Homeಕರೋನಾ ತಲ್ಲಣಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ. ಕೋಟ್ಯಾಂತರ ಜನರಿಗೆ ಹರಡಿದ ಈ ಸೋಂಕು ಲಕ್ಷಾಂತರ ಜನರ ಪ್ರಾಣ ತೆಗೆದುಕೊಂಡಿದೆ. ಈ ಒಂದೂವರೆ ವರ್ಷದಲ್ಲಿ ಈ ಸಾಂಕ್ರಾಮಿಕ ಪಿಡುಗನ್ನು ನಿರ್ವಹಿಸಲು ಹಲವಾರು ನಾಯಕರು ಹೆಣಗಾಡಿದ್ದಾರೆ. ಕೋವಿಡ್‌ ಅನ್ನು ನಿಗ್ರಹಿಸುವುದು ಬಹು ಕಷ್ಟದ ಕೆಲಸ. ಆದರೂ ಕೆಲವು ನಾಯಕರು ರೋಗ ತೀವ್ರತೆಯನ್ನು ಕಡಿಮೆ ಮಾಡಲು ಯತ್ನಿಸಿದ್ದಾರೆ. ಅದೇ ವೇಳೆಯಲ್ಲಿ ಕೆಲವು ನಾಯಕರು ಅತ್ಯಂತ ಕಳಪೆ ನಿರ್ವಹಣೆಯಿಂದ ಕೋವಿಡ್ ಮತ್ತಷ್ಟು ಉಲ್ಬಣಿಸಲು, ಅಪಾರ ಸಾವು ನೋವುಗಳುಂಟಾಗಲು ಕಾರಣರಾಗಿದ್ದಾರೆ.

ವೈಜ್ಞಾನಿಕ ಮಾಹಿತಿಗಳನ್ನು, ತಜ್ಞರ ವರದಿಗಳನ್ನು ಕಡೆಗಣಿಸುವ ಮೂಲಕ, ಮೂಡನಂಬಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ, ಮಾಸ್ಕ್, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರುವ ಮೂಲಕ, ಸಮರ್ಪಕ ವೈದ್ಯಕೀಯ ವ್ಯವಸ್ಥೆ ಮಾಡದಿರುವುದರ ಮೂಲಕ ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗೆ ಇವರು ಕಾರಣರಾಗಿದ್ದಾರೆ. ಅಮೆರಿಕ ಮೂಲಕ The Conversation ಎಂಬ ಎನ್‌ಜಿಓ ಒಂದು ‘ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು’ ಎಂದು ಐದು ದೇಶದ ಪ್ರಧಾನಿ/ಅಧ್ಯಕ್ಷರ ಪಟ್ಟಿ ಮಾಡಿದೆ. ಅವರಲ್ಲಿ ಅತಿ ಕೆಟ್ಟ ಕೋವಿಡ್ ನಿರ್ವಹಣೆ ಮಾಡಿದವರು ಯಾರು ಎಂಬ ಟ್ವಿಟರ್ ಪೋಲ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶೇ.90 ರಷ್ಟು ಮತಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನ ಪಡೆದಿದ್ದಾರೆ.

ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು ಎಂದು ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ, ಭಾರತದ ಪ್ರಧಾನ ನರೇಂದ್ರ ಮೋದಿ, ಮೆಕ್ಸಿಕೋದ ಆಮ್ಲೊ, ಅಮೆರಿಕದ ಡೋನಾಲ್ಡ್ ಟ್ರಂಪ್ ಮತ್ತು ಬೆಲಾರಸ್‌ನ ಲುಕಾಶೆಂಕೊರವರನ್ನು ಗುರುತಿಸಿದೆ. ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ 5% ಮತಗಳೊಂದಿಗೆ ಎರಡನೇ ಸ್ಥಾನ ಪಡೆದರೆ, 3.7% ಮತಗಳೊಂದಿಗೆ ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ ತೃತೀಯ ಸ್ಥಾನದಲ್ಲಿದ್ದಾರೆ. ಮೆಕ್ಸಿಕೋದ ಆಮ್ಲೊ 1.3% ಮತಗಳನ್ನು ಪಡೆದರು. ಟ್ವಿಟರ್ ಪೋಲ್‌ಗೆ ಕೇವಲ ನಾಲ್ಕು ಆಯ್ಕೆಗಳು ಇದ್ದ ಕಾರಣ ಬೆಲಾರಸ್‌ನ ಲುಕಾಶೆಂಕೊರವರಿಗೆ ಮತ ಹಾಕಬೇಕಾದರೆ ಕಮೆಂಟ್ ಮಾಡಲು ಸೂಚಿಸಲಾಗಿತ್ತು. ಆದರೆ ಕಮೆಂಟ್ ಸೆಕ್ಷನ್‌ನಲ್ಲಿ ನರೇಂದ್ರ ಮೋದಿ ಹೆಸರುಗಳೆ ತುಂಬಿಹೋಗಿವೆ.

ಭಾರತದ ಇಂದಿನ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸಿದ್ದು ಅವರು, ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ತಜ್ಞರು ಎರಡನೇ ಅಲೆಯ ಬಗ್ಗೆ ಸಾಕಷ್ಟು ಹೆಚ್ಚರಿಸಿದ್ದರೂ ಸಹ ನರೇಂದ್ರ ಮೋದಿಯವರು 2021ರ ಜನವರಿಯಲ್ಲಿ “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸುವ ಮೂಲಕ ಮಾನವೀಯತೆಯನ್ನು ಉಳಿಸಿದೆ, ವಿಶ್ವಕ್ಕೆ ಮಾದರಿಯಾಗಿದೆ” ಎಂದು ಜಾಗತಿಕ ವೇದಿಕೆಯಲ್ಲಿ ಘೋಷಿಸಿದರು. ಮಾರ್ಚ್ ನಲ್ಲಿ “ನಾವು ಕೋವಿಡ್‌ ಅಂತ್ಯಕಾಲದಲ್ಲಿದ್ದೇವೆ” ಎಂದು ಭಾರತದ ಆರೋಗ್ಯ ಸಚಿವ ಹರ್ಷವರ್ಧನ್ ಘೋಷಿಸಿದರು. ಅಂದರೆ ಕೊರೊನಾ ಬಲಪಡೆಯುತ್ತಿರುವ ಸಮಯದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕಿದ್ದ ಭಾರತ ತೀವ್ರ ನಿರ್ಲಕ್ಷ್ಯ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಏಪ್ರಿಲ್‌ನಲ್ಲಿ ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳಲ್ಲಿ ಮೋದಿ ಮತ್ತು ಇತರ ರಾಜಕೀಯ ನಾಯಕರು ಪಾಲ್ಗೊಂಡರು. ಆರೋಗ್ಯ ತಜ್ಞರ ಎಚ್ಚರಿಕೆಯ ಹೊರತಾಗಿಯೂ ಲಕ್ಷಾಂತರ ಜನರು ಸೇರುವ ಕುಂಭಮೇಳಕ್ಕೆ ಅವಕಾಶ ನೀಡಲಾಯಿತು. ಇದು ಕೋವಿಡ್ ಎರಡನೇ ಅಲೆಯ ತೀವ್ರವಾಗಿ ಹರಡಿ ಹಾನಿಮಾಡಲು ಕಾರಣವಾಯಿತು ಎಂದು ವರದಿ ತಿಳಿಸಿದೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಇದೇ ಸಮಯದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಆರೋಪಿಸಿದ್ದರು.

ಲಸಿಕೆ ವಿಚಾರದಲ್ಲಿಯೂ ಮೋದಿ ಸಂಪೂರ್ಣವಾಗಿ ಎಡವಿದರು. ಭಾರತದಲ್ಲಿ ಲಸಿಕೆ ಕೊರತೆಯಿದ್ದರೂ ವಿದೇಶಗಳಿಗೆ ರಫ್ತು ಮಾಡಲಾಯಿತು. ಈಗ ಭಾರತದಲ್ಲಿ ಲಸಿಕೆಗೆ ಹಾಹಾಕಾರವೆದ್ದಿದೆ ಎಂದು ವರದಿ ಟೀಕಿಸಿದೆ.


ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...