Homeಕರೋನಾ ತಲ್ಲಣಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ. ಕೋಟ್ಯಾಂತರ ಜನರಿಗೆ ಹರಡಿದ ಈ ಸೋಂಕು ಲಕ್ಷಾಂತರ ಜನರ ಪ್ರಾಣ ತೆಗೆದುಕೊಂಡಿದೆ. ಈ ಒಂದೂವರೆ ವರ್ಷದಲ್ಲಿ ಈ ಸಾಂಕ್ರಾಮಿಕ ಪಿಡುಗನ್ನು ನಿರ್ವಹಿಸಲು ಹಲವಾರು ನಾಯಕರು ಹೆಣಗಾಡಿದ್ದಾರೆ. ಕೋವಿಡ್‌ ಅನ್ನು ನಿಗ್ರಹಿಸುವುದು ಬಹು ಕಷ್ಟದ ಕೆಲಸ. ಆದರೂ ಕೆಲವು ನಾಯಕರು ರೋಗ ತೀವ್ರತೆಯನ್ನು ಕಡಿಮೆ ಮಾಡಲು ಯತ್ನಿಸಿದ್ದಾರೆ. ಅದೇ ವೇಳೆಯಲ್ಲಿ ಕೆಲವು ನಾಯಕರು ಅತ್ಯಂತ ಕಳಪೆ ನಿರ್ವಹಣೆಯಿಂದ ಕೋವಿಡ್ ಮತ್ತಷ್ಟು ಉಲ್ಬಣಿಸಲು, ಅಪಾರ ಸಾವು ನೋವುಗಳುಂಟಾಗಲು ಕಾರಣರಾಗಿದ್ದಾರೆ.

ವೈಜ್ಞಾನಿಕ ಮಾಹಿತಿಗಳನ್ನು, ತಜ್ಞರ ವರದಿಗಳನ್ನು ಕಡೆಗಣಿಸುವ ಮೂಲಕ, ಮೂಡನಂಬಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ, ಮಾಸ್ಕ್, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರುವ ಮೂಲಕ, ಸಮರ್ಪಕ ವೈದ್ಯಕೀಯ ವ್ಯವಸ್ಥೆ ಮಾಡದಿರುವುದರ ಮೂಲಕ ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗೆ ಇವರು ಕಾರಣರಾಗಿದ್ದಾರೆ. ಅಮೆರಿಕ ಮೂಲಕ The Conversation ಎಂಬ ಎನ್‌ಜಿಓ ಒಂದು ‘ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು’ ಎಂದು ಐದು ದೇಶದ ಪ್ರಧಾನಿ/ಅಧ್ಯಕ್ಷರ ಪಟ್ಟಿ ಮಾಡಿದೆ. ಅವರಲ್ಲಿ ಅತಿ ಕೆಟ್ಟ ಕೋವಿಡ್ ನಿರ್ವಹಣೆ ಮಾಡಿದವರು ಯಾರು ಎಂಬ ಟ್ವಿಟರ್ ಪೋಲ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶೇ.90 ರಷ್ಟು ಮತಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನ ಪಡೆದಿದ್ದಾರೆ.

ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು ಎಂದು ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ, ಭಾರತದ ಪ್ರಧಾನ ನರೇಂದ್ರ ಮೋದಿ, ಮೆಕ್ಸಿಕೋದ ಆಮ್ಲೊ, ಅಮೆರಿಕದ ಡೋನಾಲ್ಡ್ ಟ್ರಂಪ್ ಮತ್ತು ಬೆಲಾರಸ್‌ನ ಲುಕಾಶೆಂಕೊರವರನ್ನು ಗುರುತಿಸಿದೆ. ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ 5% ಮತಗಳೊಂದಿಗೆ ಎರಡನೇ ಸ್ಥಾನ ಪಡೆದರೆ, 3.7% ಮತಗಳೊಂದಿಗೆ ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ ತೃತೀಯ ಸ್ಥಾನದಲ್ಲಿದ್ದಾರೆ. ಮೆಕ್ಸಿಕೋದ ಆಮ್ಲೊ 1.3% ಮತಗಳನ್ನು ಪಡೆದರು. ಟ್ವಿಟರ್ ಪೋಲ್‌ಗೆ ಕೇವಲ ನಾಲ್ಕು ಆಯ್ಕೆಗಳು ಇದ್ದ ಕಾರಣ ಬೆಲಾರಸ್‌ನ ಲುಕಾಶೆಂಕೊರವರಿಗೆ ಮತ ಹಾಕಬೇಕಾದರೆ ಕಮೆಂಟ್ ಮಾಡಲು ಸೂಚಿಸಲಾಗಿತ್ತು. ಆದರೆ ಕಮೆಂಟ್ ಸೆಕ್ಷನ್‌ನಲ್ಲಿ ನರೇಂದ್ರ ಮೋದಿ ಹೆಸರುಗಳೆ ತುಂಬಿಹೋಗಿವೆ.

ಭಾರತದ ಇಂದಿನ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸಿದ್ದು ಅವರು, ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ತಜ್ಞರು ಎರಡನೇ ಅಲೆಯ ಬಗ್ಗೆ ಸಾಕಷ್ಟು ಹೆಚ್ಚರಿಸಿದ್ದರೂ ಸಹ ನರೇಂದ್ರ ಮೋದಿಯವರು 2021ರ ಜನವರಿಯಲ್ಲಿ “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸುವ ಮೂಲಕ ಮಾನವೀಯತೆಯನ್ನು ಉಳಿಸಿದೆ, ವಿಶ್ವಕ್ಕೆ ಮಾದರಿಯಾಗಿದೆ” ಎಂದು ಜಾಗತಿಕ ವೇದಿಕೆಯಲ್ಲಿ ಘೋಷಿಸಿದರು. ಮಾರ್ಚ್ ನಲ್ಲಿ “ನಾವು ಕೋವಿಡ್‌ ಅಂತ್ಯಕಾಲದಲ್ಲಿದ್ದೇವೆ” ಎಂದು ಭಾರತದ ಆರೋಗ್ಯ ಸಚಿವ ಹರ್ಷವರ್ಧನ್ ಘೋಷಿಸಿದರು. ಅಂದರೆ ಕೊರೊನಾ ಬಲಪಡೆಯುತ್ತಿರುವ ಸಮಯದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕಿದ್ದ ಭಾರತ ತೀವ್ರ ನಿರ್ಲಕ್ಷ್ಯ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಏಪ್ರಿಲ್‌ನಲ್ಲಿ ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳಲ್ಲಿ ಮೋದಿ ಮತ್ತು ಇತರ ರಾಜಕೀಯ ನಾಯಕರು ಪಾಲ್ಗೊಂಡರು. ಆರೋಗ್ಯ ತಜ್ಞರ ಎಚ್ಚರಿಕೆಯ ಹೊರತಾಗಿಯೂ ಲಕ್ಷಾಂತರ ಜನರು ಸೇರುವ ಕುಂಭಮೇಳಕ್ಕೆ ಅವಕಾಶ ನೀಡಲಾಯಿತು. ಇದು ಕೋವಿಡ್ ಎರಡನೇ ಅಲೆಯ ತೀವ್ರವಾಗಿ ಹರಡಿ ಹಾನಿಮಾಡಲು ಕಾರಣವಾಯಿತು ಎಂದು ವರದಿ ತಿಳಿಸಿದೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಇದೇ ಸಮಯದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಆರೋಪಿಸಿದ್ದರು.

ಲಸಿಕೆ ವಿಚಾರದಲ್ಲಿಯೂ ಮೋದಿ ಸಂಪೂರ್ಣವಾಗಿ ಎಡವಿದರು. ಭಾರತದಲ್ಲಿ ಲಸಿಕೆ ಕೊರತೆಯಿದ್ದರೂ ವಿದೇಶಗಳಿಗೆ ರಫ್ತು ಮಾಡಲಾಯಿತು. ಈಗ ಭಾರತದಲ್ಲಿ ಲಸಿಕೆಗೆ ಹಾಹಾಕಾರವೆದ್ದಿದೆ ಎಂದು ವರದಿ ಟೀಕಿಸಿದೆ.


ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...