Homeಮುಖಪುಟವಿಶ್ವದಲ್ಲೆ ಅಗ್ಗದ ಸ್ಮಾರ್ಟ್‌ಫೋನ್‌‌ ಸೆಪ್ಟೆಂಬರ್‌‌ 10 ರಂದು ಬಿಡುಗಡೆ: ಮುಖೇಶ್‌ ಅಂಬಾನಿ

ವಿಶ್ವದಲ್ಲೆ ಅಗ್ಗದ ಸ್ಮಾರ್ಟ್‌ಫೋನ್‌‌ ಸೆಪ್ಟೆಂಬರ್‌‌ 10 ರಂದು ಬಿಡುಗಡೆ: ಮುಖೇಶ್‌ ಅಂಬಾನಿ

- Advertisement -
- Advertisement -

ಭಾರತದಲ್ಲಿ ವಿಶ್ವದಲ್ಲೇ ಅಗ್ಗದ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಗೂಗಲ್ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿದ ಹೊಸ ‘ಜಿಯೋಫೋನ್ ನೆಕ್ಸ್ಟ್’ ಸೆಪ್ಟೆಂಬರ್ 10 ರ ಗಣೇಶ ಚತುರ್ಥಿ ದಿನದಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಗುರುವಾರ ತಿಳಿಸಿದ್ದಾರೆ.

“ನಿರ್ದಿಷ್ಟವಾಗಿ ಈ ಫೋನ್‌ಗಾಗಿಯೆ ನಮ್ಮ ತಂಡಗಳು ಆಂಡ್ರಾಯ್ಡ್‌ನ ವಿಶೇಷ ಆವೃತ್ತಿಯನ್ನು ಅತ್ಯುತ್ತಮಗೊಳಿಸಿವೆ. ಈ ಫೋನ್‌ ಅನ್ನು ಭಾರತಕ್ಕಾಗಿಯೆ ತಯಾರಿಸಲಾಗಿದ್ದು, ಮೊದಲ ಬಾರಿಗೆ ಸ್ಮಾರ್ಟ್‌ಫೋನ್ ಬಳಸುವ ಬಳಕೆದಾರರಿಗಾಗಿ ನಿರ್ಮಿಸಲಾಗಿದೆ” ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ.

“ನಮ್ಮ ಜೀವನ ಮತ್ತು ಕೆಲಸದ ಹಲವು ಅಂಶಗಳು ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಸಮಯದಲ್ಲಿ, ತಂತ್ರಜ್ಞಾನವನ್ನು ಎಲ್ಲರಿಗೂ ಇನ್ನೂ ಸುಲಭವಾಗಿ ಮತ್ತು ಸಹಾಯಕವಾಗುವಂತೆ ಮಾಡುವುದು ಮುಖ್ಯವಾಗಿದೆ. ರಿಲಯನ್ಸ್ ಜಿಯೋ ಜೊತೆಗಿನ ನಮ್ಮ ಪಾಲುದಾರಿಕೆಯ ಮುಖ್ಯ ಗುರಿ ಇದಾಗಿದೆ” ಎಂದು ಸುಂದರ್‌‌ ಪಿಚೈ ಹೇಳಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಈ ಫೋನ್‌ ಮೊದಲು ಭಾರತದಲ್ಲಿ ಬಿಡುಗಡೆಯಾಗಲಿದ್ದು, ನಂತರ ಅದನ್ನು ವಿಶ್ವದ ಇತರ ಭಾಗಗಳಲ್ಲಿ ಬಿಡುಗಡೆಯಾಗಲಿದೆ.

ಆದರೆ ಭಾರತೀಯರು ಅಗ್ಗದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಕಡಿಮೆ ಆಸಕ್ತಿ ತೋರುತ್ತಿದ್ದು, ಇಂತಹ ಸಮಯದಲ್ಲಿ ಈ ಸ್ಮಾರ್ಟ್ ಫೋನ್‌ ಬಿಡುಗಡೆಯಾಗುತ್ತಿದೆ.

ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ 100 ಡಾಲರ್‌‌ಗಳ ಸ್ಮಾರ್ಟ್‌ಫೋನ್‌ ಕೇವಲ 12% ರಷ್ಟು ಮಾತ್ರ ಬೇಡಿಕೆಯಿದೆ. ಈ ರೇಂಜ್‌ನ ಫೋನ್‌ಗಳಿಗೆ 2019 ರಲ್ಲಿ 18% ಮತ್ತು 2018 ರಲ್ಲಿ 24% ದಷ್ಟು ಬೇಡಿಕೆಯಿತ್ತು ಎಂದು ಟೆಕ್‌ಕ್ರಂಚ್ ವೆಬ್‌ಸೈಟ್‌ನ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ಉಲ್ಲೇಖಿಸಿದೆ.

50 ಡಾಲರ್‌ ರೇಂಜ್‌ನ ಸ್ಮಾರ್ಟ್‌ಫೋನ್‌ಗಳ ಬೇಡಿಕೆ ಇನ್ನೂ ಕಡಿಮೆಯಿದೆ. 2020 ರ ಮಾಹಿತಿಯಂತೆ ಈ ರೇಂಜ್‌ನ ಸ್ಮಾರ್ಟ್‌ಫೋನ್‌ನ ಬೇಡಿಕೆಯು ಮಾರುಕಟ್ಟೆಯಲ್ಲಿ ಕೇವಲ 0.3% ನಷ್ಟಿತ್ತು. ಮಾರುಕಟ್ಟೆಯಲ್ಲಿ ಎರಡು ವರ್ಷಗಳ ಹಿಂದೆ ಈ ರೇಂಜ್‌ನ ಸ್ಮಾರ್ಟ್‌ಫೋನ್‌ಗಳ ಬೇಡಿಕೆಯು 4.3% ಇದ್ದವು.

ಪ್ರಸ್ತುತ ಬಿಡುಗಡೆಯಾಗುತ್ತಿರುವ ಜಿಯೋಫೋನ್‌ನ ಬೆಲೆ ಮತ್ತು ಅದರ ಇತರ ವಿವರಗಳ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...