Homeಅಂತರಾಷ್ಟ್ರೀಯಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

ಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

- Advertisement -
- Advertisement -

ಭಾರತವಲ್ಲದೇ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮಾವಿನ ಹಣ್ಣಿಗೆ ವಿಶೇಷ ಸ್ಥಾನಮಾನವಿದೆ. ಜಗತ್ತಿನ ಮೂಲೆ ಮೂಲೆಯಲ್ಲಿ ಮಾವಿನ ಹಣ್ಣಿನ ಪ್ರಿಯರಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾವಿನ ಬೆಳೆ ಬಹಳ ಕಡಿಮೆ. ಹಾಗಾಗಿ ಭಾರತ ಸೇರಿ ಏಷ್ಯಾದ ರಾಷ್ಟ್ರಗಳಿಂದ ಅಮೆರಿಕ ಮತ್ತು ಯುರೋಪ್‌ಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣು ರಫ್ತಾಗುತ್ತದೆ. ವಿದೇಶಗಳಿಗೆ ರಫ್ತಾಗುವ ಮಾವಿನ ಹಣ್ಣುಗಳು ವಿಶೇಷ ಗುಣಮಟ್ಟವನ್ನು ಹೊಂದಿರುತ್ತವೆ ಮತ್ತು ಅವುಗಳ ಬೆಲೆಯೂ ಅಷ್ಟೇ ಹೆಚ್ಚಾಗಿರುತ್ತದೆ. ನಾವು ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 100 ರೂಪಾಯಿ ಎಂದರೆ ದುಬಾರಿ ಎಂದುಕೊಳ್ಳುತ್ತೇವೆ. ಆದರೆ ಇಲ್ಲೊಂದು ಮಾವಿನ ಹಣ್ಣಿದೆ. ಇದರ ಬೆಲೆಯನ್ನು ಕೇಳಿದರೆ ನಾವೆಲ್ಲರೂ ಆಶ್ಚರ್ಯಕ್ಕೆ ಒಳಗಾಗುತ್ತೇವೆ. ಹಾಗೇ ಇದು ನಿಜವೇ ಎಂದು ಪ್ರಶ್ನಿಸುತ್ತೇವೆ…

ಹೌದು ಇದು ಅಂತಹದ್ದೇ ಮಾವಿನ ಹಣ್ಣು. ನೋಡಲು ಅಷ್ಟೇ ಸುಂದರ. ಅಷ್ಟೇ ರುಚಿಕರ. ಸುವಾಸನೆ ಭರಿತ ತಳಿ. ಅಷ್ಟೇ ದುಬಾರಿ. ಒಂದು ಕೆಜಿಗೆ 2.7 ಲಕ್ಷ ರುಪಾಯಿ. ಅದು ಯಾವ ಮಾವಿನ ಹಣ್ಣು ಎನ್ನುತ್ತೀರಾ ? ಅದೇ ಜಪಾನ್ ಮೂಲದ ತಳಿಯ ಮಾವಿನ ಹಣ್ಣು ಮಿಯಝಾಕಿ. ಕೆಂಪು-ಬೂದು ಬಣ್ಣದ ಈ ಮಾವಿನ ಹಣ್ಣಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆಯಿದೆ. ಮಧ್ಯಪ್ರದೇಶದ ಕೃಷಿಕ ದಂಪತಿಯೊಂದು ಮಿಯಝಾಕಿ ತಳಿಯ ಮಾವಿನ ಹಣ್ಣನ್ನು ತಮ್ಮ ಹೊಲದಲ್ಲಿ ಬೆಳೆದು ಅಪಾರ ಲಾಭ ಗಳಿಸಿದ್ದಾರೆ.

ದುಬಾರಿ ಈ ಮಾವಿನ ಹಣ್ಣನ್ನು ಕಾಯ್ದುಕೊಳ್ಳುವುದು ಅಷ್ಟು ಸುಲಭವಲ್ಲ. ಹಾಗಾಗಿ ಕೃಷಿ ದಂಪತಿ ಈ ಮಾವಿನ ಹಣ್ಣಿನ ತೋಟಕ್ಕೆ ಗಾರ್ಡ್‌ಗಳನ್ನು ನೇಮಿಸಿದ್ದಾರೆ.

ಮಧ್ಯಪ್ರದೇಶದ ಈ ಕೃಷಿ ದಂಪತಿ ಬೆಳೆದಿರುವ ಮಿಯಝಾಕಿ ಮಾವಿನ ಹಣ್ಣಿನ ಒಂದು ಚಿಕ್ಕ ಹೋಳಿನ ಬೆಲೆಯೇ ಸುಮಾರು 1,000 ರೂಪಾಯಿಗೂ ಅಧಿಕವಾಗಿದೆ ಎಂದರೆ ನೀವು ನಂಬಲಾರರಿ. ಆದರೆ ಇದು ಸತ್ಯ. ಮಧ್ಯಪ್ರದೇಶದ ಈ ಕೃಷಿಕರು ಬೆಳೆದ ಮಿಯಝಾಕಿ ಮಾವಿನ ಹಣ್ಣು ಬೂದು ಬಣ್ಣವನ್ನು ಪಡೆದುಕೊಂಡಿದೆ. ಹಾಗೇ ವಿಶೇಷ ಸುವಾಸನೆಯನ್ನು ಹೊಂದಿದೆ.

ಇದನ್ನೂ ಓದಿ : ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

1970-80 ರಲ್ಲಿ ಜಪಾನ್ ದೇಶದ ಮಿಯಝಾಕಿ ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಳೆಯಲಾದ ಈ ಮಾವಿನ ತಳಿ ಆ ಪಟ್ಟಣದ ಹೆಸರನ್ನೇ ಪಡೆದುಕೊಂಡು ಜಗತ್ತಿನಾದ್ಯಂತ ಮಿಯಝಾಕಿ ಎಂದೇ ಪ್ರಸಿದ್ಧವಾಗಿದೆ. ಜಪಾನ್‌ನಲ್ಲಿ ಆರಂಭವಾದ ಮಿಯಝಾಕಿ ತಳಿಯ ಬೆಳೆ ಕೊರಿಯಾ, ಮಲೇಷ್ಯಾ, ಥೈಲಾಂಡ್ ಹೀಗೆ ಭಾರತದ ಮಧ್ಯಪ್ರದೇಶದವರೆಗೂ ಬಂದಿದೆ. ಸಾಧಾರಣ ಮಾವಿಗಿಂತ 15% ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುವ ಈ ಮಿಯಝಾಕಿ ಮಾವು ಅತ್ಯಂತ ಕಡಿಮೆ ಆಮ್ಲದ ಗುಣವನ್ನು ಹೊಂದಿದೆ. ಏಪ್ರಿಲ್ ನಿಂದ ಆಗಸ್ಟ್ ತಿಂಗಳವರೆಗೆ ಹಣ್ಣನ್ನು ಬಿಡುವ ಈ ತಳಿ ಉಷ್ಣವಲಯದಲ್ಲಿ ಮಾತ್ರ ಚೆನ್ನಾಗಿ ಫಲ ಕೊಡುತ್ತದೆ.

ಕಳೆದ ವರ್ಷ ಅಂತರರಾಷ್ಟಿಯ ಮಾರುಕಟ್ಟೆಯಲ್ಲಿ ಕೆಜಿಗೆ 2.7 ಲಕ್ಷ ಬೆಲೆಗೆ ಮಾರಾಟವಾಗಿದ್ದ ಮಿಯಝಾಕಿ ಬೆಲೆ ಈ ವರ್ಷ 3  ಲಕ್ಷ ರೂಪಾಯಿ ತಲುಪುವ ನಿರೀಕ್ಷೆಯನ್ನು ರೈತರು ಇಟ್ಟುಕೊಂಡಿದ್ದಾರೆ. ಕೆಂಪು ಬಣ್ಣದ ಡೈನೋಸಾರ್ ಮೊಟ್ಟೆಯನ್ನು ಹೋಲುವ ಈ ಮಿಯಝಾಕಿ ಹಣ್ಣು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹವಾ ಸೃಷ್ಟಿಸಿದೆ. ಈ ಹಣ್ಣಿನ ವಿವರ ಕೇಳಿದ ನೆಟ್ಟಿಗರು ದುಬಾರಿ ಬೆಲೆಯಿಂದಾಗಿ ಮಿಯಝಾಕಿ ಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಾವಿನ ಹಣ್ಣಿನ ಸೀಸನ್‌ನಲ್ಲಿ ನೀವು ಮಾವಿನ ಪ್ರಿಯರಾಗಿದ್ದರೆ ಮಿಯಝಾಕಿ ತಳಿಯ ಹಣ್ಣನ್ನು ಪ್ರಯತ್ನಿಸುವ ಆಸೆಯಾಗುತ್ತಿದೆಯಾ ? ಹಾಗಿದ್ದರೆ 2.70 ಲಕ್ಷ ರೂಪಾಯಿಯನ್ನು ಮಾವಿನ ಹಣ್ಣಿಗಾಗಿ ನಿಮ್ಮ ಜೇಬಿನಿಂದ ತೆಗೆದಿರಿಸಿಕೊಳ್ಳುವುದು ಉತ್ತಮ.

– ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...