Homeಮುಖಪುಟವಿಶ್ವದಲ್ಲೆ ಅಗ್ಗದ ಸ್ಮಾರ್ಟ್‌ಫೋನ್‌‌ ಸೆಪ್ಟೆಂಬರ್‌‌ 10 ರಂದು ಬಿಡುಗಡೆ: ಮುಖೇಶ್‌ ಅಂಬಾನಿ

ವಿಶ್ವದಲ್ಲೆ ಅಗ್ಗದ ಸ್ಮಾರ್ಟ್‌ಫೋನ್‌‌ ಸೆಪ್ಟೆಂಬರ್‌‌ 10 ರಂದು ಬಿಡುಗಡೆ: ಮುಖೇಶ್‌ ಅಂಬಾನಿ

- Advertisement -
- Advertisement -

ಭಾರತದಲ್ಲಿ ವಿಶ್ವದಲ್ಲೇ ಅಗ್ಗದ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಗೂಗಲ್ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿದ ಹೊಸ ‘ಜಿಯೋಫೋನ್ ನೆಕ್ಸ್ಟ್’ ಸೆಪ್ಟೆಂಬರ್ 10 ರ ಗಣೇಶ ಚತುರ್ಥಿ ದಿನದಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಗುರುವಾರ ತಿಳಿಸಿದ್ದಾರೆ.

“ನಿರ್ದಿಷ್ಟವಾಗಿ ಈ ಫೋನ್‌ಗಾಗಿಯೆ ನಮ್ಮ ತಂಡಗಳು ಆಂಡ್ರಾಯ್ಡ್‌ನ ವಿಶೇಷ ಆವೃತ್ತಿಯನ್ನು ಅತ್ಯುತ್ತಮಗೊಳಿಸಿವೆ. ಈ ಫೋನ್‌ ಅನ್ನು ಭಾರತಕ್ಕಾಗಿಯೆ ತಯಾರಿಸಲಾಗಿದ್ದು, ಮೊದಲ ಬಾರಿಗೆ ಸ್ಮಾರ್ಟ್‌ಫೋನ್ ಬಳಸುವ ಬಳಕೆದಾರರಿಗಾಗಿ ನಿರ್ಮಿಸಲಾಗಿದೆ” ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ.

“ನಮ್ಮ ಜೀವನ ಮತ್ತು ಕೆಲಸದ ಹಲವು ಅಂಶಗಳು ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಸಮಯದಲ್ಲಿ, ತಂತ್ರಜ್ಞಾನವನ್ನು ಎಲ್ಲರಿಗೂ ಇನ್ನೂ ಸುಲಭವಾಗಿ ಮತ್ತು ಸಹಾಯಕವಾಗುವಂತೆ ಮಾಡುವುದು ಮುಖ್ಯವಾಗಿದೆ. ರಿಲಯನ್ಸ್ ಜಿಯೋ ಜೊತೆಗಿನ ನಮ್ಮ ಪಾಲುದಾರಿಕೆಯ ಮುಖ್ಯ ಗುರಿ ಇದಾಗಿದೆ” ಎಂದು ಸುಂದರ್‌‌ ಪಿಚೈ ಹೇಳಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಈ ಫೋನ್‌ ಮೊದಲು ಭಾರತದಲ್ಲಿ ಬಿಡುಗಡೆಯಾಗಲಿದ್ದು, ನಂತರ ಅದನ್ನು ವಿಶ್ವದ ಇತರ ಭಾಗಗಳಲ್ಲಿ ಬಿಡುಗಡೆಯಾಗಲಿದೆ.

ಆದರೆ ಭಾರತೀಯರು ಅಗ್ಗದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಕಡಿಮೆ ಆಸಕ್ತಿ ತೋರುತ್ತಿದ್ದು, ಇಂತಹ ಸಮಯದಲ್ಲಿ ಈ ಸ್ಮಾರ್ಟ್ ಫೋನ್‌ ಬಿಡುಗಡೆಯಾಗುತ್ತಿದೆ.

ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ 100 ಡಾಲರ್‌‌ಗಳ ಸ್ಮಾರ್ಟ್‌ಫೋನ್‌ ಕೇವಲ 12% ರಷ್ಟು ಮಾತ್ರ ಬೇಡಿಕೆಯಿದೆ. ಈ ರೇಂಜ್‌ನ ಫೋನ್‌ಗಳಿಗೆ 2019 ರಲ್ಲಿ 18% ಮತ್ತು 2018 ರಲ್ಲಿ 24% ದಷ್ಟು ಬೇಡಿಕೆಯಿತ್ತು ಎಂದು ಟೆಕ್‌ಕ್ರಂಚ್ ವೆಬ್‌ಸೈಟ್‌ನ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ಉಲ್ಲೇಖಿಸಿದೆ.

50 ಡಾಲರ್‌ ರೇಂಜ್‌ನ ಸ್ಮಾರ್ಟ್‌ಫೋನ್‌ಗಳ ಬೇಡಿಕೆ ಇನ್ನೂ ಕಡಿಮೆಯಿದೆ. 2020 ರ ಮಾಹಿತಿಯಂತೆ ಈ ರೇಂಜ್‌ನ ಸ್ಮಾರ್ಟ್‌ಫೋನ್‌ನ ಬೇಡಿಕೆಯು ಮಾರುಕಟ್ಟೆಯಲ್ಲಿ ಕೇವಲ 0.3% ನಷ್ಟಿತ್ತು. ಮಾರುಕಟ್ಟೆಯಲ್ಲಿ ಎರಡು ವರ್ಷಗಳ ಹಿಂದೆ ಈ ರೇಂಜ್‌ನ ಸ್ಮಾರ್ಟ್‌ಫೋನ್‌ಗಳ ಬೇಡಿಕೆಯು 4.3% ಇದ್ದವು.

ಪ್ರಸ್ತುತ ಬಿಡುಗಡೆಯಾಗುತ್ತಿರುವ ಜಿಯೋಫೋನ್‌ನ ಬೆಲೆ ಮತ್ತು ಅದರ ಇತರ ವಿವರಗಳ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...