Homeಅಂತರಾಷ್ಟ್ರೀಯಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

ಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

- Advertisement -
- Advertisement -

ಭಾರತವಲ್ಲದೇ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮಾವಿನ ಹಣ್ಣಿಗೆ ವಿಶೇಷ ಸ್ಥಾನಮಾನವಿದೆ. ಜಗತ್ತಿನ ಮೂಲೆ ಮೂಲೆಯಲ್ಲಿ ಮಾವಿನ ಹಣ್ಣಿನ ಪ್ರಿಯರಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾವಿನ ಬೆಳೆ ಬಹಳ ಕಡಿಮೆ. ಹಾಗಾಗಿ ಭಾರತ ಸೇರಿ ಏಷ್ಯಾದ ರಾಷ್ಟ್ರಗಳಿಂದ ಅಮೆರಿಕ ಮತ್ತು ಯುರೋಪ್‌ಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣು ರಫ್ತಾಗುತ್ತದೆ. ವಿದೇಶಗಳಿಗೆ ರಫ್ತಾಗುವ ಮಾವಿನ ಹಣ್ಣುಗಳು ವಿಶೇಷ ಗುಣಮಟ್ಟವನ್ನು ಹೊಂದಿರುತ್ತವೆ ಮತ್ತು ಅವುಗಳ ಬೆಲೆಯೂ ಅಷ್ಟೇ ಹೆಚ್ಚಾಗಿರುತ್ತದೆ. ನಾವು ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 100 ರೂಪಾಯಿ ಎಂದರೆ ದುಬಾರಿ ಎಂದುಕೊಳ್ಳುತ್ತೇವೆ. ಆದರೆ ಇಲ್ಲೊಂದು ಮಾವಿನ ಹಣ್ಣಿದೆ. ಇದರ ಬೆಲೆಯನ್ನು ಕೇಳಿದರೆ ನಾವೆಲ್ಲರೂ ಆಶ್ಚರ್ಯಕ್ಕೆ ಒಳಗಾಗುತ್ತೇವೆ. ಹಾಗೇ ಇದು ನಿಜವೇ ಎಂದು ಪ್ರಶ್ನಿಸುತ್ತೇವೆ…

ಹೌದು ಇದು ಅಂತಹದ್ದೇ ಮಾವಿನ ಹಣ್ಣು. ನೋಡಲು ಅಷ್ಟೇ ಸುಂದರ. ಅಷ್ಟೇ ರುಚಿಕರ. ಸುವಾಸನೆ ಭರಿತ ತಳಿ. ಅಷ್ಟೇ ದುಬಾರಿ. ಒಂದು ಕೆಜಿಗೆ 2.7 ಲಕ್ಷ ರುಪಾಯಿ. ಅದು ಯಾವ ಮಾವಿನ ಹಣ್ಣು ಎನ್ನುತ್ತೀರಾ ? ಅದೇ ಜಪಾನ್ ಮೂಲದ ತಳಿಯ ಮಾವಿನ ಹಣ್ಣು ಮಿಯಝಾಕಿ. ಕೆಂಪು-ಬೂದು ಬಣ್ಣದ ಈ ಮಾವಿನ ಹಣ್ಣಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆಯಿದೆ. ಮಧ್ಯಪ್ರದೇಶದ ಕೃಷಿಕ ದಂಪತಿಯೊಂದು ಮಿಯಝಾಕಿ ತಳಿಯ ಮಾವಿನ ಹಣ್ಣನ್ನು ತಮ್ಮ ಹೊಲದಲ್ಲಿ ಬೆಳೆದು ಅಪಾರ ಲಾಭ ಗಳಿಸಿದ್ದಾರೆ.

ದುಬಾರಿ ಈ ಮಾವಿನ ಹಣ್ಣನ್ನು ಕಾಯ್ದುಕೊಳ್ಳುವುದು ಅಷ್ಟು ಸುಲಭವಲ್ಲ. ಹಾಗಾಗಿ ಕೃಷಿ ದಂಪತಿ ಈ ಮಾವಿನ ಹಣ್ಣಿನ ತೋಟಕ್ಕೆ ಗಾರ್ಡ್‌ಗಳನ್ನು ನೇಮಿಸಿದ್ದಾರೆ.

ಮಧ್ಯಪ್ರದೇಶದ ಈ ಕೃಷಿ ದಂಪತಿ ಬೆಳೆದಿರುವ ಮಿಯಝಾಕಿ ಮಾವಿನ ಹಣ್ಣಿನ ಒಂದು ಚಿಕ್ಕ ಹೋಳಿನ ಬೆಲೆಯೇ ಸುಮಾರು 1,000 ರೂಪಾಯಿಗೂ ಅಧಿಕವಾಗಿದೆ ಎಂದರೆ ನೀವು ನಂಬಲಾರರಿ. ಆದರೆ ಇದು ಸತ್ಯ. ಮಧ್ಯಪ್ರದೇಶದ ಈ ಕೃಷಿಕರು ಬೆಳೆದ ಮಿಯಝಾಕಿ ಮಾವಿನ ಹಣ್ಣು ಬೂದು ಬಣ್ಣವನ್ನು ಪಡೆದುಕೊಂಡಿದೆ. ಹಾಗೇ ವಿಶೇಷ ಸುವಾಸನೆಯನ್ನು ಹೊಂದಿದೆ.

ಇದನ್ನೂ ಓದಿ : ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

1970-80 ರಲ್ಲಿ ಜಪಾನ್ ದೇಶದ ಮಿಯಝಾಕಿ ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಳೆಯಲಾದ ಈ ಮಾವಿನ ತಳಿ ಆ ಪಟ್ಟಣದ ಹೆಸರನ್ನೇ ಪಡೆದುಕೊಂಡು ಜಗತ್ತಿನಾದ್ಯಂತ ಮಿಯಝಾಕಿ ಎಂದೇ ಪ್ರಸಿದ್ಧವಾಗಿದೆ. ಜಪಾನ್‌ನಲ್ಲಿ ಆರಂಭವಾದ ಮಿಯಝಾಕಿ ತಳಿಯ ಬೆಳೆ ಕೊರಿಯಾ, ಮಲೇಷ್ಯಾ, ಥೈಲಾಂಡ್ ಹೀಗೆ ಭಾರತದ ಮಧ್ಯಪ್ರದೇಶದವರೆಗೂ ಬಂದಿದೆ. ಸಾಧಾರಣ ಮಾವಿಗಿಂತ 15% ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುವ ಈ ಮಿಯಝಾಕಿ ಮಾವು ಅತ್ಯಂತ ಕಡಿಮೆ ಆಮ್ಲದ ಗುಣವನ್ನು ಹೊಂದಿದೆ. ಏಪ್ರಿಲ್ ನಿಂದ ಆಗಸ್ಟ್ ತಿಂಗಳವರೆಗೆ ಹಣ್ಣನ್ನು ಬಿಡುವ ಈ ತಳಿ ಉಷ್ಣವಲಯದಲ್ಲಿ ಮಾತ್ರ ಚೆನ್ನಾಗಿ ಫಲ ಕೊಡುತ್ತದೆ.

ಕಳೆದ ವರ್ಷ ಅಂತರರಾಷ್ಟಿಯ ಮಾರುಕಟ್ಟೆಯಲ್ಲಿ ಕೆಜಿಗೆ 2.7 ಲಕ್ಷ ಬೆಲೆಗೆ ಮಾರಾಟವಾಗಿದ್ದ ಮಿಯಝಾಕಿ ಬೆಲೆ ಈ ವರ್ಷ 3  ಲಕ್ಷ ರೂಪಾಯಿ ತಲುಪುವ ನಿರೀಕ್ಷೆಯನ್ನು ರೈತರು ಇಟ್ಟುಕೊಂಡಿದ್ದಾರೆ. ಕೆಂಪು ಬಣ್ಣದ ಡೈನೋಸಾರ್ ಮೊಟ್ಟೆಯನ್ನು ಹೋಲುವ ಈ ಮಿಯಝಾಕಿ ಹಣ್ಣು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹವಾ ಸೃಷ್ಟಿಸಿದೆ. ಈ ಹಣ್ಣಿನ ವಿವರ ಕೇಳಿದ ನೆಟ್ಟಿಗರು ದುಬಾರಿ ಬೆಲೆಯಿಂದಾಗಿ ಮಿಯಝಾಕಿ ಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಾವಿನ ಹಣ್ಣಿನ ಸೀಸನ್‌ನಲ್ಲಿ ನೀವು ಮಾವಿನ ಪ್ರಿಯರಾಗಿದ್ದರೆ ಮಿಯಝಾಕಿ ತಳಿಯ ಹಣ್ಣನ್ನು ಪ್ರಯತ್ನಿಸುವ ಆಸೆಯಾಗುತ್ತಿದೆಯಾ ? ಹಾಗಿದ್ದರೆ 2.70 ಲಕ್ಷ ರೂಪಾಯಿಯನ್ನು ಮಾವಿನ ಹಣ್ಣಿಗಾಗಿ ನಿಮ್ಮ ಜೇಬಿನಿಂದ ತೆಗೆದಿರಿಸಿಕೊಳ್ಳುವುದು ಉತ್ತಮ.

– ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...