Homeಕರೋನಾ ತಲ್ಲಣಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ. ಕೋಟ್ಯಾಂತರ ಜನರಿಗೆ ಹರಡಿದ ಈ ಸೋಂಕು ಲಕ್ಷಾಂತರ ಜನರ ಪ್ರಾಣ ತೆಗೆದುಕೊಂಡಿದೆ. ಈ ಒಂದೂವರೆ ವರ್ಷದಲ್ಲಿ ಈ ಸಾಂಕ್ರಾಮಿಕ ಪಿಡುಗನ್ನು ನಿರ್ವಹಿಸಲು ಹಲವಾರು ನಾಯಕರು ಹೆಣಗಾಡಿದ್ದಾರೆ. ಕೋವಿಡ್‌ ಅನ್ನು ನಿಗ್ರಹಿಸುವುದು ಬಹು ಕಷ್ಟದ ಕೆಲಸ. ಆದರೂ ಕೆಲವು ನಾಯಕರು ರೋಗ ತೀವ್ರತೆಯನ್ನು ಕಡಿಮೆ ಮಾಡಲು ಯತ್ನಿಸಿದ್ದಾರೆ. ಅದೇ ವೇಳೆಯಲ್ಲಿ ಕೆಲವು ನಾಯಕರು ಅತ್ಯಂತ ಕಳಪೆ ನಿರ್ವಹಣೆಯಿಂದ ಕೋವಿಡ್ ಮತ್ತಷ್ಟು ಉಲ್ಬಣಿಸಲು, ಅಪಾರ ಸಾವು ನೋವುಗಳುಂಟಾಗಲು ಕಾರಣರಾಗಿದ್ದಾರೆ.

ವೈಜ್ಞಾನಿಕ ಮಾಹಿತಿಗಳನ್ನು, ತಜ್ಞರ ವರದಿಗಳನ್ನು ಕಡೆಗಣಿಸುವ ಮೂಲಕ, ಮೂಡನಂಬಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ, ಮಾಸ್ಕ್, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರುವ ಮೂಲಕ, ಸಮರ್ಪಕ ವೈದ್ಯಕೀಯ ವ್ಯವಸ್ಥೆ ಮಾಡದಿರುವುದರ ಮೂಲಕ ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗೆ ಇವರು ಕಾರಣರಾಗಿದ್ದಾರೆ. ಅಮೆರಿಕ ಮೂಲಕ The Conversation ಎಂಬ ಎನ್‌ಜಿಓ ಒಂದು ‘ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು’ ಎಂದು ಐದು ದೇಶದ ಪ್ರಧಾನಿ/ಅಧ್ಯಕ್ಷರ ಪಟ್ಟಿ ಮಾಡಿದೆ. ಅವರಲ್ಲಿ ಅತಿ ಕೆಟ್ಟ ಕೋವಿಡ್ ನಿರ್ವಹಣೆ ಮಾಡಿದವರು ಯಾರು ಎಂಬ ಟ್ವಿಟರ್ ಪೋಲ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶೇ.90 ರಷ್ಟು ಮತಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನ ಪಡೆದಿದ್ದಾರೆ.

ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು ಎಂದು ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ, ಭಾರತದ ಪ್ರಧಾನ ನರೇಂದ್ರ ಮೋದಿ, ಮೆಕ್ಸಿಕೋದ ಆಮ್ಲೊ, ಅಮೆರಿಕದ ಡೋನಾಲ್ಡ್ ಟ್ರಂಪ್ ಮತ್ತು ಬೆಲಾರಸ್‌ನ ಲುಕಾಶೆಂಕೊರವರನ್ನು ಗುರುತಿಸಿದೆ. ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ 5% ಮತಗಳೊಂದಿಗೆ ಎರಡನೇ ಸ್ಥಾನ ಪಡೆದರೆ, 3.7% ಮತಗಳೊಂದಿಗೆ ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ ತೃತೀಯ ಸ್ಥಾನದಲ್ಲಿದ್ದಾರೆ. ಮೆಕ್ಸಿಕೋದ ಆಮ್ಲೊ 1.3% ಮತಗಳನ್ನು ಪಡೆದರು. ಟ್ವಿಟರ್ ಪೋಲ್‌ಗೆ ಕೇವಲ ನಾಲ್ಕು ಆಯ್ಕೆಗಳು ಇದ್ದ ಕಾರಣ ಬೆಲಾರಸ್‌ನ ಲುಕಾಶೆಂಕೊರವರಿಗೆ ಮತ ಹಾಕಬೇಕಾದರೆ ಕಮೆಂಟ್ ಮಾಡಲು ಸೂಚಿಸಲಾಗಿತ್ತು. ಆದರೆ ಕಮೆಂಟ್ ಸೆಕ್ಷನ್‌ನಲ್ಲಿ ನರೇಂದ್ರ ಮೋದಿ ಹೆಸರುಗಳೆ ತುಂಬಿಹೋಗಿವೆ.

ಭಾರತದ ಇಂದಿನ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸಿದ್ದು ಅವರು, ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ತಜ್ಞರು ಎರಡನೇ ಅಲೆಯ ಬಗ್ಗೆ ಸಾಕಷ್ಟು ಹೆಚ್ಚರಿಸಿದ್ದರೂ ಸಹ ನರೇಂದ್ರ ಮೋದಿಯವರು 2021ರ ಜನವರಿಯಲ್ಲಿ “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸುವ ಮೂಲಕ ಮಾನವೀಯತೆಯನ್ನು ಉಳಿಸಿದೆ, ವಿಶ್ವಕ್ಕೆ ಮಾದರಿಯಾಗಿದೆ” ಎಂದು ಜಾಗತಿಕ ವೇದಿಕೆಯಲ್ಲಿ ಘೋಷಿಸಿದರು. ಮಾರ್ಚ್ ನಲ್ಲಿ “ನಾವು ಕೋವಿಡ್‌ ಅಂತ್ಯಕಾಲದಲ್ಲಿದ್ದೇವೆ” ಎಂದು ಭಾರತದ ಆರೋಗ್ಯ ಸಚಿವ ಹರ್ಷವರ್ಧನ್ ಘೋಷಿಸಿದರು. ಅಂದರೆ ಕೊರೊನಾ ಬಲಪಡೆಯುತ್ತಿರುವ ಸಮಯದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕಿದ್ದ ಭಾರತ ತೀವ್ರ ನಿರ್ಲಕ್ಷ್ಯ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಏಪ್ರಿಲ್‌ನಲ್ಲಿ ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳಲ್ಲಿ ಮೋದಿ ಮತ್ತು ಇತರ ರಾಜಕೀಯ ನಾಯಕರು ಪಾಲ್ಗೊಂಡರು. ಆರೋಗ್ಯ ತಜ್ಞರ ಎಚ್ಚರಿಕೆಯ ಹೊರತಾಗಿಯೂ ಲಕ್ಷಾಂತರ ಜನರು ಸೇರುವ ಕುಂಭಮೇಳಕ್ಕೆ ಅವಕಾಶ ನೀಡಲಾಯಿತು. ಇದು ಕೋವಿಡ್ ಎರಡನೇ ಅಲೆಯ ತೀವ್ರವಾಗಿ ಹರಡಿ ಹಾನಿಮಾಡಲು ಕಾರಣವಾಯಿತು ಎಂದು ವರದಿ ತಿಳಿಸಿದೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಇದೇ ಸಮಯದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಆರೋಪಿಸಿದ್ದರು.

ಲಸಿಕೆ ವಿಚಾರದಲ್ಲಿಯೂ ಮೋದಿ ಸಂಪೂರ್ಣವಾಗಿ ಎಡವಿದರು. ಭಾರತದಲ್ಲಿ ಲಸಿಕೆ ಕೊರತೆಯಿದ್ದರೂ ವಿದೇಶಗಳಿಗೆ ರಫ್ತು ಮಾಡಲಾಯಿತು. ಈಗ ಭಾರತದಲ್ಲಿ ಲಸಿಕೆಗೆ ಹಾಹಾಕಾರವೆದ್ದಿದೆ ಎಂದು ವರದಿ ಟೀಕಿಸಿದೆ.


ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...