Homeಅಂತರಾಷ್ಟ್ರೀಯಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

ಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

- Advertisement -
- Advertisement -

ಭಾರತವಲ್ಲದೇ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮಾವಿನ ಹಣ್ಣಿಗೆ ವಿಶೇಷ ಸ್ಥಾನಮಾನವಿದೆ. ಜಗತ್ತಿನ ಮೂಲೆ ಮೂಲೆಯಲ್ಲಿ ಮಾವಿನ ಹಣ್ಣಿನ ಪ್ರಿಯರಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾವಿನ ಬೆಳೆ ಬಹಳ ಕಡಿಮೆ. ಹಾಗಾಗಿ ಭಾರತ ಸೇರಿ ಏಷ್ಯಾದ ರಾಷ್ಟ್ರಗಳಿಂದ ಅಮೆರಿಕ ಮತ್ತು ಯುರೋಪ್‌ಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣು ರಫ್ತಾಗುತ್ತದೆ. ವಿದೇಶಗಳಿಗೆ ರಫ್ತಾಗುವ ಮಾವಿನ ಹಣ್ಣುಗಳು ವಿಶೇಷ ಗುಣಮಟ್ಟವನ್ನು ಹೊಂದಿರುತ್ತವೆ ಮತ್ತು ಅವುಗಳ ಬೆಲೆಯೂ ಅಷ್ಟೇ ಹೆಚ್ಚಾಗಿರುತ್ತದೆ. ನಾವು ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 100 ರೂಪಾಯಿ ಎಂದರೆ ದುಬಾರಿ ಎಂದುಕೊಳ್ಳುತ್ತೇವೆ. ಆದರೆ ಇಲ್ಲೊಂದು ಮಾವಿನ ಹಣ್ಣಿದೆ. ಇದರ ಬೆಲೆಯನ್ನು ಕೇಳಿದರೆ ನಾವೆಲ್ಲರೂ ಆಶ್ಚರ್ಯಕ್ಕೆ ಒಳಗಾಗುತ್ತೇವೆ. ಹಾಗೇ ಇದು ನಿಜವೇ ಎಂದು ಪ್ರಶ್ನಿಸುತ್ತೇವೆ…

ಹೌದು ಇದು ಅಂತಹದ್ದೇ ಮಾವಿನ ಹಣ್ಣು. ನೋಡಲು ಅಷ್ಟೇ ಸುಂದರ. ಅಷ್ಟೇ ರುಚಿಕರ. ಸುವಾಸನೆ ಭರಿತ ತಳಿ. ಅಷ್ಟೇ ದುಬಾರಿ. ಒಂದು ಕೆಜಿಗೆ 2.7 ಲಕ್ಷ ರುಪಾಯಿ. ಅದು ಯಾವ ಮಾವಿನ ಹಣ್ಣು ಎನ್ನುತ್ತೀರಾ ? ಅದೇ ಜಪಾನ್ ಮೂಲದ ತಳಿಯ ಮಾವಿನ ಹಣ್ಣು ಮಿಯಝಾಕಿ. ಕೆಂಪು-ಬೂದು ಬಣ್ಣದ ಈ ಮಾವಿನ ಹಣ್ಣಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆಯಿದೆ. ಮಧ್ಯಪ್ರದೇಶದ ಕೃಷಿಕ ದಂಪತಿಯೊಂದು ಮಿಯಝಾಕಿ ತಳಿಯ ಮಾವಿನ ಹಣ್ಣನ್ನು ತಮ್ಮ ಹೊಲದಲ್ಲಿ ಬೆಳೆದು ಅಪಾರ ಲಾಭ ಗಳಿಸಿದ್ದಾರೆ.

ದುಬಾರಿ ಈ ಮಾವಿನ ಹಣ್ಣನ್ನು ಕಾಯ್ದುಕೊಳ್ಳುವುದು ಅಷ್ಟು ಸುಲಭವಲ್ಲ. ಹಾಗಾಗಿ ಕೃಷಿ ದಂಪತಿ ಈ ಮಾವಿನ ಹಣ್ಣಿನ ತೋಟಕ್ಕೆ ಗಾರ್ಡ್‌ಗಳನ್ನು ನೇಮಿಸಿದ್ದಾರೆ.

ಮಧ್ಯಪ್ರದೇಶದ ಈ ಕೃಷಿ ದಂಪತಿ ಬೆಳೆದಿರುವ ಮಿಯಝಾಕಿ ಮಾವಿನ ಹಣ್ಣಿನ ಒಂದು ಚಿಕ್ಕ ಹೋಳಿನ ಬೆಲೆಯೇ ಸುಮಾರು 1,000 ರೂಪಾಯಿಗೂ ಅಧಿಕವಾಗಿದೆ ಎಂದರೆ ನೀವು ನಂಬಲಾರರಿ. ಆದರೆ ಇದು ಸತ್ಯ. ಮಧ್ಯಪ್ರದೇಶದ ಈ ಕೃಷಿಕರು ಬೆಳೆದ ಮಿಯಝಾಕಿ ಮಾವಿನ ಹಣ್ಣು ಬೂದು ಬಣ್ಣವನ್ನು ಪಡೆದುಕೊಂಡಿದೆ. ಹಾಗೇ ವಿಶೇಷ ಸುವಾಸನೆಯನ್ನು ಹೊಂದಿದೆ.

ಇದನ್ನೂ ಓದಿ : ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

1970-80 ರಲ್ಲಿ ಜಪಾನ್ ದೇಶದ ಮಿಯಝಾಕಿ ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಳೆಯಲಾದ ಈ ಮಾವಿನ ತಳಿ ಆ ಪಟ್ಟಣದ ಹೆಸರನ್ನೇ ಪಡೆದುಕೊಂಡು ಜಗತ್ತಿನಾದ್ಯಂತ ಮಿಯಝಾಕಿ ಎಂದೇ ಪ್ರಸಿದ್ಧವಾಗಿದೆ. ಜಪಾನ್‌ನಲ್ಲಿ ಆರಂಭವಾದ ಮಿಯಝಾಕಿ ತಳಿಯ ಬೆಳೆ ಕೊರಿಯಾ, ಮಲೇಷ್ಯಾ, ಥೈಲಾಂಡ್ ಹೀಗೆ ಭಾರತದ ಮಧ್ಯಪ್ರದೇಶದವರೆಗೂ ಬಂದಿದೆ. ಸಾಧಾರಣ ಮಾವಿಗಿಂತ 15% ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುವ ಈ ಮಿಯಝಾಕಿ ಮಾವು ಅತ್ಯಂತ ಕಡಿಮೆ ಆಮ್ಲದ ಗುಣವನ್ನು ಹೊಂದಿದೆ. ಏಪ್ರಿಲ್ ನಿಂದ ಆಗಸ್ಟ್ ತಿಂಗಳವರೆಗೆ ಹಣ್ಣನ್ನು ಬಿಡುವ ಈ ತಳಿ ಉಷ್ಣವಲಯದಲ್ಲಿ ಮಾತ್ರ ಚೆನ್ನಾಗಿ ಫಲ ಕೊಡುತ್ತದೆ.

ಕಳೆದ ವರ್ಷ ಅಂತರರಾಷ್ಟಿಯ ಮಾರುಕಟ್ಟೆಯಲ್ಲಿ ಕೆಜಿಗೆ 2.7 ಲಕ್ಷ ಬೆಲೆಗೆ ಮಾರಾಟವಾಗಿದ್ದ ಮಿಯಝಾಕಿ ಬೆಲೆ ಈ ವರ್ಷ 3  ಲಕ್ಷ ರೂಪಾಯಿ ತಲುಪುವ ನಿರೀಕ್ಷೆಯನ್ನು ರೈತರು ಇಟ್ಟುಕೊಂಡಿದ್ದಾರೆ. ಕೆಂಪು ಬಣ್ಣದ ಡೈನೋಸಾರ್ ಮೊಟ್ಟೆಯನ್ನು ಹೋಲುವ ಈ ಮಿಯಝಾಕಿ ಹಣ್ಣು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹವಾ ಸೃಷ್ಟಿಸಿದೆ. ಈ ಹಣ್ಣಿನ ವಿವರ ಕೇಳಿದ ನೆಟ್ಟಿಗರು ದುಬಾರಿ ಬೆಲೆಯಿಂದಾಗಿ ಮಿಯಝಾಕಿ ಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಾವಿನ ಹಣ್ಣಿನ ಸೀಸನ್‌ನಲ್ಲಿ ನೀವು ಮಾವಿನ ಪ್ರಿಯರಾಗಿದ್ದರೆ ಮಿಯಝಾಕಿ ತಳಿಯ ಹಣ್ಣನ್ನು ಪ್ರಯತ್ನಿಸುವ ಆಸೆಯಾಗುತ್ತಿದೆಯಾ ? ಹಾಗಿದ್ದರೆ 2.70 ಲಕ್ಷ ರೂಪಾಯಿಯನ್ನು ಮಾವಿನ ಹಣ್ಣಿಗಾಗಿ ನಿಮ್ಮ ಜೇಬಿನಿಂದ ತೆಗೆದಿರಿಸಿಕೊಳ್ಳುವುದು ಉತ್ತಮ.

– ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...