Homeಕರೋನಾ ತಲ್ಲಣಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ. ಕೋಟ್ಯಾಂತರ ಜನರಿಗೆ ಹರಡಿದ ಈ ಸೋಂಕು ಲಕ್ಷಾಂತರ ಜನರ ಪ್ರಾಣ ತೆಗೆದುಕೊಂಡಿದೆ. ಈ ಒಂದೂವರೆ ವರ್ಷದಲ್ಲಿ ಈ ಸಾಂಕ್ರಾಮಿಕ ಪಿಡುಗನ್ನು ನಿರ್ವಹಿಸಲು ಹಲವಾರು ನಾಯಕರು ಹೆಣಗಾಡಿದ್ದಾರೆ. ಕೋವಿಡ್‌ ಅನ್ನು ನಿಗ್ರಹಿಸುವುದು ಬಹು ಕಷ್ಟದ ಕೆಲಸ. ಆದರೂ ಕೆಲವು ನಾಯಕರು ರೋಗ ತೀವ್ರತೆಯನ್ನು ಕಡಿಮೆ ಮಾಡಲು ಯತ್ನಿಸಿದ್ದಾರೆ. ಅದೇ ವೇಳೆಯಲ್ಲಿ ಕೆಲವು ನಾಯಕರು ಅತ್ಯಂತ ಕಳಪೆ ನಿರ್ವಹಣೆಯಿಂದ ಕೋವಿಡ್ ಮತ್ತಷ್ಟು ಉಲ್ಬಣಿಸಲು, ಅಪಾರ ಸಾವು ನೋವುಗಳುಂಟಾಗಲು ಕಾರಣರಾಗಿದ್ದಾರೆ.

ವೈಜ್ಞಾನಿಕ ಮಾಹಿತಿಗಳನ್ನು, ತಜ್ಞರ ವರದಿಗಳನ್ನು ಕಡೆಗಣಿಸುವ ಮೂಲಕ, ಮೂಡನಂಬಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ, ಮಾಸ್ಕ್, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರುವ ಮೂಲಕ, ಸಮರ್ಪಕ ವೈದ್ಯಕೀಯ ವ್ಯವಸ್ಥೆ ಮಾಡದಿರುವುದರ ಮೂಲಕ ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗೆ ಇವರು ಕಾರಣರಾಗಿದ್ದಾರೆ. ಅಮೆರಿಕ ಮೂಲಕ The Conversation ಎಂಬ ಎನ್‌ಜಿಓ ಒಂದು ‘ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು’ ಎಂದು ಐದು ದೇಶದ ಪ್ರಧಾನಿ/ಅಧ್ಯಕ್ಷರ ಪಟ್ಟಿ ಮಾಡಿದೆ. ಅವರಲ್ಲಿ ಅತಿ ಕೆಟ್ಟ ಕೋವಿಡ್ ನಿರ್ವಹಣೆ ಮಾಡಿದವರು ಯಾರು ಎಂಬ ಟ್ವಿಟರ್ ಪೋಲ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶೇ.90 ರಷ್ಟು ಮತಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನ ಪಡೆದಿದ್ದಾರೆ.

ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು ಎಂದು ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ, ಭಾರತದ ಪ್ರಧಾನ ನರೇಂದ್ರ ಮೋದಿ, ಮೆಕ್ಸಿಕೋದ ಆಮ್ಲೊ, ಅಮೆರಿಕದ ಡೋನಾಲ್ಡ್ ಟ್ರಂಪ್ ಮತ್ತು ಬೆಲಾರಸ್‌ನ ಲುಕಾಶೆಂಕೊರವರನ್ನು ಗುರುತಿಸಿದೆ. ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ 5% ಮತಗಳೊಂದಿಗೆ ಎರಡನೇ ಸ್ಥಾನ ಪಡೆದರೆ, 3.7% ಮತಗಳೊಂದಿಗೆ ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ ತೃತೀಯ ಸ್ಥಾನದಲ್ಲಿದ್ದಾರೆ. ಮೆಕ್ಸಿಕೋದ ಆಮ್ಲೊ 1.3% ಮತಗಳನ್ನು ಪಡೆದರು. ಟ್ವಿಟರ್ ಪೋಲ್‌ಗೆ ಕೇವಲ ನಾಲ್ಕು ಆಯ್ಕೆಗಳು ಇದ್ದ ಕಾರಣ ಬೆಲಾರಸ್‌ನ ಲುಕಾಶೆಂಕೊರವರಿಗೆ ಮತ ಹಾಕಬೇಕಾದರೆ ಕಮೆಂಟ್ ಮಾಡಲು ಸೂಚಿಸಲಾಗಿತ್ತು. ಆದರೆ ಕಮೆಂಟ್ ಸೆಕ್ಷನ್‌ನಲ್ಲಿ ನರೇಂದ್ರ ಮೋದಿ ಹೆಸರುಗಳೆ ತುಂಬಿಹೋಗಿವೆ.

ಭಾರತದ ಇಂದಿನ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸಿದ್ದು ಅವರು, ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ತಜ್ಞರು ಎರಡನೇ ಅಲೆಯ ಬಗ್ಗೆ ಸಾಕಷ್ಟು ಹೆಚ್ಚರಿಸಿದ್ದರೂ ಸಹ ನರೇಂದ್ರ ಮೋದಿಯವರು 2021ರ ಜನವರಿಯಲ್ಲಿ “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸುವ ಮೂಲಕ ಮಾನವೀಯತೆಯನ್ನು ಉಳಿಸಿದೆ, ವಿಶ್ವಕ್ಕೆ ಮಾದರಿಯಾಗಿದೆ” ಎಂದು ಜಾಗತಿಕ ವೇದಿಕೆಯಲ್ಲಿ ಘೋಷಿಸಿದರು. ಮಾರ್ಚ್ ನಲ್ಲಿ “ನಾವು ಕೋವಿಡ್‌ ಅಂತ್ಯಕಾಲದಲ್ಲಿದ್ದೇವೆ” ಎಂದು ಭಾರತದ ಆರೋಗ್ಯ ಸಚಿವ ಹರ್ಷವರ್ಧನ್ ಘೋಷಿಸಿದರು. ಅಂದರೆ ಕೊರೊನಾ ಬಲಪಡೆಯುತ್ತಿರುವ ಸಮಯದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕಿದ್ದ ಭಾರತ ತೀವ್ರ ನಿರ್ಲಕ್ಷ್ಯ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಏಪ್ರಿಲ್‌ನಲ್ಲಿ ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳಲ್ಲಿ ಮೋದಿ ಮತ್ತು ಇತರ ರಾಜಕೀಯ ನಾಯಕರು ಪಾಲ್ಗೊಂಡರು. ಆರೋಗ್ಯ ತಜ್ಞರ ಎಚ್ಚರಿಕೆಯ ಹೊರತಾಗಿಯೂ ಲಕ್ಷಾಂತರ ಜನರು ಸೇರುವ ಕುಂಭಮೇಳಕ್ಕೆ ಅವಕಾಶ ನೀಡಲಾಯಿತು. ಇದು ಕೋವಿಡ್ ಎರಡನೇ ಅಲೆಯ ತೀವ್ರವಾಗಿ ಹರಡಿ ಹಾನಿಮಾಡಲು ಕಾರಣವಾಯಿತು ಎಂದು ವರದಿ ತಿಳಿಸಿದೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಇದೇ ಸಮಯದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಆರೋಪಿಸಿದ್ದರು.

ಲಸಿಕೆ ವಿಚಾರದಲ್ಲಿಯೂ ಮೋದಿ ಸಂಪೂರ್ಣವಾಗಿ ಎಡವಿದರು. ಭಾರತದಲ್ಲಿ ಲಸಿಕೆ ಕೊರತೆಯಿದ್ದರೂ ವಿದೇಶಗಳಿಗೆ ರಫ್ತು ಮಾಡಲಾಯಿತು. ಈಗ ಭಾರತದಲ್ಲಿ ಲಸಿಕೆಗೆ ಹಾಹಾಕಾರವೆದ್ದಿದೆ ಎಂದು ವರದಿ ಟೀಕಿಸಿದೆ.


ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....