Homeಮುಖಪುಟವಿಶ್ವದಲ್ಲೆ ಅಗ್ಗದ ಸ್ಮಾರ್ಟ್‌ಫೋನ್‌‌ ಸೆಪ್ಟೆಂಬರ್‌‌ 10 ರಂದು ಬಿಡುಗಡೆ: ಮುಖೇಶ್‌ ಅಂಬಾನಿ

ವಿಶ್ವದಲ್ಲೆ ಅಗ್ಗದ ಸ್ಮಾರ್ಟ್‌ಫೋನ್‌‌ ಸೆಪ್ಟೆಂಬರ್‌‌ 10 ರಂದು ಬಿಡುಗಡೆ: ಮುಖೇಶ್‌ ಅಂಬಾನಿ

- Advertisement -
- Advertisement -

ಭಾರತದಲ್ಲಿ ವಿಶ್ವದಲ್ಲೇ ಅಗ್ಗದ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಗೂಗಲ್ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿದ ಹೊಸ ‘ಜಿಯೋಫೋನ್ ನೆಕ್ಸ್ಟ್’ ಸೆಪ್ಟೆಂಬರ್ 10 ರ ಗಣೇಶ ಚತುರ್ಥಿ ದಿನದಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಗುರುವಾರ ತಿಳಿಸಿದ್ದಾರೆ.

“ನಿರ್ದಿಷ್ಟವಾಗಿ ಈ ಫೋನ್‌ಗಾಗಿಯೆ ನಮ್ಮ ತಂಡಗಳು ಆಂಡ್ರಾಯ್ಡ್‌ನ ವಿಶೇಷ ಆವೃತ್ತಿಯನ್ನು ಅತ್ಯುತ್ತಮಗೊಳಿಸಿವೆ. ಈ ಫೋನ್‌ ಅನ್ನು ಭಾರತಕ್ಕಾಗಿಯೆ ತಯಾರಿಸಲಾಗಿದ್ದು, ಮೊದಲ ಬಾರಿಗೆ ಸ್ಮಾರ್ಟ್‌ಫೋನ್ ಬಳಸುವ ಬಳಕೆದಾರರಿಗಾಗಿ ನಿರ್ಮಿಸಲಾಗಿದೆ” ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ.

“ನಮ್ಮ ಜೀವನ ಮತ್ತು ಕೆಲಸದ ಹಲವು ಅಂಶಗಳು ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಸಮಯದಲ್ಲಿ, ತಂತ್ರಜ್ಞಾನವನ್ನು ಎಲ್ಲರಿಗೂ ಇನ್ನೂ ಸುಲಭವಾಗಿ ಮತ್ತು ಸಹಾಯಕವಾಗುವಂತೆ ಮಾಡುವುದು ಮುಖ್ಯವಾಗಿದೆ. ರಿಲಯನ್ಸ್ ಜಿಯೋ ಜೊತೆಗಿನ ನಮ್ಮ ಪಾಲುದಾರಿಕೆಯ ಮುಖ್ಯ ಗುರಿ ಇದಾಗಿದೆ” ಎಂದು ಸುಂದರ್‌‌ ಪಿಚೈ ಹೇಳಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಈ ಫೋನ್‌ ಮೊದಲು ಭಾರತದಲ್ಲಿ ಬಿಡುಗಡೆಯಾಗಲಿದ್ದು, ನಂತರ ಅದನ್ನು ವಿಶ್ವದ ಇತರ ಭಾಗಗಳಲ್ಲಿ ಬಿಡುಗಡೆಯಾಗಲಿದೆ.

ಆದರೆ ಭಾರತೀಯರು ಅಗ್ಗದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಕಡಿಮೆ ಆಸಕ್ತಿ ತೋರುತ್ತಿದ್ದು, ಇಂತಹ ಸಮಯದಲ್ಲಿ ಈ ಸ್ಮಾರ್ಟ್ ಫೋನ್‌ ಬಿಡುಗಡೆಯಾಗುತ್ತಿದೆ.

ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ 100 ಡಾಲರ್‌‌ಗಳ ಸ್ಮಾರ್ಟ್‌ಫೋನ್‌ ಕೇವಲ 12% ರಷ್ಟು ಮಾತ್ರ ಬೇಡಿಕೆಯಿದೆ. ಈ ರೇಂಜ್‌ನ ಫೋನ್‌ಗಳಿಗೆ 2019 ರಲ್ಲಿ 18% ಮತ್ತು 2018 ರಲ್ಲಿ 24% ದಷ್ಟು ಬೇಡಿಕೆಯಿತ್ತು ಎಂದು ಟೆಕ್‌ಕ್ರಂಚ್ ವೆಬ್‌ಸೈಟ್‌ನ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ಉಲ್ಲೇಖಿಸಿದೆ.

50 ಡಾಲರ್‌ ರೇಂಜ್‌ನ ಸ್ಮಾರ್ಟ್‌ಫೋನ್‌ಗಳ ಬೇಡಿಕೆ ಇನ್ನೂ ಕಡಿಮೆಯಿದೆ. 2020 ರ ಮಾಹಿತಿಯಂತೆ ಈ ರೇಂಜ್‌ನ ಸ್ಮಾರ್ಟ್‌ಫೋನ್‌ನ ಬೇಡಿಕೆಯು ಮಾರುಕಟ್ಟೆಯಲ್ಲಿ ಕೇವಲ 0.3% ನಷ್ಟಿತ್ತು. ಮಾರುಕಟ್ಟೆಯಲ್ಲಿ ಎರಡು ವರ್ಷಗಳ ಹಿಂದೆ ಈ ರೇಂಜ್‌ನ ಸ್ಮಾರ್ಟ್‌ಫೋನ್‌ಗಳ ಬೇಡಿಕೆಯು 4.3% ಇದ್ದವು.

ಪ್ರಸ್ತುತ ಬಿಡುಗಡೆಯಾಗುತ್ತಿರುವ ಜಿಯೋಫೋನ್‌ನ ಬೆಲೆ ಮತ್ತು ಅದರ ಇತರ ವಿವರಗಳ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ.

ಇದನ್ನೂ ಓದಿ: ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...