Homeಅಂತರಾಷ್ಟ್ರೀಯಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

ಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

- Advertisement -
- Advertisement -

ಭಾರತವಲ್ಲದೇ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮಾವಿನ ಹಣ್ಣಿಗೆ ವಿಶೇಷ ಸ್ಥಾನಮಾನವಿದೆ. ಜಗತ್ತಿನ ಮೂಲೆ ಮೂಲೆಯಲ್ಲಿ ಮಾವಿನ ಹಣ್ಣಿನ ಪ್ರಿಯರಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾವಿನ ಬೆಳೆ ಬಹಳ ಕಡಿಮೆ. ಹಾಗಾಗಿ ಭಾರತ ಸೇರಿ ಏಷ್ಯಾದ ರಾಷ್ಟ್ರಗಳಿಂದ ಅಮೆರಿಕ ಮತ್ತು ಯುರೋಪ್‌ಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣು ರಫ್ತಾಗುತ್ತದೆ. ವಿದೇಶಗಳಿಗೆ ರಫ್ತಾಗುವ ಮಾವಿನ ಹಣ್ಣುಗಳು ವಿಶೇಷ ಗುಣಮಟ್ಟವನ್ನು ಹೊಂದಿರುತ್ತವೆ ಮತ್ತು ಅವುಗಳ ಬೆಲೆಯೂ ಅಷ್ಟೇ ಹೆಚ್ಚಾಗಿರುತ್ತದೆ. ನಾವು ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 100 ರೂಪಾಯಿ ಎಂದರೆ ದುಬಾರಿ ಎಂದುಕೊಳ್ಳುತ್ತೇವೆ. ಆದರೆ ಇಲ್ಲೊಂದು ಮಾವಿನ ಹಣ್ಣಿದೆ. ಇದರ ಬೆಲೆಯನ್ನು ಕೇಳಿದರೆ ನಾವೆಲ್ಲರೂ ಆಶ್ಚರ್ಯಕ್ಕೆ ಒಳಗಾಗುತ್ತೇವೆ. ಹಾಗೇ ಇದು ನಿಜವೇ ಎಂದು ಪ್ರಶ್ನಿಸುತ್ತೇವೆ…

ಹೌದು ಇದು ಅಂತಹದ್ದೇ ಮಾವಿನ ಹಣ್ಣು. ನೋಡಲು ಅಷ್ಟೇ ಸುಂದರ. ಅಷ್ಟೇ ರುಚಿಕರ. ಸುವಾಸನೆ ಭರಿತ ತಳಿ. ಅಷ್ಟೇ ದುಬಾರಿ. ಒಂದು ಕೆಜಿಗೆ 2.7 ಲಕ್ಷ ರುಪಾಯಿ. ಅದು ಯಾವ ಮಾವಿನ ಹಣ್ಣು ಎನ್ನುತ್ತೀರಾ ? ಅದೇ ಜಪಾನ್ ಮೂಲದ ತಳಿಯ ಮಾವಿನ ಹಣ್ಣು ಮಿಯಝಾಕಿ. ಕೆಂಪು-ಬೂದು ಬಣ್ಣದ ಈ ಮಾವಿನ ಹಣ್ಣಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆಯಿದೆ. ಮಧ್ಯಪ್ರದೇಶದ ಕೃಷಿಕ ದಂಪತಿಯೊಂದು ಮಿಯಝಾಕಿ ತಳಿಯ ಮಾವಿನ ಹಣ್ಣನ್ನು ತಮ್ಮ ಹೊಲದಲ್ಲಿ ಬೆಳೆದು ಅಪಾರ ಲಾಭ ಗಳಿಸಿದ್ದಾರೆ.

ದುಬಾರಿ ಈ ಮಾವಿನ ಹಣ್ಣನ್ನು ಕಾಯ್ದುಕೊಳ್ಳುವುದು ಅಷ್ಟು ಸುಲಭವಲ್ಲ. ಹಾಗಾಗಿ ಕೃಷಿ ದಂಪತಿ ಈ ಮಾವಿನ ಹಣ್ಣಿನ ತೋಟಕ್ಕೆ ಗಾರ್ಡ್‌ಗಳನ್ನು ನೇಮಿಸಿದ್ದಾರೆ.

ಮಧ್ಯಪ್ರದೇಶದ ಈ ಕೃಷಿ ದಂಪತಿ ಬೆಳೆದಿರುವ ಮಿಯಝಾಕಿ ಮಾವಿನ ಹಣ್ಣಿನ ಒಂದು ಚಿಕ್ಕ ಹೋಳಿನ ಬೆಲೆಯೇ ಸುಮಾರು 1,000 ರೂಪಾಯಿಗೂ ಅಧಿಕವಾಗಿದೆ ಎಂದರೆ ನೀವು ನಂಬಲಾರರಿ. ಆದರೆ ಇದು ಸತ್ಯ. ಮಧ್ಯಪ್ರದೇಶದ ಈ ಕೃಷಿಕರು ಬೆಳೆದ ಮಿಯಝಾಕಿ ಮಾವಿನ ಹಣ್ಣು ಬೂದು ಬಣ್ಣವನ್ನು ಪಡೆದುಕೊಂಡಿದೆ. ಹಾಗೇ ವಿಶೇಷ ಸುವಾಸನೆಯನ್ನು ಹೊಂದಿದೆ.

ಇದನ್ನೂ ಓದಿ : ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

1970-80 ರಲ್ಲಿ ಜಪಾನ್ ದೇಶದ ಮಿಯಝಾಕಿ ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಳೆಯಲಾದ ಈ ಮಾವಿನ ತಳಿ ಆ ಪಟ್ಟಣದ ಹೆಸರನ್ನೇ ಪಡೆದುಕೊಂಡು ಜಗತ್ತಿನಾದ್ಯಂತ ಮಿಯಝಾಕಿ ಎಂದೇ ಪ್ರಸಿದ್ಧವಾಗಿದೆ. ಜಪಾನ್‌ನಲ್ಲಿ ಆರಂಭವಾದ ಮಿಯಝಾಕಿ ತಳಿಯ ಬೆಳೆ ಕೊರಿಯಾ, ಮಲೇಷ್ಯಾ, ಥೈಲಾಂಡ್ ಹೀಗೆ ಭಾರತದ ಮಧ್ಯಪ್ರದೇಶದವರೆಗೂ ಬಂದಿದೆ. ಸಾಧಾರಣ ಮಾವಿಗಿಂತ 15% ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುವ ಈ ಮಿಯಝಾಕಿ ಮಾವು ಅತ್ಯಂತ ಕಡಿಮೆ ಆಮ್ಲದ ಗುಣವನ್ನು ಹೊಂದಿದೆ. ಏಪ್ರಿಲ್ ನಿಂದ ಆಗಸ್ಟ್ ತಿಂಗಳವರೆಗೆ ಹಣ್ಣನ್ನು ಬಿಡುವ ಈ ತಳಿ ಉಷ್ಣವಲಯದಲ್ಲಿ ಮಾತ್ರ ಚೆನ್ನಾಗಿ ಫಲ ಕೊಡುತ್ತದೆ.

ಕಳೆದ ವರ್ಷ ಅಂತರರಾಷ್ಟಿಯ ಮಾರುಕಟ್ಟೆಯಲ್ಲಿ ಕೆಜಿಗೆ 2.7 ಲಕ್ಷ ಬೆಲೆಗೆ ಮಾರಾಟವಾಗಿದ್ದ ಮಿಯಝಾಕಿ ಬೆಲೆ ಈ ವರ್ಷ 3  ಲಕ್ಷ ರೂಪಾಯಿ ತಲುಪುವ ನಿರೀಕ್ಷೆಯನ್ನು ರೈತರು ಇಟ್ಟುಕೊಂಡಿದ್ದಾರೆ. ಕೆಂಪು ಬಣ್ಣದ ಡೈನೋಸಾರ್ ಮೊಟ್ಟೆಯನ್ನು ಹೋಲುವ ಈ ಮಿಯಝಾಕಿ ಹಣ್ಣು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹವಾ ಸೃಷ್ಟಿಸಿದೆ. ಈ ಹಣ್ಣಿನ ವಿವರ ಕೇಳಿದ ನೆಟ್ಟಿಗರು ದುಬಾರಿ ಬೆಲೆಯಿಂದಾಗಿ ಮಿಯಝಾಕಿ ಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಾವಿನ ಹಣ್ಣಿನ ಸೀಸನ್‌ನಲ್ಲಿ ನೀವು ಮಾವಿನ ಪ್ರಿಯರಾಗಿದ್ದರೆ ಮಿಯಝಾಕಿ ತಳಿಯ ಹಣ್ಣನ್ನು ಪ್ರಯತ್ನಿಸುವ ಆಸೆಯಾಗುತ್ತಿದೆಯಾ ? ಹಾಗಿದ್ದರೆ 2.70 ಲಕ್ಷ ರೂಪಾಯಿಯನ್ನು ಮಾವಿನ ಹಣ್ಣಿಗಾಗಿ ನಿಮ್ಮ ಜೇಬಿನಿಂದ ತೆಗೆದಿರಿಸಿಕೊಳ್ಳುವುದು ಉತ್ತಮ.

– ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...