Homeಅಂತರಾಷ್ಟ್ರೀಯಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

ಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

- Advertisement -
- Advertisement -

ಭಾರತವಲ್ಲದೇ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮಾವಿನ ಹಣ್ಣಿಗೆ ವಿಶೇಷ ಸ್ಥಾನಮಾನವಿದೆ. ಜಗತ್ತಿನ ಮೂಲೆ ಮೂಲೆಯಲ್ಲಿ ಮಾವಿನ ಹಣ್ಣಿನ ಪ್ರಿಯರಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾವಿನ ಬೆಳೆ ಬಹಳ ಕಡಿಮೆ. ಹಾಗಾಗಿ ಭಾರತ ಸೇರಿ ಏಷ್ಯಾದ ರಾಷ್ಟ್ರಗಳಿಂದ ಅಮೆರಿಕ ಮತ್ತು ಯುರೋಪ್‌ಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣು ರಫ್ತಾಗುತ್ತದೆ. ವಿದೇಶಗಳಿಗೆ ರಫ್ತಾಗುವ ಮಾವಿನ ಹಣ್ಣುಗಳು ವಿಶೇಷ ಗುಣಮಟ್ಟವನ್ನು ಹೊಂದಿರುತ್ತವೆ ಮತ್ತು ಅವುಗಳ ಬೆಲೆಯೂ ಅಷ್ಟೇ ಹೆಚ್ಚಾಗಿರುತ್ತದೆ. ನಾವು ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 100 ರೂಪಾಯಿ ಎಂದರೆ ದುಬಾರಿ ಎಂದುಕೊಳ್ಳುತ್ತೇವೆ. ಆದರೆ ಇಲ್ಲೊಂದು ಮಾವಿನ ಹಣ್ಣಿದೆ. ಇದರ ಬೆಲೆಯನ್ನು ಕೇಳಿದರೆ ನಾವೆಲ್ಲರೂ ಆಶ್ಚರ್ಯಕ್ಕೆ ಒಳಗಾಗುತ್ತೇವೆ. ಹಾಗೇ ಇದು ನಿಜವೇ ಎಂದು ಪ್ರಶ್ನಿಸುತ್ತೇವೆ…

ಹೌದು ಇದು ಅಂತಹದ್ದೇ ಮಾವಿನ ಹಣ್ಣು. ನೋಡಲು ಅಷ್ಟೇ ಸುಂದರ. ಅಷ್ಟೇ ರುಚಿಕರ. ಸುವಾಸನೆ ಭರಿತ ತಳಿ. ಅಷ್ಟೇ ದುಬಾರಿ. ಒಂದು ಕೆಜಿಗೆ 2.7 ಲಕ್ಷ ರುಪಾಯಿ. ಅದು ಯಾವ ಮಾವಿನ ಹಣ್ಣು ಎನ್ನುತ್ತೀರಾ ? ಅದೇ ಜಪಾನ್ ಮೂಲದ ತಳಿಯ ಮಾವಿನ ಹಣ್ಣು ಮಿಯಝಾಕಿ. ಕೆಂಪು-ಬೂದು ಬಣ್ಣದ ಈ ಮಾವಿನ ಹಣ್ಣಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆಯಿದೆ. ಮಧ್ಯಪ್ರದೇಶದ ಕೃಷಿಕ ದಂಪತಿಯೊಂದು ಮಿಯಝಾಕಿ ತಳಿಯ ಮಾವಿನ ಹಣ್ಣನ್ನು ತಮ್ಮ ಹೊಲದಲ್ಲಿ ಬೆಳೆದು ಅಪಾರ ಲಾಭ ಗಳಿಸಿದ್ದಾರೆ.

ದುಬಾರಿ ಈ ಮಾವಿನ ಹಣ್ಣನ್ನು ಕಾಯ್ದುಕೊಳ್ಳುವುದು ಅಷ್ಟು ಸುಲಭವಲ್ಲ. ಹಾಗಾಗಿ ಕೃಷಿ ದಂಪತಿ ಈ ಮಾವಿನ ಹಣ್ಣಿನ ತೋಟಕ್ಕೆ ಗಾರ್ಡ್‌ಗಳನ್ನು ನೇಮಿಸಿದ್ದಾರೆ.

ಮಧ್ಯಪ್ರದೇಶದ ಈ ಕೃಷಿ ದಂಪತಿ ಬೆಳೆದಿರುವ ಮಿಯಝಾಕಿ ಮಾವಿನ ಹಣ್ಣಿನ ಒಂದು ಚಿಕ್ಕ ಹೋಳಿನ ಬೆಲೆಯೇ ಸುಮಾರು 1,000 ರೂಪಾಯಿಗೂ ಅಧಿಕವಾಗಿದೆ ಎಂದರೆ ನೀವು ನಂಬಲಾರರಿ. ಆದರೆ ಇದು ಸತ್ಯ. ಮಧ್ಯಪ್ರದೇಶದ ಈ ಕೃಷಿಕರು ಬೆಳೆದ ಮಿಯಝಾಕಿ ಮಾವಿನ ಹಣ್ಣು ಬೂದು ಬಣ್ಣವನ್ನು ಪಡೆದುಕೊಂಡಿದೆ. ಹಾಗೇ ವಿಶೇಷ ಸುವಾಸನೆಯನ್ನು ಹೊಂದಿದೆ.

ಇದನ್ನೂ ಓದಿ : ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

1970-80 ರಲ್ಲಿ ಜಪಾನ್ ದೇಶದ ಮಿಯಝಾಕಿ ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಳೆಯಲಾದ ಈ ಮಾವಿನ ತಳಿ ಆ ಪಟ್ಟಣದ ಹೆಸರನ್ನೇ ಪಡೆದುಕೊಂಡು ಜಗತ್ತಿನಾದ್ಯಂತ ಮಿಯಝಾಕಿ ಎಂದೇ ಪ್ರಸಿದ್ಧವಾಗಿದೆ. ಜಪಾನ್‌ನಲ್ಲಿ ಆರಂಭವಾದ ಮಿಯಝಾಕಿ ತಳಿಯ ಬೆಳೆ ಕೊರಿಯಾ, ಮಲೇಷ್ಯಾ, ಥೈಲಾಂಡ್ ಹೀಗೆ ಭಾರತದ ಮಧ್ಯಪ್ರದೇಶದವರೆಗೂ ಬಂದಿದೆ. ಸಾಧಾರಣ ಮಾವಿಗಿಂತ 15% ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುವ ಈ ಮಿಯಝಾಕಿ ಮಾವು ಅತ್ಯಂತ ಕಡಿಮೆ ಆಮ್ಲದ ಗುಣವನ್ನು ಹೊಂದಿದೆ. ಏಪ್ರಿಲ್ ನಿಂದ ಆಗಸ್ಟ್ ತಿಂಗಳವರೆಗೆ ಹಣ್ಣನ್ನು ಬಿಡುವ ಈ ತಳಿ ಉಷ್ಣವಲಯದಲ್ಲಿ ಮಾತ್ರ ಚೆನ್ನಾಗಿ ಫಲ ಕೊಡುತ್ತದೆ.

ಕಳೆದ ವರ್ಷ ಅಂತರರಾಷ್ಟಿಯ ಮಾರುಕಟ್ಟೆಯಲ್ಲಿ ಕೆಜಿಗೆ 2.7 ಲಕ್ಷ ಬೆಲೆಗೆ ಮಾರಾಟವಾಗಿದ್ದ ಮಿಯಝಾಕಿ ಬೆಲೆ ಈ ವರ್ಷ 3  ಲಕ್ಷ ರೂಪಾಯಿ ತಲುಪುವ ನಿರೀಕ್ಷೆಯನ್ನು ರೈತರು ಇಟ್ಟುಕೊಂಡಿದ್ದಾರೆ. ಕೆಂಪು ಬಣ್ಣದ ಡೈನೋಸಾರ್ ಮೊಟ್ಟೆಯನ್ನು ಹೋಲುವ ಈ ಮಿಯಝಾಕಿ ಹಣ್ಣು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹವಾ ಸೃಷ್ಟಿಸಿದೆ. ಈ ಹಣ್ಣಿನ ವಿವರ ಕೇಳಿದ ನೆಟ್ಟಿಗರು ದುಬಾರಿ ಬೆಲೆಯಿಂದಾಗಿ ಮಿಯಝಾಕಿ ಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಾವಿನ ಹಣ್ಣಿನ ಸೀಸನ್‌ನಲ್ಲಿ ನೀವು ಮಾವಿನ ಪ್ರಿಯರಾಗಿದ್ದರೆ ಮಿಯಝಾಕಿ ತಳಿಯ ಹಣ್ಣನ್ನು ಪ್ರಯತ್ನಿಸುವ ಆಸೆಯಾಗುತ್ತಿದೆಯಾ ? ಹಾಗಿದ್ದರೆ 2.70 ಲಕ್ಷ ರೂಪಾಯಿಯನ್ನು ಮಾವಿನ ಹಣ್ಣಿಗಾಗಿ ನಿಮ್ಮ ಜೇಬಿನಿಂದ ತೆಗೆದಿರಿಸಿಕೊಳ್ಳುವುದು ಉತ್ತಮ.

– ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....