ್ಬರಿ 1098 ಕ್ಯಾರೆಟ್‌ನದ್ದಾಗಿದೆ. ಸದ್ಯ ಈ ವಜ್ರವನ್ನು ಬೋಟ್ಸ್ವಾನದ ಅಧ್ಯಕ್ಷ ಮೊಕಗ್ವೀತ್ಸಿ ಮಸಿಸಿ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಇದು ಜಗತ್ತಿನ 3 ನೇ ಅತಿದೊಡ್ಡ ವಜ್ರ ಎಂಬ ಹೆಗ್ಗಳಿಕೆ ಪಡೆದಿದೆ.

ಬೋಟ್ಸ್ವಾನ ರಾಜಧಾನಿ ಗಾಬೊರೇನೆ ಪಟ್ಟಣದಿಂದ 75 ಮೈಲಿ ದೂರವಿರುವ ಜ್ವನೆಂಗ್ ಗಣಿಯಿಂದ ಜೂನ್ ಮೊದಲ ವಾರದಲ್ಲಿ ಅದನ್ನು ಹೊರತೆಗೆಯಲಾಗಿತ್ತು.

ಈ ವಜ್ರದ ಗಣಿಯು ದೇಬಸ್ವಾನಾ‌ ಮೈನಿಂಗ್ ಕಂಪನಿ ಮತ್ತು ಬೋಟ್ಸ್ವಾನ ಸರ್ಕಾರದ ಜಂಟಿ ಆಡಳಿತದಲ್ಲಿ ನಡೆಯುತ್ತಿದೆ.

ಈ ವಜ್ರದಿಂದ ಬರುವ ಹಣವನ್ನು ದೇಶದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಬೋಟ್ಸ್ವಾನ ಸರ್ಕಾರ ಟ್ವೀಟ್ ಮಾಡಿದೆ.

1982 ರಲ್ಲಿ ಆರಂಭವಾದ ದಬಸ್ವಾನ ವಜ್ರದ ಗಣಿಯಲ್ಲಿ ವರ್ಷಕ್ಕೆ 12.5 ಮಿಲಯನ್ ನಿಂದ 15 ಮಿಲಯನ್ ಕ್ಯಾರೆಟ್ ವರೆಗೆ ವಜ್ರವನ್ನು ಹೊರತೆಗೆಯಲಾಗುತ್ತದೆ. 1967 ರಲ್ಲಿ ಮೊಟ್ಟ ಮೊದಲ ಬಾರಿಗೆ ಬೋಸ್ವಾನಾದಲ್ಲಿ ವಜ್ರ ಸಿಕ್ಕಿತ್ತು.

ಜಗತ್ತಿನ ಅತಿದೊಡ್ಡ ವಜ್ರವು 1905 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿತ್ತು. ಅದನ್ನು ಕ್ಯುಲಿನನ್ ಡೈಮೆಂಡ್ ಎಂದು ಕರೆಯಲಾಗುತ್ತದೆ. 3,106 ಕ್ಯಾರೆಟ್‌ನ ಓ ವಜ್ರವನ್ನು ಚಿಕ್ಕ ಚಿಕ್ಕ ತುಣುಕುಗಳನ್ನಾಗಿ ಮಾಡಿ ಬ್ರಿಟನ್ ರಾಣಿಯ ಕಿರೀಟಕ್ಕೆ ಅಲಂಕರಿಸಲಾಗಿತ್ತು.

ಜಗತ್ತಿನ ಎರಡನೇ ಅತಿದೊಡ್ಡ ವಜ್ರವು 2015 ರಲ್ಲಿ ಬೋಟ್ಸ್ವಾನದಲ್ಲಿಯೇ ಪತ್ತೆಯಾಗಿತ್ತು. ಕೆನಡಾದ ಮೈನಿಂಗ್ ಕಂಪನಿ ಲ್ಯುಕಾರ ಕರೋವೆ ಗಣಿಯಲ್ಲಿ ಈ ವಜ್ರವನ್ನು ಹೊರತೆಗೆದಿತ್ತು. ಎರಡು ವರ್ಷಗಳ ನಂತರ 1,109 ಕ್ಯಾರೆಟ್‌ನ ಈ ವಜ್ರವನ್ನು 55 ಮಿಲಿಯನ್ ಡಾಲರ್ ಬೆಲೆಗೆ ಪ್ರಸಿದ್ಧ ವಜ್ರಾಭರಣ ತಯಾರಿಕಾ ಸಂಸ್ಥೆ ಗ್ರಾಫ್ ಖರೀದಿಸಿತ್ತು.


ಇದನ್ನೂ ಓದಿ: ಮುಸ್ಲಿಂ ವೃದ್ಧರ ಮೇಲೆ ಹಲ್ಲೆ ಪ್ರಕರಣ: ಟ್ವಿಟರ್‌ ಇಂಡಿಯಾ ಎಂಡಿಗೆ ಯುಪಿ ಪೊಲೀಸರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...