Homeಅಂತರಾಷ್ಟ್ರೀಯಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

ಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

- Advertisement -
- Advertisement -

ಭಾರತವಲ್ಲದೇ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮಾವಿನ ಹಣ್ಣಿಗೆ ವಿಶೇಷ ಸ್ಥಾನಮಾನವಿದೆ. ಜಗತ್ತಿನ ಮೂಲೆ ಮೂಲೆಯಲ್ಲಿ ಮಾವಿನ ಹಣ್ಣಿನ ಪ್ರಿಯರಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾವಿನ ಬೆಳೆ ಬಹಳ ಕಡಿಮೆ. ಹಾಗಾಗಿ ಭಾರತ ಸೇರಿ ಏಷ್ಯಾದ ರಾಷ್ಟ್ರಗಳಿಂದ ಅಮೆರಿಕ ಮತ್ತು ಯುರೋಪ್‌ಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣು ರಫ್ತಾಗುತ್ತದೆ. ವಿದೇಶಗಳಿಗೆ ರಫ್ತಾಗುವ ಮಾವಿನ ಹಣ್ಣುಗಳು ವಿಶೇಷ ಗುಣಮಟ್ಟವನ್ನು ಹೊಂದಿರುತ್ತವೆ ಮತ್ತು ಅವುಗಳ ಬೆಲೆಯೂ ಅಷ್ಟೇ ಹೆಚ್ಚಾಗಿರುತ್ತದೆ. ನಾವು ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 100 ರೂಪಾಯಿ ಎಂದರೆ ದುಬಾರಿ ಎಂದುಕೊಳ್ಳುತ್ತೇವೆ. ಆದರೆ ಇಲ್ಲೊಂದು ಮಾವಿನ ಹಣ್ಣಿದೆ. ಇದರ ಬೆಲೆಯನ್ನು ಕೇಳಿದರೆ ನಾವೆಲ್ಲರೂ ಆಶ್ಚರ್ಯಕ್ಕೆ ಒಳಗಾಗುತ್ತೇವೆ. ಹಾಗೇ ಇದು ನಿಜವೇ ಎಂದು ಪ್ರಶ್ನಿಸುತ್ತೇವೆ…

ಹೌದು ಇದು ಅಂತಹದ್ದೇ ಮಾವಿನ ಹಣ್ಣು. ನೋಡಲು ಅಷ್ಟೇ ಸುಂದರ. ಅಷ್ಟೇ ರುಚಿಕರ. ಸುವಾಸನೆ ಭರಿತ ತಳಿ. ಅಷ್ಟೇ ದುಬಾರಿ. ಒಂದು ಕೆಜಿಗೆ 2.7 ಲಕ್ಷ ರುಪಾಯಿ. ಅದು ಯಾವ ಮಾವಿನ ಹಣ್ಣು ಎನ್ನುತ್ತೀರಾ ? ಅದೇ ಜಪಾನ್ ಮೂಲದ ತಳಿಯ ಮಾವಿನ ಹಣ್ಣು ಮಿಯಝಾಕಿ. ಕೆಂಪು-ಬೂದು ಬಣ್ಣದ ಈ ಮಾವಿನ ಹಣ್ಣಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆಯಿದೆ. ಮಧ್ಯಪ್ರದೇಶದ ಕೃಷಿಕ ದಂಪತಿಯೊಂದು ಮಿಯಝಾಕಿ ತಳಿಯ ಮಾವಿನ ಹಣ್ಣನ್ನು ತಮ್ಮ ಹೊಲದಲ್ಲಿ ಬೆಳೆದು ಅಪಾರ ಲಾಭ ಗಳಿಸಿದ್ದಾರೆ.

ದುಬಾರಿ ಈ ಮಾವಿನ ಹಣ್ಣನ್ನು ಕಾಯ್ದುಕೊಳ್ಳುವುದು ಅಷ್ಟು ಸುಲಭವಲ್ಲ. ಹಾಗಾಗಿ ಕೃಷಿ ದಂಪತಿ ಈ ಮಾವಿನ ಹಣ್ಣಿನ ತೋಟಕ್ಕೆ ಗಾರ್ಡ್‌ಗಳನ್ನು ನೇಮಿಸಿದ್ದಾರೆ.

ಮಧ್ಯಪ್ರದೇಶದ ಈ ಕೃಷಿ ದಂಪತಿ ಬೆಳೆದಿರುವ ಮಿಯಝಾಕಿ ಮಾವಿನ ಹಣ್ಣಿನ ಒಂದು ಚಿಕ್ಕ ಹೋಳಿನ ಬೆಲೆಯೇ ಸುಮಾರು 1,000 ರೂಪಾಯಿಗೂ ಅಧಿಕವಾಗಿದೆ ಎಂದರೆ ನೀವು ನಂಬಲಾರರಿ. ಆದರೆ ಇದು ಸತ್ಯ. ಮಧ್ಯಪ್ರದೇಶದ ಈ ಕೃಷಿಕರು ಬೆಳೆದ ಮಿಯಝಾಕಿ ಮಾವಿನ ಹಣ್ಣು ಬೂದು ಬಣ್ಣವನ್ನು ಪಡೆದುಕೊಂಡಿದೆ. ಹಾಗೇ ವಿಶೇಷ ಸುವಾಸನೆಯನ್ನು ಹೊಂದಿದೆ.

ಇದನ್ನೂ ಓದಿ : ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

1970-80 ರಲ್ಲಿ ಜಪಾನ್ ದೇಶದ ಮಿಯಝಾಕಿ ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಳೆಯಲಾದ ಈ ಮಾವಿನ ತಳಿ ಆ ಪಟ್ಟಣದ ಹೆಸರನ್ನೇ ಪಡೆದುಕೊಂಡು ಜಗತ್ತಿನಾದ್ಯಂತ ಮಿಯಝಾಕಿ ಎಂದೇ ಪ್ರಸಿದ್ಧವಾಗಿದೆ. ಜಪಾನ್‌ನಲ್ಲಿ ಆರಂಭವಾದ ಮಿಯಝಾಕಿ ತಳಿಯ ಬೆಳೆ ಕೊರಿಯಾ, ಮಲೇಷ್ಯಾ, ಥೈಲಾಂಡ್ ಹೀಗೆ ಭಾರತದ ಮಧ್ಯಪ್ರದೇಶದವರೆಗೂ ಬಂದಿದೆ. ಸಾಧಾರಣ ಮಾವಿಗಿಂತ 15% ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುವ ಈ ಮಿಯಝಾಕಿ ಮಾವು ಅತ್ಯಂತ ಕಡಿಮೆ ಆಮ್ಲದ ಗುಣವನ್ನು ಹೊಂದಿದೆ. ಏಪ್ರಿಲ್ ನಿಂದ ಆಗಸ್ಟ್ ತಿಂಗಳವರೆಗೆ ಹಣ್ಣನ್ನು ಬಿಡುವ ಈ ತಳಿ ಉಷ್ಣವಲಯದಲ್ಲಿ ಮಾತ್ರ ಚೆನ್ನಾಗಿ ಫಲ ಕೊಡುತ್ತದೆ.

ಕಳೆದ ವರ್ಷ ಅಂತರರಾಷ್ಟಿಯ ಮಾರುಕಟ್ಟೆಯಲ್ಲಿ ಕೆಜಿಗೆ 2.7 ಲಕ್ಷ ಬೆಲೆಗೆ ಮಾರಾಟವಾಗಿದ್ದ ಮಿಯಝಾಕಿ ಬೆಲೆ ಈ ವರ್ಷ 3  ಲಕ್ಷ ರೂಪಾಯಿ ತಲುಪುವ ನಿರೀಕ್ಷೆಯನ್ನು ರೈತರು ಇಟ್ಟುಕೊಂಡಿದ್ದಾರೆ. ಕೆಂಪು ಬಣ್ಣದ ಡೈನೋಸಾರ್ ಮೊಟ್ಟೆಯನ್ನು ಹೋಲುವ ಈ ಮಿಯಝಾಕಿ ಹಣ್ಣು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹವಾ ಸೃಷ್ಟಿಸಿದೆ. ಈ ಹಣ್ಣಿನ ವಿವರ ಕೇಳಿದ ನೆಟ್ಟಿಗರು ದುಬಾರಿ ಬೆಲೆಯಿಂದಾಗಿ ಮಿಯಝಾಕಿ ಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಾವಿನ ಹಣ್ಣಿನ ಸೀಸನ್‌ನಲ್ಲಿ ನೀವು ಮಾವಿನ ಪ್ರಿಯರಾಗಿದ್ದರೆ ಮಿಯಝಾಕಿ ತಳಿಯ ಹಣ್ಣನ್ನು ಪ್ರಯತ್ನಿಸುವ ಆಸೆಯಾಗುತ್ತಿದೆಯಾ ? ಹಾಗಿದ್ದರೆ 2.70 ಲಕ್ಷ ರೂಪಾಯಿಯನ್ನು ಮಾವಿನ ಹಣ್ಣಿಗಾಗಿ ನಿಮ್ಮ ಜೇಬಿನಿಂದ ತೆಗೆದಿರಿಸಿಕೊಳ್ಳುವುದು ಉತ್ತಮ.

– ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...