Homeಕರೋನಾ ತಲ್ಲಣಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ. ಕೋಟ್ಯಾಂತರ ಜನರಿಗೆ ಹರಡಿದ ಈ ಸೋಂಕು ಲಕ್ಷಾಂತರ ಜನರ ಪ್ರಾಣ ತೆಗೆದುಕೊಂಡಿದೆ. ಈ ಒಂದೂವರೆ ವರ್ಷದಲ್ಲಿ ಈ ಸಾಂಕ್ರಾಮಿಕ ಪಿಡುಗನ್ನು ನಿರ್ವಹಿಸಲು ಹಲವಾರು ನಾಯಕರು ಹೆಣಗಾಡಿದ್ದಾರೆ. ಕೋವಿಡ್‌ ಅನ್ನು ನಿಗ್ರಹಿಸುವುದು ಬಹು ಕಷ್ಟದ ಕೆಲಸ. ಆದರೂ ಕೆಲವು ನಾಯಕರು ರೋಗ ತೀವ್ರತೆಯನ್ನು ಕಡಿಮೆ ಮಾಡಲು ಯತ್ನಿಸಿದ್ದಾರೆ. ಅದೇ ವೇಳೆಯಲ್ಲಿ ಕೆಲವು ನಾಯಕರು ಅತ್ಯಂತ ಕಳಪೆ ನಿರ್ವಹಣೆಯಿಂದ ಕೋವಿಡ್ ಮತ್ತಷ್ಟು ಉಲ್ಬಣಿಸಲು, ಅಪಾರ ಸಾವು ನೋವುಗಳುಂಟಾಗಲು ಕಾರಣರಾಗಿದ್ದಾರೆ.

ವೈಜ್ಞಾನಿಕ ಮಾಹಿತಿಗಳನ್ನು, ತಜ್ಞರ ವರದಿಗಳನ್ನು ಕಡೆಗಣಿಸುವ ಮೂಲಕ, ಮೂಡನಂಬಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ, ಮಾಸ್ಕ್, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರುವ ಮೂಲಕ, ಸಮರ್ಪಕ ವೈದ್ಯಕೀಯ ವ್ಯವಸ್ಥೆ ಮಾಡದಿರುವುದರ ಮೂಲಕ ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗೆ ಇವರು ಕಾರಣರಾಗಿದ್ದಾರೆ. ಅಮೆರಿಕ ಮೂಲಕ The Conversation ಎಂಬ ಎನ್‌ಜಿಓ ಒಂದು ‘ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು’ ಎಂದು ಐದು ದೇಶದ ಪ್ರಧಾನಿ/ಅಧ್ಯಕ್ಷರ ಪಟ್ಟಿ ಮಾಡಿದೆ. ಅವರಲ್ಲಿ ಅತಿ ಕೆಟ್ಟ ಕೋವಿಡ್ ನಿರ್ವಹಣೆ ಮಾಡಿದವರು ಯಾರು ಎಂಬ ಟ್ವಿಟರ್ ಪೋಲ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶೇ.90 ರಷ್ಟು ಮತಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನ ಪಡೆದಿದ್ದಾರೆ.

ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು ಎಂದು ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ, ಭಾರತದ ಪ್ರಧಾನ ನರೇಂದ್ರ ಮೋದಿ, ಮೆಕ್ಸಿಕೋದ ಆಮ್ಲೊ, ಅಮೆರಿಕದ ಡೋನಾಲ್ಡ್ ಟ್ರಂಪ್ ಮತ್ತು ಬೆಲಾರಸ್‌ನ ಲುಕಾಶೆಂಕೊರವರನ್ನು ಗುರುತಿಸಿದೆ. ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ 5% ಮತಗಳೊಂದಿಗೆ ಎರಡನೇ ಸ್ಥಾನ ಪಡೆದರೆ, 3.7% ಮತಗಳೊಂದಿಗೆ ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ ತೃತೀಯ ಸ್ಥಾನದಲ್ಲಿದ್ದಾರೆ. ಮೆಕ್ಸಿಕೋದ ಆಮ್ಲೊ 1.3% ಮತಗಳನ್ನು ಪಡೆದರು. ಟ್ವಿಟರ್ ಪೋಲ್‌ಗೆ ಕೇವಲ ನಾಲ್ಕು ಆಯ್ಕೆಗಳು ಇದ್ದ ಕಾರಣ ಬೆಲಾರಸ್‌ನ ಲುಕಾಶೆಂಕೊರವರಿಗೆ ಮತ ಹಾಕಬೇಕಾದರೆ ಕಮೆಂಟ್ ಮಾಡಲು ಸೂಚಿಸಲಾಗಿತ್ತು. ಆದರೆ ಕಮೆಂಟ್ ಸೆಕ್ಷನ್‌ನಲ್ಲಿ ನರೇಂದ್ರ ಮೋದಿ ಹೆಸರುಗಳೆ ತುಂಬಿಹೋಗಿವೆ.

ಭಾರತದ ಇಂದಿನ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸಿದ್ದು ಅವರು, ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ತಜ್ಞರು ಎರಡನೇ ಅಲೆಯ ಬಗ್ಗೆ ಸಾಕಷ್ಟು ಹೆಚ್ಚರಿಸಿದ್ದರೂ ಸಹ ನರೇಂದ್ರ ಮೋದಿಯವರು 2021ರ ಜನವರಿಯಲ್ಲಿ “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸುವ ಮೂಲಕ ಮಾನವೀಯತೆಯನ್ನು ಉಳಿಸಿದೆ, ವಿಶ್ವಕ್ಕೆ ಮಾದರಿಯಾಗಿದೆ” ಎಂದು ಜಾಗತಿಕ ವೇದಿಕೆಯಲ್ಲಿ ಘೋಷಿಸಿದರು. ಮಾರ್ಚ್ ನಲ್ಲಿ “ನಾವು ಕೋವಿಡ್‌ ಅಂತ್ಯಕಾಲದಲ್ಲಿದ್ದೇವೆ” ಎಂದು ಭಾರತದ ಆರೋಗ್ಯ ಸಚಿವ ಹರ್ಷವರ್ಧನ್ ಘೋಷಿಸಿದರು. ಅಂದರೆ ಕೊರೊನಾ ಬಲಪಡೆಯುತ್ತಿರುವ ಸಮಯದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕಿದ್ದ ಭಾರತ ತೀವ್ರ ನಿರ್ಲಕ್ಷ್ಯ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಏಪ್ರಿಲ್‌ನಲ್ಲಿ ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳಲ್ಲಿ ಮೋದಿ ಮತ್ತು ಇತರ ರಾಜಕೀಯ ನಾಯಕರು ಪಾಲ್ಗೊಂಡರು. ಆರೋಗ್ಯ ತಜ್ಞರ ಎಚ್ಚರಿಕೆಯ ಹೊರತಾಗಿಯೂ ಲಕ್ಷಾಂತರ ಜನರು ಸೇರುವ ಕುಂಭಮೇಳಕ್ಕೆ ಅವಕಾಶ ನೀಡಲಾಯಿತು. ಇದು ಕೋವಿಡ್ ಎರಡನೇ ಅಲೆಯ ತೀವ್ರವಾಗಿ ಹರಡಿ ಹಾನಿಮಾಡಲು ಕಾರಣವಾಯಿತು ಎಂದು ವರದಿ ತಿಳಿಸಿದೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಇದೇ ಸಮಯದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಆರೋಪಿಸಿದ್ದರು.

ಲಸಿಕೆ ವಿಚಾರದಲ್ಲಿಯೂ ಮೋದಿ ಸಂಪೂರ್ಣವಾಗಿ ಎಡವಿದರು. ಭಾರತದಲ್ಲಿ ಲಸಿಕೆ ಕೊರತೆಯಿದ್ದರೂ ವಿದೇಶಗಳಿಗೆ ರಫ್ತು ಮಾಡಲಾಯಿತು. ಈಗ ಭಾರತದಲ್ಲಿ ಲಸಿಕೆಗೆ ಹಾಹಾಕಾರವೆದ್ದಿದೆ ಎಂದು ವರದಿ ಟೀಕಿಸಿದೆ.


ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

‘ಸಕ್ಕರೆ ಮಟ್ಟ ಹೆಚ್ಚಿಸಿಕೊಳ್ಳಲು ಮಾವಿನಹಣ್ಣು, ಸಿಹಿತಿಂಡಿ ಸೇವಿಸುತ್ತಿರುವ ಕೇಜ್ರಿವಾಲ್..; ಇಡಿ ಆರೋಪ

0
ಮಧುಮೇಹಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವೈದ್ಯಕೀಯ ಜಾಮೀನು ಪಡೆಯಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಪ್ರತಿದಿನ ಮಾವಿನಹಣ್ಣು, ಆಲೂ ಪುರಿ ಮತ್ತು ಸಿಹಿತಿಂಡಿಗಳನ್ನು ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಗುರುವಾರ...