Homeಮುಖಪುಟಪ್ರಪಂಚದಲ್ಲಿಯೇ ಅತಿ ಹೆಚ್ಚು ಕೋವಿಡ್ ಸಾವು ಭಾರತದಲ್ಲಿ ಸಂಭವಿಸಿವೆ: WHO ವರದಿ ನಿರಾಕರಿಸಿದ ಭಾರತ ಸರ್ಕಾರ

ಪ್ರಪಂಚದಲ್ಲಿಯೇ ಅತಿ ಹೆಚ್ಚು ಕೋವಿಡ್ ಸಾವು ಭಾರತದಲ್ಲಿ ಸಂಭವಿಸಿವೆ: WHO ವರದಿ ನಿರಾಕರಿಸಿದ ಭಾರತ ಸರ್ಕಾರ

- Advertisement -
- Advertisement -

2020ರ ಜನವರಿಯಿಂದ 2022ರ ಡಿಸೆಂಬರ್‌ವರೆಗಿನ ಎರಡು ವರ್ಷಗಳ ಅವಧಿಯಲ್ಲಿ ಭಾರತದಲ್ಲಿ ಸುಮಾರು 47 ಲಕ್ಷಕ್ಕೂ ಹೆಚ್ಚುವರಿ ಕೋವಿಡ್ ಸಾವುಗಳು ಸಂಭವಿಸಿವೆ ಎಂದು WHO ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ಹೇಳಿದೆ. ಇದು ಭಾರತದ ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ಅಂಕಿ ಅಂಶಗಳಿಗಿಂತ ಹತ್ತು ಪಟ್ಟು ಹೆಚ್ಚು ಇದ್ದು, ಪ್ರಪಂಚದ ಮೂರನೇ ಒಂದು ಭಾಗದಷ್ಟು ಸಾವುಗಳು ಭಾರತದಲ್ಲಿಯೇ ಸಂಭವಿಸಿದೆ ಎಂದು ವರದಿ ಹೇಳಿದೆ.

ಇಡೀ ಪ್ರಪಂಚದಲ್ಲಿ 60 ಲಕ್ಷ ಕೋವಿಡ್ ಸಾವುಗಳು ಸಂಭವಿಸಿವೆ ಎಂದು ಅಧಿಕೃತ ಅಂಕಿ ಅಂಶಗಳು ಹೇಳುತ್ತವೆ. ಆದರೆ ಅದು ಒಂದೂವರೆ ಕೋಟಿಗೂ ಹೆಚ್ಚಿದೆ ಎಂದು WHO ಹೇಳಿದೆ.

2020 ರಲ್ಲಿ ಸಿವಿಲ್ ನೋಂದಣಿ ವ್ಯವಸ್ಥೆಯ ಅಡಿಯಲ್ಲಿ ಭಾರತವು 4,74,806 ಸಾವುಗಳನ್ನು ದಾಖಲಿಸಿದೆ.

ಕೋವಿಡ್ ಸಾವುಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಬಳಸಿದ ಸಂಖ್ಯಾಶಾಸ್ತ್ರೀಯ ಮಾದರಿಯ ಬಳಕೆಯನ್ನು ಭಾರತ ಸರ್ಕಾರ ಬಲವಾಗಿ ನಿರಾಕರಿಸಿದೆ. ದೇಶವು ಜನನ – ಮರಣಗಳ ನೋಂದಣಿಯ ಅತ್ಯಂತ ದೃಢವಾದ ವ್ಯವಸ್ಥೆಯನ್ನು ಹೊಂದಿದೆ. WHOದ ಅಂಕಿ ಸಂಖ್ಯೆಗಳು ವಾಸ್ತವಕ್ಕೆ ದೂರವಾಗಿವೆ. ಈ ದತ್ತಾಂಶ ಸಂಗ್ರಹದ ವ್ಯವಸ್ಥೆಯನ್ನು “ಸಂಖ್ಯಾಶಾಸ್ತ್ರೀಯವಾಗಿ ಅಸ್ಪಷ್ಟ ಮತ್ತು ವೈಜ್ಞಾನಿಕವಾಗಿ ಪ್ರಶ್ನಾರ್ಹ” ಎಂದು ಕರೆದಿದೆ.

ಹದಿನೇಳು ಭಾರತೀಯ ರಾಜ್ಯಗಳಿಗೆ ಸಂಬಂಧಿಸಿದಂತೆ ಡೇಟಾವನ್ನು ಕೆಲವು ವೆಬ್‌ಸೈಟ್‌ಗಳು ಮತ್ತು ಮಾಧ್ಯಮ ವರದಿಗಳಿಂದ ಪಡೆಯಲಾಗಿದ್ದು, ಇದನ್ನು ಭಾರತವು ಸತತವಾಗಿ ಪ್ರಶ್ನಿಸಿದೆ. ಆದರೆ ಭಾರತದ ವಿರೋಧದ ನಡುವೆಯೂ ಕೋವಿಡ್ ಸಾವುಗಳ ಲೆಕ್ಕಾಚಾರದ ಪ್ರಕ್ರಿಯೆಯನ್ನು WHO ಮುಂದುವರೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಇದನ್ನೂ ಓದಿ; ರಾಜಾರಾಂ ತಲ್ಲೂರು ಅವರ ’ಕರಿಡಬ್ಬಿ ಪುಸ್ತಕದಿಂದ ಆಯ್ದ ಅಧ್ಯಾಯ; #WHOCARES

ಈ ಪ್ರಕ್ರಿಯೆಯಲ್ಲಿ WHO ಜೊತೆ ನಡೆಸಿದ ಸಂವಾದ-ಸಂವಹದನಲ್ಲಿ ಅದು ಹಲವಾರು ಮಾದರಿಗಳನ್ನು ಉಲ್ಲೇಖಿಸಿ ವಿವಿಧ ಹೆಚ್ಚುವರಿ ಮರಣದ ಅಂಕಿಅಂಶಗಳನ್ನು ಯೋಜಿಸಿದೆ. ಸಿವಿಲ್ ನೋಂದಣಿ ವ್ಯವಸ್ಥೆಯ ಅಡಿಯಲ್ಲಿ ದಾಖಲಾದ ಅಂಕಿ ಅಂಶಗಳನ್ನು WHO ಜೊತೆಗೆ ಹಂಚಿಕೊಂಡಿದ್ದೇವೆ. ಆದರೂ ನಮ್ಮೆಲ್ಲ ಅಂಕಿ ಅಂಶಗಳನ್ನು ತಿರಸ್ಕರಿಸಿ ಹೆಚ್ಚಿನ ಮರಣ ಸಂಭವಿಸಿವೆ ಎಂದು ವರದಿ ನೀಡಿದೆ. ಆದರೆ ಅದು ಬಳಸಿದ ಮಾದರಿಗಳ ಸಿಂಧುತ್ವ ಮತ್ತು ದೃಢತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಭಾರತ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...