Homeಮುಖಪುಟವಿಶ್ವದಲ್ಲೆ ಅಗ್ಗದ ಸ್ಮಾರ್ಟ್‌ಫೋನ್‌‌ ಸೆಪ್ಟೆಂಬರ್‌‌ 10 ರಂದು ಬಿಡುಗಡೆ: ಮುಖೇಶ್‌ ಅಂಬಾನಿ

ವಿಶ್ವದಲ್ಲೆ ಅಗ್ಗದ ಸ್ಮಾರ್ಟ್‌ಫೋನ್‌‌ ಸೆಪ್ಟೆಂಬರ್‌‌ 10 ರಂದು ಬಿಡುಗಡೆ: ಮುಖೇಶ್‌ ಅಂಬಾನಿ

- Advertisement -
- Advertisement -

ಭಾರತದಲ್ಲಿ ವಿಶ್ವದಲ್ಲೇ ಅಗ್ಗದ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಗೂಗಲ್ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿದ ಹೊಸ ‘ಜಿಯೋಫೋನ್ ನೆಕ್ಸ್ಟ್’ ಸೆಪ್ಟೆಂಬರ್ 10 ರ ಗಣೇಶ ಚತುರ್ಥಿ ದಿನದಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಗುರುವಾರ ತಿಳಿಸಿದ್ದಾರೆ.

“ನಿರ್ದಿಷ್ಟವಾಗಿ ಈ ಫೋನ್‌ಗಾಗಿಯೆ ನಮ್ಮ ತಂಡಗಳು ಆಂಡ್ರಾಯ್ಡ್‌ನ ವಿಶೇಷ ಆವೃತ್ತಿಯನ್ನು ಅತ್ಯುತ್ತಮಗೊಳಿಸಿವೆ. ಈ ಫೋನ್‌ ಅನ್ನು ಭಾರತಕ್ಕಾಗಿಯೆ ತಯಾರಿಸಲಾಗಿದ್ದು, ಮೊದಲ ಬಾರಿಗೆ ಸ್ಮಾರ್ಟ್‌ಫೋನ್ ಬಳಸುವ ಬಳಕೆದಾರರಿಗಾಗಿ ನಿರ್ಮಿಸಲಾಗಿದೆ” ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ.

“ನಮ್ಮ ಜೀವನ ಮತ್ತು ಕೆಲಸದ ಹಲವು ಅಂಶಗಳು ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಸಮಯದಲ್ಲಿ, ತಂತ್ರಜ್ಞಾನವನ್ನು ಎಲ್ಲರಿಗೂ ಇನ್ನೂ ಸುಲಭವಾಗಿ ಮತ್ತು ಸಹಾಯಕವಾಗುವಂತೆ ಮಾಡುವುದು ಮುಖ್ಯವಾಗಿದೆ. ರಿಲಯನ್ಸ್ ಜಿಯೋ ಜೊತೆಗಿನ ನಮ್ಮ ಪಾಲುದಾರಿಕೆಯ ಮುಖ್ಯ ಗುರಿ ಇದಾಗಿದೆ” ಎಂದು ಸುಂದರ್‌‌ ಪಿಚೈ ಹೇಳಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಈ ಫೋನ್‌ ಮೊದಲು ಭಾರತದಲ್ಲಿ ಬಿಡುಗಡೆಯಾಗಲಿದ್ದು, ನಂತರ ಅದನ್ನು ವಿಶ್ವದ ಇತರ ಭಾಗಗಳಲ್ಲಿ ಬಿಡುಗಡೆಯಾಗಲಿದೆ.

ಆದರೆ ಭಾರತೀಯರು ಅಗ್ಗದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಕಡಿಮೆ ಆಸಕ್ತಿ ತೋರುತ್ತಿದ್ದು, ಇಂತಹ ಸಮಯದಲ್ಲಿ ಈ ಸ್ಮಾರ್ಟ್ ಫೋನ್‌ ಬಿಡುಗಡೆಯಾಗುತ್ತಿದೆ.

ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ 100 ಡಾಲರ್‌‌ಗಳ ಸ್ಮಾರ್ಟ್‌ಫೋನ್‌ ಕೇವಲ 12% ರಷ್ಟು ಮಾತ್ರ ಬೇಡಿಕೆಯಿದೆ. ಈ ರೇಂಜ್‌ನ ಫೋನ್‌ಗಳಿಗೆ 2019 ರಲ್ಲಿ 18% ಮತ್ತು 2018 ರಲ್ಲಿ 24% ದಷ್ಟು ಬೇಡಿಕೆಯಿತ್ತು ಎಂದು ಟೆಕ್‌ಕ್ರಂಚ್ ವೆಬ್‌ಸೈಟ್‌ನ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ಉಲ್ಲೇಖಿಸಿದೆ.

50 ಡಾಲರ್‌ ರೇಂಜ್‌ನ ಸ್ಮಾರ್ಟ್‌ಫೋನ್‌ಗಳ ಬೇಡಿಕೆ ಇನ್ನೂ ಕಡಿಮೆಯಿದೆ. 2020 ರ ಮಾಹಿತಿಯಂತೆ ಈ ರೇಂಜ್‌ನ ಸ್ಮಾರ್ಟ್‌ಫೋನ್‌ನ ಬೇಡಿಕೆಯು ಮಾರುಕಟ್ಟೆಯಲ್ಲಿ ಕೇವಲ 0.3% ನಷ್ಟಿತ್ತು. ಮಾರುಕಟ್ಟೆಯಲ್ಲಿ ಎರಡು ವರ್ಷಗಳ ಹಿಂದೆ ಈ ರೇಂಜ್‌ನ ಸ್ಮಾರ್ಟ್‌ಫೋನ್‌ಗಳ ಬೇಡಿಕೆಯು 4.3% ಇದ್ದವು.

ಪ್ರಸ್ತುತ ಬಿಡುಗಡೆಯಾಗುತ್ತಿರುವ ಜಿಯೋಫೋನ್‌ನ ಬೆಲೆ ಮತ್ತು ಅದರ ಇತರ ವಿವರಗಳ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...