Homeಅಂತರಾಷ್ಟ್ರೀಯಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

- Advertisement -
- Advertisement -

ಇತ್ತೀಚೆಗಿನ ವರ್ಷದಲ್ಲಿ ಅಮೆರಿಕಾ ಸೇರಿದಂತೆ ಇತರ ದೇಶಗಳಲ್ಲಿ ಎಲ್ಜಿಬಿಟಿಕ್ಯು ಸಮುದಾಯಕ್ಕೆ ಬಂಬಲ ಹೆಚ್ಚಾಗುತ್ತಿದೆ ಎಂದು ಪ್ಯೂ ರಿಸರ್ಚ್ ಸೆಂಟರ್ ಬಿಡುಗಡೆ ಮಾಡಿದ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಮೀಕ್ಷೆಯೂ 2019 ರಲ್ಲಿ 34 ದೇಶಗಳಲ್ಲಿ 38,000 ಕ್ಕೂ ಹೆಚ್ಚು ಜನರನ್ನು ಸಲಿಂಗಕಾಮವನ್ನು ಸಮಾಜವು ಒಪ್ಪಿಕೊಳ್ಳಬೇಕು ಎಂದು ಭಾವಿಸಿದ್ದೀರಾ ಎಂದು ಕೇಳಿದೆ. ಅಮೆರಿಕಾದಲ್ಲಿ ಸಲಿಂಗಕಾಮವನ್ನು ಬೆಂಬಲಿಸುವ ಶೇಕಡಾವಾರು ಪ್ರಮಾಣವು 2019 ರಲ್ಲಿ 72% ಕ್ಕೆ ಏರಿದ್ದು, ಇದು 2013 ರಲ್ಲಿ ನಡೆದ ಸಮೀಕ್ಷೆಯಲ್ಲಿ ಅದು 60% ರಷ್ಟಿತ್ತು.

ಭಾರತ ಮತ್ತು ಟರ್ಕಿಯಲ್ಲಿ ಈ ದರಗಳು ಕ್ರಮವಾಗಿ 20 ಮತ್ತು 16 ಕ್ಕಿಂತಲೂ ಹೆಚ್ಚಾಗಿವೆ. ಆದರೆ ಇತರ ದೇಶಗಳಿಗೆ ಹೋಲಿಸಿದರೆ ಈ ಬೆಂಬಲ ಕಡಿಮೆಯಾಗಿಯೇ ಇದೆ. ಇದು ಕ್ರಮವಾಗಿ 37% ಮತ್ತು  25 % ರಷ್ಟು ಇದೆ. 2018 ರಲ್ಲಿ ಭಾರತದ ಹೈಕೋರ್ಟ್ ಸಲಿಂಗಕಾಮವನ್ನು ಕಾನೂನು ಬದ್ದಗೊಳಿಸಿತ್ತು.

ಮಧ್ಯಪ್ರಾಚ್ಯ, ಪೂರ್ವ ಯುರೋಪ್ ಮತ್ತು ಆಗ್ನೇಯ ಏಷ್ಯಾದ ಕೆಲವು ದೇಶಗಳಿಗಿಂತ ಅಮೆರಿಕ ಮತ್ತು ಪಶ್ಚಿಮ ಯುರೋಪಿನ ದೇಶಗಳು ಸಲಿಂಗಕಾಮವನ್ನು ಹೆಚ್ಚು ಒಪ್ಪಿಕೊಳ್ಳುತ್ತಿವೆ ಎಂದು “ಸಲಿಂಗಕಾಮ ನಿರಂತರತೆಯ ಜಾಗತಿಕ ವಿಭಜನೆ” ಎಂಬ ಶೀರ್ಷಿಕೆಯ ಈ ವರದಿ ಹೇಳುತ್ತದೆ.

ಉದಾಹರಣೆಗೆ, ಲೆಬನಾನ್‌ನಲ್ಲಿ 85% ರಷ್ಟು ಜನರು ಸಲಿಂಗಕಾಮವನ್ನು ಒಪ್ಪಿಕೊಳ್ಳಬಾರದು ಎಂದು ಹೇಳಿದರೆ, ಟುನೀಶಿಯಾದಲ್ಲಿ 72% ಜನರು ಇದನ್ನು ಹೇಳಿದ್ದಾರೆ. ಮಧ್ಯ ಮತ್ತು ಪೂರ್ವ ಯುರೋಪಿನಲ್ಲಿ ಸಲಿಂಗಕಾಮವನ್ನು ಸ್ವೀಕರಿಸುವ ಸರಾಸರಿ ದರ 46% ಆಗಿತ್ತು.

“ಆರ್ಥಿಕ ಅಭಿವೃದ್ಧಿಯ ಸೂಚಕವಾಗಿರಬಹುದಾದ ಪ್ರದೇಶಗಳಲ್ಲಿನ ವ್ಯತ್ಯಾಸಗಳು ನಿಜವಾಗಿಯೂ ಆಸಕ್ತಿದಾಯಕ ಆವಿಷ್ಕಾರಗಳಾಗಿವೆ, ಒಟ್ಟಾರೆ ಸ್ವೀಕಾರದ ಮಟ್ಟದಲ್ಲಿ ಬದಲಾವಣೆಗಳಾಗಿದ್ದರೂ ಸಹ, ಸ್ಥಿರವಾಗಿ ಉಳಿದಿವೆ” ಎಂದು ವರದಿಯ ಲೇಖಕ ಹಾಗೂ ಪ್ಯೂ ರಿಸರ್ಚ್ ಸೆಂಟರ್ನ ಜಾಗತಿಕ ವರ್ತನೆಗಳ ಸಂಶೋಧನೆಯ ಸಹಾಯಕ ನಿರ್ದೇಶಕರಾದ ಜಾಕೋಬ್ ಪೌಶ್ಟರ್ ಹೇಳಿದ್ದಾರೆ.

ಸಲಿಂಗಕಾಮದ ಬಗೆಗಿನ ವರ್ತನೆಗಳು ದೇಶದ ಸಂಪತ್ತಿನೊಂದಿಗೆ ಸಂಬಂಧ ಹೊಂದಿವೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಬಡ, ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಲ್ಲಿನ ಜನರಿಗಿಂತ ಶ್ರೀಮಂತ ದೇಶಗಳಲ್ಲಿನ ಜನರು ಸಾಮಾನ್ಯವಾಗಿ ಸಲಿಂಗಕಾಮವನ್ನು ಹೆಚ್ಚು ಒಪ್ಪಿಕೊಳ್ಳುತ್ತಿದ್ದಾರೆ.

ರಾಜಕೀಯ ಸಿದ್ಧಾಂತ ಮತ್ತು ಶಿಕ್ಷಣವು ಸಲಿಂಗಕಾಮವನ್ನು ಅಂಗೀಕರಿಸುವುದರೊಂದಿಗೆ ಪರಸ್ಪರ ಸಂಬಂಧ ಹೊಂದಿದೆ, ಎಡ-ಒಲವು ಮತ್ತು ಹೆಚ್ಚು ವಿದ್ಯಾವಂತ ಜನರು ಸಾಮಾಜಿಕ ಸ್ವೀಕಾರಕ್ಕೆ ಹೆಚ್ಚು ಬೆಂಬಲ ನೀಡುತ್ತಾರೆ.

ಕೇವಲ 29 ದೇಶಗಳಲ್ಲಿ ಸಲಿಂಗ ಮದುವೆ ಕಾನೂನುಬದ್ಧವಾಗಿದೆ ಎಂದು ಮಾನವ ಹಕ್ಕುಗಳ ಅಭಿಯಾನ ಉಲ್ಲೇಖಿಸಿದೆ.


ಓದಿ: ದೆಹಲಿಯಿಂದ ಮಂಗಳೂರಿನವರೆಗೆ CAA-NRC ವಿರೋಧಿಗಳನ್ನು ಹಣಿಯಲು ಹಿಂಬಾಗಿಲ ಸಂಚು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...