Homeಅಂತರಾಷ್ಟ್ರೀಯಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

ಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

- Advertisement -
- Advertisement -

ಭಾರತವಲ್ಲದೇ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮಾವಿನ ಹಣ್ಣಿಗೆ ವಿಶೇಷ ಸ್ಥಾನಮಾನವಿದೆ. ಜಗತ್ತಿನ ಮೂಲೆ ಮೂಲೆಯಲ್ಲಿ ಮಾವಿನ ಹಣ್ಣಿನ ಪ್ರಿಯರಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾವಿನ ಬೆಳೆ ಬಹಳ ಕಡಿಮೆ. ಹಾಗಾಗಿ ಭಾರತ ಸೇರಿ ಏಷ್ಯಾದ ರಾಷ್ಟ್ರಗಳಿಂದ ಅಮೆರಿಕ ಮತ್ತು ಯುರೋಪ್‌ಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣು ರಫ್ತಾಗುತ್ತದೆ. ವಿದೇಶಗಳಿಗೆ ರಫ್ತಾಗುವ ಮಾವಿನ ಹಣ್ಣುಗಳು ವಿಶೇಷ ಗುಣಮಟ್ಟವನ್ನು ಹೊಂದಿರುತ್ತವೆ ಮತ್ತು ಅವುಗಳ ಬೆಲೆಯೂ ಅಷ್ಟೇ ಹೆಚ್ಚಾಗಿರುತ್ತದೆ. ನಾವು ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 100 ರೂಪಾಯಿ ಎಂದರೆ ದುಬಾರಿ ಎಂದುಕೊಳ್ಳುತ್ತೇವೆ. ಆದರೆ ಇಲ್ಲೊಂದು ಮಾವಿನ ಹಣ್ಣಿದೆ. ಇದರ ಬೆಲೆಯನ್ನು ಕೇಳಿದರೆ ನಾವೆಲ್ಲರೂ ಆಶ್ಚರ್ಯಕ್ಕೆ ಒಳಗಾಗುತ್ತೇವೆ. ಹಾಗೇ ಇದು ನಿಜವೇ ಎಂದು ಪ್ರಶ್ನಿಸುತ್ತೇವೆ…

ಹೌದು ಇದು ಅಂತಹದ್ದೇ ಮಾವಿನ ಹಣ್ಣು. ನೋಡಲು ಅಷ್ಟೇ ಸುಂದರ. ಅಷ್ಟೇ ರುಚಿಕರ. ಸುವಾಸನೆ ಭರಿತ ತಳಿ. ಅಷ್ಟೇ ದುಬಾರಿ. ಒಂದು ಕೆಜಿಗೆ 2.7 ಲಕ್ಷ ರುಪಾಯಿ. ಅದು ಯಾವ ಮಾವಿನ ಹಣ್ಣು ಎನ್ನುತ್ತೀರಾ ? ಅದೇ ಜಪಾನ್ ಮೂಲದ ತಳಿಯ ಮಾವಿನ ಹಣ್ಣು ಮಿಯಝಾಕಿ. ಕೆಂಪು-ಬೂದು ಬಣ್ಣದ ಈ ಮಾವಿನ ಹಣ್ಣಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆಯಿದೆ. ಮಧ್ಯಪ್ರದೇಶದ ಕೃಷಿಕ ದಂಪತಿಯೊಂದು ಮಿಯಝಾಕಿ ತಳಿಯ ಮಾವಿನ ಹಣ್ಣನ್ನು ತಮ್ಮ ಹೊಲದಲ್ಲಿ ಬೆಳೆದು ಅಪಾರ ಲಾಭ ಗಳಿಸಿದ್ದಾರೆ.

ದುಬಾರಿ ಈ ಮಾವಿನ ಹಣ್ಣನ್ನು ಕಾಯ್ದುಕೊಳ್ಳುವುದು ಅಷ್ಟು ಸುಲಭವಲ್ಲ. ಹಾಗಾಗಿ ಕೃಷಿ ದಂಪತಿ ಈ ಮಾವಿನ ಹಣ್ಣಿನ ತೋಟಕ್ಕೆ ಗಾರ್ಡ್‌ಗಳನ್ನು ನೇಮಿಸಿದ್ದಾರೆ.

ಮಧ್ಯಪ್ರದೇಶದ ಈ ಕೃಷಿ ದಂಪತಿ ಬೆಳೆದಿರುವ ಮಿಯಝಾಕಿ ಮಾವಿನ ಹಣ್ಣಿನ ಒಂದು ಚಿಕ್ಕ ಹೋಳಿನ ಬೆಲೆಯೇ ಸುಮಾರು 1,000 ರೂಪಾಯಿಗೂ ಅಧಿಕವಾಗಿದೆ ಎಂದರೆ ನೀವು ನಂಬಲಾರರಿ. ಆದರೆ ಇದು ಸತ್ಯ. ಮಧ್ಯಪ್ರದೇಶದ ಈ ಕೃಷಿಕರು ಬೆಳೆದ ಮಿಯಝಾಕಿ ಮಾವಿನ ಹಣ್ಣು ಬೂದು ಬಣ್ಣವನ್ನು ಪಡೆದುಕೊಂಡಿದೆ. ಹಾಗೇ ವಿಶೇಷ ಸುವಾಸನೆಯನ್ನು ಹೊಂದಿದೆ.

ಇದನ್ನೂ ಓದಿ : ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

1970-80 ರಲ್ಲಿ ಜಪಾನ್ ದೇಶದ ಮಿಯಝಾಕಿ ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಳೆಯಲಾದ ಈ ಮಾವಿನ ತಳಿ ಆ ಪಟ್ಟಣದ ಹೆಸರನ್ನೇ ಪಡೆದುಕೊಂಡು ಜಗತ್ತಿನಾದ್ಯಂತ ಮಿಯಝಾಕಿ ಎಂದೇ ಪ್ರಸಿದ್ಧವಾಗಿದೆ. ಜಪಾನ್‌ನಲ್ಲಿ ಆರಂಭವಾದ ಮಿಯಝಾಕಿ ತಳಿಯ ಬೆಳೆ ಕೊರಿಯಾ, ಮಲೇಷ್ಯಾ, ಥೈಲಾಂಡ್ ಹೀಗೆ ಭಾರತದ ಮಧ್ಯಪ್ರದೇಶದವರೆಗೂ ಬಂದಿದೆ. ಸಾಧಾರಣ ಮಾವಿಗಿಂತ 15% ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುವ ಈ ಮಿಯಝಾಕಿ ಮಾವು ಅತ್ಯಂತ ಕಡಿಮೆ ಆಮ್ಲದ ಗುಣವನ್ನು ಹೊಂದಿದೆ. ಏಪ್ರಿಲ್ ನಿಂದ ಆಗಸ್ಟ್ ತಿಂಗಳವರೆಗೆ ಹಣ್ಣನ್ನು ಬಿಡುವ ಈ ತಳಿ ಉಷ್ಣವಲಯದಲ್ಲಿ ಮಾತ್ರ ಚೆನ್ನಾಗಿ ಫಲ ಕೊಡುತ್ತದೆ.

ಕಳೆದ ವರ್ಷ ಅಂತರರಾಷ್ಟಿಯ ಮಾರುಕಟ್ಟೆಯಲ್ಲಿ ಕೆಜಿಗೆ 2.7 ಲಕ್ಷ ಬೆಲೆಗೆ ಮಾರಾಟವಾಗಿದ್ದ ಮಿಯಝಾಕಿ ಬೆಲೆ ಈ ವರ್ಷ 3  ಲಕ್ಷ ರೂಪಾಯಿ ತಲುಪುವ ನಿರೀಕ್ಷೆಯನ್ನು ರೈತರು ಇಟ್ಟುಕೊಂಡಿದ್ದಾರೆ. ಕೆಂಪು ಬಣ್ಣದ ಡೈನೋಸಾರ್ ಮೊಟ್ಟೆಯನ್ನು ಹೋಲುವ ಈ ಮಿಯಝಾಕಿ ಹಣ್ಣು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹವಾ ಸೃಷ್ಟಿಸಿದೆ. ಈ ಹಣ್ಣಿನ ವಿವರ ಕೇಳಿದ ನೆಟ್ಟಿಗರು ದುಬಾರಿ ಬೆಲೆಯಿಂದಾಗಿ ಮಿಯಝಾಕಿ ಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಾವಿನ ಹಣ್ಣಿನ ಸೀಸನ್‌ನಲ್ಲಿ ನೀವು ಮಾವಿನ ಪ್ರಿಯರಾಗಿದ್ದರೆ ಮಿಯಝಾಕಿ ತಳಿಯ ಹಣ್ಣನ್ನು ಪ್ರಯತ್ನಿಸುವ ಆಸೆಯಾಗುತ್ತಿದೆಯಾ ? ಹಾಗಿದ್ದರೆ 2.70 ಲಕ್ಷ ರೂಪಾಯಿಯನ್ನು ಮಾವಿನ ಹಣ್ಣಿಗಾಗಿ ನಿಮ್ಮ ಜೇಬಿನಿಂದ ತೆಗೆದಿರಿಸಿಕೊಳ್ಳುವುದು ಉತ್ತಮ.

– ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...