Homeಕರೋನಾ ತಲ್ಲಣಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ. ಕೋಟ್ಯಾಂತರ ಜನರಿಗೆ ಹರಡಿದ ಈ ಸೋಂಕು ಲಕ್ಷಾಂತರ ಜನರ ಪ್ರಾಣ ತೆಗೆದುಕೊಂಡಿದೆ. ಈ ಒಂದೂವರೆ ವರ್ಷದಲ್ಲಿ ಈ ಸಾಂಕ್ರಾಮಿಕ ಪಿಡುಗನ್ನು ನಿರ್ವಹಿಸಲು ಹಲವಾರು ನಾಯಕರು ಹೆಣಗಾಡಿದ್ದಾರೆ. ಕೋವಿಡ್‌ ಅನ್ನು ನಿಗ್ರಹಿಸುವುದು ಬಹು ಕಷ್ಟದ ಕೆಲಸ. ಆದರೂ ಕೆಲವು ನಾಯಕರು ರೋಗ ತೀವ್ರತೆಯನ್ನು ಕಡಿಮೆ ಮಾಡಲು ಯತ್ನಿಸಿದ್ದಾರೆ. ಅದೇ ವೇಳೆಯಲ್ಲಿ ಕೆಲವು ನಾಯಕರು ಅತ್ಯಂತ ಕಳಪೆ ನಿರ್ವಹಣೆಯಿಂದ ಕೋವಿಡ್ ಮತ್ತಷ್ಟು ಉಲ್ಬಣಿಸಲು, ಅಪಾರ ಸಾವು ನೋವುಗಳುಂಟಾಗಲು ಕಾರಣರಾಗಿದ್ದಾರೆ.

ವೈಜ್ಞಾನಿಕ ಮಾಹಿತಿಗಳನ್ನು, ತಜ್ಞರ ವರದಿಗಳನ್ನು ಕಡೆಗಣಿಸುವ ಮೂಲಕ, ಮೂಡನಂಬಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ, ಮಾಸ್ಕ್, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರುವ ಮೂಲಕ, ಸಮರ್ಪಕ ವೈದ್ಯಕೀಯ ವ್ಯವಸ್ಥೆ ಮಾಡದಿರುವುದರ ಮೂಲಕ ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗೆ ಇವರು ಕಾರಣರಾಗಿದ್ದಾರೆ. ಅಮೆರಿಕ ಮೂಲಕ The Conversation ಎಂಬ ಎನ್‌ಜಿಓ ಒಂದು ‘ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು’ ಎಂದು ಐದು ದೇಶದ ಪ್ರಧಾನಿ/ಅಧ್ಯಕ್ಷರ ಪಟ್ಟಿ ಮಾಡಿದೆ. ಅವರಲ್ಲಿ ಅತಿ ಕೆಟ್ಟ ಕೋವಿಡ್ ನಿರ್ವಹಣೆ ಮಾಡಿದವರು ಯಾರು ಎಂಬ ಟ್ವಿಟರ್ ಪೋಲ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶೇ.90 ರಷ್ಟು ಮತಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನ ಪಡೆದಿದ್ದಾರೆ.

ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು ಎಂದು ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ, ಭಾರತದ ಪ್ರಧಾನ ನರೇಂದ್ರ ಮೋದಿ, ಮೆಕ್ಸಿಕೋದ ಆಮ್ಲೊ, ಅಮೆರಿಕದ ಡೋನಾಲ್ಡ್ ಟ್ರಂಪ್ ಮತ್ತು ಬೆಲಾರಸ್‌ನ ಲುಕಾಶೆಂಕೊರವರನ್ನು ಗುರುತಿಸಿದೆ. ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ 5% ಮತಗಳೊಂದಿಗೆ ಎರಡನೇ ಸ್ಥಾನ ಪಡೆದರೆ, 3.7% ಮತಗಳೊಂದಿಗೆ ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ ತೃತೀಯ ಸ್ಥಾನದಲ್ಲಿದ್ದಾರೆ. ಮೆಕ್ಸಿಕೋದ ಆಮ್ಲೊ 1.3% ಮತಗಳನ್ನು ಪಡೆದರು. ಟ್ವಿಟರ್ ಪೋಲ್‌ಗೆ ಕೇವಲ ನಾಲ್ಕು ಆಯ್ಕೆಗಳು ಇದ್ದ ಕಾರಣ ಬೆಲಾರಸ್‌ನ ಲುಕಾಶೆಂಕೊರವರಿಗೆ ಮತ ಹಾಕಬೇಕಾದರೆ ಕಮೆಂಟ್ ಮಾಡಲು ಸೂಚಿಸಲಾಗಿತ್ತು. ಆದರೆ ಕಮೆಂಟ್ ಸೆಕ್ಷನ್‌ನಲ್ಲಿ ನರೇಂದ್ರ ಮೋದಿ ಹೆಸರುಗಳೆ ತುಂಬಿಹೋಗಿವೆ.

ಭಾರತದ ಇಂದಿನ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸಿದ್ದು ಅವರು, ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ತಜ್ಞರು ಎರಡನೇ ಅಲೆಯ ಬಗ್ಗೆ ಸಾಕಷ್ಟು ಹೆಚ್ಚರಿಸಿದ್ದರೂ ಸಹ ನರೇಂದ್ರ ಮೋದಿಯವರು 2021ರ ಜನವರಿಯಲ್ಲಿ “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸುವ ಮೂಲಕ ಮಾನವೀಯತೆಯನ್ನು ಉಳಿಸಿದೆ, ವಿಶ್ವಕ್ಕೆ ಮಾದರಿಯಾಗಿದೆ” ಎಂದು ಜಾಗತಿಕ ವೇದಿಕೆಯಲ್ಲಿ ಘೋಷಿಸಿದರು. ಮಾರ್ಚ್ ನಲ್ಲಿ “ನಾವು ಕೋವಿಡ್‌ ಅಂತ್ಯಕಾಲದಲ್ಲಿದ್ದೇವೆ” ಎಂದು ಭಾರತದ ಆರೋಗ್ಯ ಸಚಿವ ಹರ್ಷವರ್ಧನ್ ಘೋಷಿಸಿದರು. ಅಂದರೆ ಕೊರೊನಾ ಬಲಪಡೆಯುತ್ತಿರುವ ಸಮಯದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕಿದ್ದ ಭಾರತ ತೀವ್ರ ನಿರ್ಲಕ್ಷ್ಯ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಏಪ್ರಿಲ್‌ನಲ್ಲಿ ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳಲ್ಲಿ ಮೋದಿ ಮತ್ತು ಇತರ ರಾಜಕೀಯ ನಾಯಕರು ಪಾಲ್ಗೊಂಡರು. ಆರೋಗ್ಯ ತಜ್ಞರ ಎಚ್ಚರಿಕೆಯ ಹೊರತಾಗಿಯೂ ಲಕ್ಷಾಂತರ ಜನರು ಸೇರುವ ಕುಂಭಮೇಳಕ್ಕೆ ಅವಕಾಶ ನೀಡಲಾಯಿತು. ಇದು ಕೋವಿಡ್ ಎರಡನೇ ಅಲೆಯ ತೀವ್ರವಾಗಿ ಹರಡಿ ಹಾನಿಮಾಡಲು ಕಾರಣವಾಯಿತು ಎಂದು ವರದಿ ತಿಳಿಸಿದೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಇದೇ ಸಮಯದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಆರೋಪಿಸಿದ್ದರು.

ಲಸಿಕೆ ವಿಚಾರದಲ್ಲಿಯೂ ಮೋದಿ ಸಂಪೂರ್ಣವಾಗಿ ಎಡವಿದರು. ಭಾರತದಲ್ಲಿ ಲಸಿಕೆ ಕೊರತೆಯಿದ್ದರೂ ವಿದೇಶಗಳಿಗೆ ರಫ್ತು ಮಾಡಲಾಯಿತು. ಈಗ ಭಾರತದಲ್ಲಿ ಲಸಿಕೆಗೆ ಹಾಹಾಕಾರವೆದ್ದಿದೆ ಎಂದು ವರದಿ ಟೀಕಿಸಿದೆ.


ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...