Homeಕರೋನಾ ತಲ್ಲಣಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ. ಕೋಟ್ಯಾಂತರ ಜನರಿಗೆ ಹರಡಿದ ಈ ಸೋಂಕು ಲಕ್ಷಾಂತರ ಜನರ ಪ್ರಾಣ ತೆಗೆದುಕೊಂಡಿದೆ. ಈ ಒಂದೂವರೆ ವರ್ಷದಲ್ಲಿ ಈ ಸಾಂಕ್ರಾಮಿಕ ಪಿಡುಗನ್ನು ನಿರ್ವಹಿಸಲು ಹಲವಾರು ನಾಯಕರು ಹೆಣಗಾಡಿದ್ದಾರೆ. ಕೋವಿಡ್‌ ಅನ್ನು ನಿಗ್ರಹಿಸುವುದು ಬಹು ಕಷ್ಟದ ಕೆಲಸ. ಆದರೂ ಕೆಲವು ನಾಯಕರು ರೋಗ ತೀವ್ರತೆಯನ್ನು ಕಡಿಮೆ ಮಾಡಲು ಯತ್ನಿಸಿದ್ದಾರೆ. ಅದೇ ವೇಳೆಯಲ್ಲಿ ಕೆಲವು ನಾಯಕರು ಅತ್ಯಂತ ಕಳಪೆ ನಿರ್ವಹಣೆಯಿಂದ ಕೋವಿಡ್ ಮತ್ತಷ್ಟು ಉಲ್ಬಣಿಸಲು, ಅಪಾರ ಸಾವು ನೋವುಗಳುಂಟಾಗಲು ಕಾರಣರಾಗಿದ್ದಾರೆ.

ವೈಜ್ಞಾನಿಕ ಮಾಹಿತಿಗಳನ್ನು, ತಜ್ಞರ ವರದಿಗಳನ್ನು ಕಡೆಗಣಿಸುವ ಮೂಲಕ, ಮೂಡನಂಬಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ, ಮಾಸ್ಕ್, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರುವ ಮೂಲಕ, ಸಮರ್ಪಕ ವೈದ್ಯಕೀಯ ವ್ಯವಸ್ಥೆ ಮಾಡದಿರುವುದರ ಮೂಲಕ ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗೆ ಇವರು ಕಾರಣರಾಗಿದ್ದಾರೆ. ಅಮೆರಿಕ ಮೂಲಕ The Conversation ಎಂಬ ಎನ್‌ಜಿಓ ಒಂದು ‘ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು’ ಎಂದು ಐದು ದೇಶದ ಪ್ರಧಾನಿ/ಅಧ್ಯಕ್ಷರ ಪಟ್ಟಿ ಮಾಡಿದೆ. ಅವರಲ್ಲಿ ಅತಿ ಕೆಟ್ಟ ಕೋವಿಡ್ ನಿರ್ವಹಣೆ ಮಾಡಿದವರು ಯಾರು ಎಂಬ ಟ್ವಿಟರ್ ಪೋಲ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶೇ.90 ರಷ್ಟು ಮತಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನ ಪಡೆದಿದ್ದಾರೆ.

ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು ಎಂದು ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ, ಭಾರತದ ಪ್ರಧಾನ ನರೇಂದ್ರ ಮೋದಿ, ಮೆಕ್ಸಿಕೋದ ಆಮ್ಲೊ, ಅಮೆರಿಕದ ಡೋನಾಲ್ಡ್ ಟ್ರಂಪ್ ಮತ್ತು ಬೆಲಾರಸ್‌ನ ಲುಕಾಶೆಂಕೊರವರನ್ನು ಗುರುತಿಸಿದೆ. ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ 5% ಮತಗಳೊಂದಿಗೆ ಎರಡನೇ ಸ್ಥಾನ ಪಡೆದರೆ, 3.7% ಮತಗಳೊಂದಿಗೆ ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ ತೃತೀಯ ಸ್ಥಾನದಲ್ಲಿದ್ದಾರೆ. ಮೆಕ್ಸಿಕೋದ ಆಮ್ಲೊ 1.3% ಮತಗಳನ್ನು ಪಡೆದರು. ಟ್ವಿಟರ್ ಪೋಲ್‌ಗೆ ಕೇವಲ ನಾಲ್ಕು ಆಯ್ಕೆಗಳು ಇದ್ದ ಕಾರಣ ಬೆಲಾರಸ್‌ನ ಲುಕಾಶೆಂಕೊರವರಿಗೆ ಮತ ಹಾಕಬೇಕಾದರೆ ಕಮೆಂಟ್ ಮಾಡಲು ಸೂಚಿಸಲಾಗಿತ್ತು. ಆದರೆ ಕಮೆಂಟ್ ಸೆಕ್ಷನ್‌ನಲ್ಲಿ ನರೇಂದ್ರ ಮೋದಿ ಹೆಸರುಗಳೆ ತುಂಬಿಹೋಗಿವೆ.

ಭಾರತದ ಇಂದಿನ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸಿದ್ದು ಅವರು, ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ತಜ್ಞರು ಎರಡನೇ ಅಲೆಯ ಬಗ್ಗೆ ಸಾಕಷ್ಟು ಹೆಚ್ಚರಿಸಿದ್ದರೂ ಸಹ ನರೇಂದ್ರ ಮೋದಿಯವರು 2021ರ ಜನವರಿಯಲ್ಲಿ “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸುವ ಮೂಲಕ ಮಾನವೀಯತೆಯನ್ನು ಉಳಿಸಿದೆ, ವಿಶ್ವಕ್ಕೆ ಮಾದರಿಯಾಗಿದೆ” ಎಂದು ಜಾಗತಿಕ ವೇದಿಕೆಯಲ್ಲಿ ಘೋಷಿಸಿದರು. ಮಾರ್ಚ್ ನಲ್ಲಿ “ನಾವು ಕೋವಿಡ್‌ ಅಂತ್ಯಕಾಲದಲ್ಲಿದ್ದೇವೆ” ಎಂದು ಭಾರತದ ಆರೋಗ್ಯ ಸಚಿವ ಹರ್ಷವರ್ಧನ್ ಘೋಷಿಸಿದರು. ಅಂದರೆ ಕೊರೊನಾ ಬಲಪಡೆಯುತ್ತಿರುವ ಸಮಯದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕಿದ್ದ ಭಾರತ ತೀವ್ರ ನಿರ್ಲಕ್ಷ್ಯ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಏಪ್ರಿಲ್‌ನಲ್ಲಿ ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳಲ್ಲಿ ಮೋದಿ ಮತ್ತು ಇತರ ರಾಜಕೀಯ ನಾಯಕರು ಪಾಲ್ಗೊಂಡರು. ಆರೋಗ್ಯ ತಜ್ಞರ ಎಚ್ಚರಿಕೆಯ ಹೊರತಾಗಿಯೂ ಲಕ್ಷಾಂತರ ಜನರು ಸೇರುವ ಕುಂಭಮೇಳಕ್ಕೆ ಅವಕಾಶ ನೀಡಲಾಯಿತು. ಇದು ಕೋವಿಡ್ ಎರಡನೇ ಅಲೆಯ ತೀವ್ರವಾಗಿ ಹರಡಿ ಹಾನಿಮಾಡಲು ಕಾರಣವಾಯಿತು ಎಂದು ವರದಿ ತಿಳಿಸಿದೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಇದೇ ಸಮಯದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಆರೋಪಿಸಿದ್ದರು.

ಲಸಿಕೆ ವಿಚಾರದಲ್ಲಿಯೂ ಮೋದಿ ಸಂಪೂರ್ಣವಾಗಿ ಎಡವಿದರು. ಭಾರತದಲ್ಲಿ ಲಸಿಕೆ ಕೊರತೆಯಿದ್ದರೂ ವಿದೇಶಗಳಿಗೆ ರಫ್ತು ಮಾಡಲಾಯಿತು. ಈಗ ಭಾರತದಲ್ಲಿ ಲಸಿಕೆಗೆ ಹಾಹಾಕಾರವೆದ್ದಿದೆ ಎಂದು ವರದಿ ಟೀಕಿಸಿದೆ.


ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...