Homeಅಂತರಾಷ್ಟ್ರೀಯಬರೋಬ್ಬರಿ 1098 ಕ್ಯಾರೆಟ್‌ನ ಜಗತ್ತಿನ ಮೂರನೇ ಅತಿದೊಡ್ಡ ವಜ್ರ ಬೋಟ್ಸ್ವಾನದಲ್ಲಿ ಪತ್ತೆ

ಬರೋಬ್ಬರಿ 1098 ಕ್ಯಾರೆಟ್‌ನ ಜಗತ್ತಿನ ಮೂರನೇ ಅತಿದೊಡ್ಡ ವಜ್ರ ಬೋಟ್ಸ್ವಾನದಲ್ಲಿ ಪತ್ತೆ

- Advertisement -
- Advertisement -

ಜಗತ್ತಿನಲ್ಲಿ ಅತ್ಯಂತ ಅಮೂಲ್ಯ ವಸ್ತುಗಳ ಪಟ್ಟಿಯಲ್ಲಿ ವಜ್ರವು ಅಗ್ರಸ್ಥಾನವನ್ನು ಪಡೆದಿದೆ. ಅಮೂಲ್ಯವಾದ ವಜ್ರದ ಹರಳುಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಇದೆ. ವಜ್ರದ ಗಣಿಗಳು ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ. ಆಫ್ರಿಕಾದ ಕೆಲವು ದೇಶಗಳನ್ನು ಹೊರತುಪಡಿಸಿದರೆ ಜಗತ್ತಿನಲ್ಲಿ‌ ಇನ್ನೆಲ್ಲೂ ಹೇರಳವಾದ ವಜ್ರದ ಗಣಿಗಳಿಲ್ಲ. ಈಗ ಜಗತ್ತಿನಲ್ಲಿ ಅನೇಕರ ಹುಬ್ಬೇರಿಸುವ ಅತಿದೊಡ್ಡ ವಜ್ರವೊಂದು ಬೋಟ್ಸ್ವಾನದಲ್ಲಿ ದೊರೆತಿದೆ. ಅತ್ಯಂತ ಶ್ರೇಷ್ಠ ಗುಣಮಟ್ಟದ ಈ ವಜ್ರ ಬರೋಬ್ಬರಿ 1098 ಕ್ಯಾರೆಟ್‌ನದ್ದಾಗಿದೆ. ಸದ್ಯ ಈ ವಜ್ರವನ್ನು ಬೋಟ್ಸ್ವಾನದ ಅಧ್ಯಕ್ಷ ಮೊಕಗ್ವೀತ್ಸಿ ಮಸಿಸಿ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಇದು ಜಗತ್ತಿನ 3 ನೇ ಅತಿದೊಡ್ಡ ವಜ್ರ ಎಂಬ ಹೆಗ್ಗಳಿಕೆ ಪಡೆದಿದೆ.

ಬೋಟ್ಸ್ವಾನ ರಾಜಧಾನಿ ಗಾಬೊರೇನೆ ಪಟ್ಟಣದಿಂದ 75 ಮೈಲಿ ದೂರವಿರುವ ಜ್ವನೆಂಗ್ ಗಣಿಯಿಂದ ಜೂನ್ ಮೊದಲ ವಾರದಲ್ಲಿ ಅದನ್ನು ಹೊರತೆಗೆಯಲಾಗಿತ್ತು.

ಈ ವಜ್ರದ ಗಣಿಯು ದೇಬಸ್ವಾನಾ‌ ಮೈನಿಂಗ್ ಕಂಪನಿ ಮತ್ತು ಬೋಟ್ಸ್ವಾನ ಸರ್ಕಾರದ ಜಂಟಿ ಆಡಳಿತದಲ್ಲಿ ನಡೆಯುತ್ತಿದೆ.

ಈ ವಜ್ರದಿಂದ ಬರುವ ಹಣವನ್ನು ದೇಶದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಬೋಟ್ಸ್ವಾನ ಸರ್ಕಾರ ಟ್ವೀಟ್ ಮಾಡಿದೆ.

1982 ರಲ್ಲಿ ಆರಂಭವಾದ ದಬಸ್ವಾನ ವಜ್ರದ ಗಣಿಯಲ್ಲಿ ವರ್ಷಕ್ಕೆ 12.5 ಮಿಲಯನ್ ನಿಂದ 15 ಮಿಲಯನ್ ಕ್ಯಾರೆಟ್ ವರೆಗೆ ವಜ್ರವನ್ನು ಹೊರತೆಗೆಯಲಾಗುತ್ತದೆ. 1967 ರಲ್ಲಿ ಮೊಟ್ಟ ಮೊದಲ ಬಾರಿಗೆ ಬೋಸ್ವಾನಾದಲ್ಲಿ ವಜ್ರ ಸಿಕ್ಕಿತ್ತು.

ಜಗತ್ತಿನ ಅತಿದೊಡ್ಡ ವಜ್ರವು 1905 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿತ್ತು. ಅದನ್ನು ಕ್ಯುಲಿನನ್ ಡೈಮೆಂಡ್ ಎಂದು ಕರೆಯಲಾಗುತ್ತದೆ. 3,106 ಕ್ಯಾರೆಟ್‌ನ ಓ ವಜ್ರವನ್ನು ಚಿಕ್ಕ ಚಿಕ್ಕ ತುಣುಕುಗಳನ್ನಾಗಿ ಮಾಡಿ ಬ್ರಿಟನ್ ರಾಣಿಯ ಕಿರೀಟಕ್ಕೆ ಅಲಂಕರಿಸಲಾಗಿತ್ತು.

ಜಗತ್ತಿನ ಎರಡನೇ ಅತಿದೊಡ್ಡ ವಜ್ರವು 2015 ರಲ್ಲಿ ಬೋಟ್ಸ್ವಾನದಲ್ಲಿಯೇ ಪತ್ತೆಯಾಗಿತ್ತು. ಕೆನಡಾದ ಮೈನಿಂಗ್ ಕಂಪನಿ ಲ್ಯುಕಾರ ಕರೋವೆ ಗಣಿಯಲ್ಲಿ ಈ ವಜ್ರವನ್ನು ಹೊರತೆಗೆದಿತ್ತು. ಎರಡು ವರ್ಷಗಳ ನಂತರ 1,109 ಕ್ಯಾರೆಟ್‌ನ ಈ ವಜ್ರವನ್ನು 55 ಮಿಲಿಯನ್ ಡಾಲರ್ ಬೆಲೆಗೆ ಪ್ರಸಿದ್ಧ ವಜ್ರಾಭರಣ ತಯಾರಿಕಾ ಸಂಸ್ಥೆ ಗ್ರಾಫ್ ಖರೀದಿಸಿತ್ತು.


ಇದನ್ನೂ ಓದಿ: ಮುಸ್ಲಿಂ ವೃದ್ಧರ ಮೇಲೆ ಹಲ್ಲೆ ಪ್ರಕರಣ: ಟ್ವಿಟರ್‌ ಇಂಡಿಯಾ ಎಂಡಿಗೆ ಯುಪಿ ಪೊಲೀಸರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....