Homeಮುಖಪುಟವಿಶ್ವದಲ್ಲೆ ಅಗ್ಗದ ಸ್ಮಾರ್ಟ್‌ಫೋನ್‌‌ ಸೆಪ್ಟೆಂಬರ್‌‌ 10 ರಂದು ಬಿಡುಗಡೆ: ಮುಖೇಶ್‌ ಅಂಬಾನಿ

ವಿಶ್ವದಲ್ಲೆ ಅಗ್ಗದ ಸ್ಮಾರ್ಟ್‌ಫೋನ್‌‌ ಸೆಪ್ಟೆಂಬರ್‌‌ 10 ರಂದು ಬಿಡುಗಡೆ: ಮುಖೇಶ್‌ ಅಂಬಾನಿ

- Advertisement -
- Advertisement -

ಭಾರತದಲ್ಲಿ ವಿಶ್ವದಲ್ಲೇ ಅಗ್ಗದ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಗೂಗಲ್ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿದ ಹೊಸ ‘ಜಿಯೋಫೋನ್ ನೆಕ್ಸ್ಟ್’ ಸೆಪ್ಟೆಂಬರ್ 10 ರ ಗಣೇಶ ಚತುರ್ಥಿ ದಿನದಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಗುರುವಾರ ತಿಳಿಸಿದ್ದಾರೆ.

“ನಿರ್ದಿಷ್ಟವಾಗಿ ಈ ಫೋನ್‌ಗಾಗಿಯೆ ನಮ್ಮ ತಂಡಗಳು ಆಂಡ್ರಾಯ್ಡ್‌ನ ವಿಶೇಷ ಆವೃತ್ತಿಯನ್ನು ಅತ್ಯುತ್ತಮಗೊಳಿಸಿವೆ. ಈ ಫೋನ್‌ ಅನ್ನು ಭಾರತಕ್ಕಾಗಿಯೆ ತಯಾರಿಸಲಾಗಿದ್ದು, ಮೊದಲ ಬಾರಿಗೆ ಸ್ಮಾರ್ಟ್‌ಫೋನ್ ಬಳಸುವ ಬಳಕೆದಾರರಿಗಾಗಿ ನಿರ್ಮಿಸಲಾಗಿದೆ” ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ.

“ನಮ್ಮ ಜೀವನ ಮತ್ತು ಕೆಲಸದ ಹಲವು ಅಂಶಗಳು ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಸಮಯದಲ್ಲಿ, ತಂತ್ರಜ್ಞಾನವನ್ನು ಎಲ್ಲರಿಗೂ ಇನ್ನೂ ಸುಲಭವಾಗಿ ಮತ್ತು ಸಹಾಯಕವಾಗುವಂತೆ ಮಾಡುವುದು ಮುಖ್ಯವಾಗಿದೆ. ರಿಲಯನ್ಸ್ ಜಿಯೋ ಜೊತೆಗಿನ ನಮ್ಮ ಪಾಲುದಾರಿಕೆಯ ಮುಖ್ಯ ಗುರಿ ಇದಾಗಿದೆ” ಎಂದು ಸುಂದರ್‌‌ ಪಿಚೈ ಹೇಳಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಈ ಫೋನ್‌ ಮೊದಲು ಭಾರತದಲ್ಲಿ ಬಿಡುಗಡೆಯಾಗಲಿದ್ದು, ನಂತರ ಅದನ್ನು ವಿಶ್ವದ ಇತರ ಭಾಗಗಳಲ್ಲಿ ಬಿಡುಗಡೆಯಾಗಲಿದೆ.

ಆದರೆ ಭಾರತೀಯರು ಅಗ್ಗದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಕಡಿಮೆ ಆಸಕ್ತಿ ತೋರುತ್ತಿದ್ದು, ಇಂತಹ ಸಮಯದಲ್ಲಿ ಈ ಸ್ಮಾರ್ಟ್ ಫೋನ್‌ ಬಿಡುಗಡೆಯಾಗುತ್ತಿದೆ.

ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ 100 ಡಾಲರ್‌‌ಗಳ ಸ್ಮಾರ್ಟ್‌ಫೋನ್‌ ಕೇವಲ 12% ರಷ್ಟು ಮಾತ್ರ ಬೇಡಿಕೆಯಿದೆ. ಈ ರೇಂಜ್‌ನ ಫೋನ್‌ಗಳಿಗೆ 2019 ರಲ್ಲಿ 18% ಮತ್ತು 2018 ರಲ್ಲಿ 24% ದಷ್ಟು ಬೇಡಿಕೆಯಿತ್ತು ಎಂದು ಟೆಕ್‌ಕ್ರಂಚ್ ವೆಬ್‌ಸೈಟ್‌ನ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ಉಲ್ಲೇಖಿಸಿದೆ.

50 ಡಾಲರ್‌ ರೇಂಜ್‌ನ ಸ್ಮಾರ್ಟ್‌ಫೋನ್‌ಗಳ ಬೇಡಿಕೆ ಇನ್ನೂ ಕಡಿಮೆಯಿದೆ. 2020 ರ ಮಾಹಿತಿಯಂತೆ ಈ ರೇಂಜ್‌ನ ಸ್ಮಾರ್ಟ್‌ಫೋನ್‌ನ ಬೇಡಿಕೆಯು ಮಾರುಕಟ್ಟೆಯಲ್ಲಿ ಕೇವಲ 0.3% ನಷ್ಟಿತ್ತು. ಮಾರುಕಟ್ಟೆಯಲ್ಲಿ ಎರಡು ವರ್ಷಗಳ ಹಿಂದೆ ಈ ರೇಂಜ್‌ನ ಸ್ಮಾರ್ಟ್‌ಫೋನ್‌ಗಳ ಬೇಡಿಕೆಯು 4.3% ಇದ್ದವು.

ಪ್ರಸ್ತುತ ಬಿಡುಗಡೆಯಾಗುತ್ತಿರುವ ಜಿಯೋಫೋನ್‌ನ ಬೆಲೆ ಮತ್ತು ಅದರ ಇತರ ವಿವರಗಳ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...