Homeಅಂತರಾಷ್ಟ್ರೀಯಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

- Advertisement -
- Advertisement -

ಇತ್ತೀಚೆಗಿನ ವರ್ಷದಲ್ಲಿ ಅಮೆರಿಕಾ ಸೇರಿದಂತೆ ಇತರ ದೇಶಗಳಲ್ಲಿ ಎಲ್ಜಿಬಿಟಿಕ್ಯು ಸಮುದಾಯಕ್ಕೆ ಬಂಬಲ ಹೆಚ್ಚಾಗುತ್ತಿದೆ ಎಂದು ಪ್ಯೂ ರಿಸರ್ಚ್ ಸೆಂಟರ್ ಬಿಡುಗಡೆ ಮಾಡಿದ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಮೀಕ್ಷೆಯೂ 2019 ರಲ್ಲಿ 34 ದೇಶಗಳಲ್ಲಿ 38,000 ಕ್ಕೂ ಹೆಚ್ಚು ಜನರನ್ನು ಸಲಿಂಗಕಾಮವನ್ನು ಸಮಾಜವು ಒಪ್ಪಿಕೊಳ್ಳಬೇಕು ಎಂದು ಭಾವಿಸಿದ್ದೀರಾ ಎಂದು ಕೇಳಿದೆ. ಅಮೆರಿಕಾದಲ್ಲಿ ಸಲಿಂಗಕಾಮವನ್ನು ಬೆಂಬಲಿಸುವ ಶೇಕಡಾವಾರು ಪ್ರಮಾಣವು 2019 ರಲ್ಲಿ 72% ಕ್ಕೆ ಏರಿದ್ದು, ಇದು 2013 ರಲ್ಲಿ ನಡೆದ ಸಮೀಕ್ಷೆಯಲ್ಲಿ ಅದು 60% ರಷ್ಟಿತ್ತು.

ಭಾರತ ಮತ್ತು ಟರ್ಕಿಯಲ್ಲಿ ಈ ದರಗಳು ಕ್ರಮವಾಗಿ 20 ಮತ್ತು 16 ಕ್ಕಿಂತಲೂ ಹೆಚ್ಚಾಗಿವೆ. ಆದರೆ ಇತರ ದೇಶಗಳಿಗೆ ಹೋಲಿಸಿದರೆ ಈ ಬೆಂಬಲ ಕಡಿಮೆಯಾಗಿಯೇ ಇದೆ. ಇದು ಕ್ರಮವಾಗಿ 37% ಮತ್ತು  25 % ರಷ್ಟು ಇದೆ. 2018 ರಲ್ಲಿ ಭಾರತದ ಹೈಕೋರ್ಟ್ ಸಲಿಂಗಕಾಮವನ್ನು ಕಾನೂನು ಬದ್ದಗೊಳಿಸಿತ್ತು.

ಮಧ್ಯಪ್ರಾಚ್ಯ, ಪೂರ್ವ ಯುರೋಪ್ ಮತ್ತು ಆಗ್ನೇಯ ಏಷ್ಯಾದ ಕೆಲವು ದೇಶಗಳಿಗಿಂತ ಅಮೆರಿಕ ಮತ್ತು ಪಶ್ಚಿಮ ಯುರೋಪಿನ ದೇಶಗಳು ಸಲಿಂಗಕಾಮವನ್ನು ಹೆಚ್ಚು ಒಪ್ಪಿಕೊಳ್ಳುತ್ತಿವೆ ಎಂದು “ಸಲಿಂಗಕಾಮ ನಿರಂತರತೆಯ ಜಾಗತಿಕ ವಿಭಜನೆ” ಎಂಬ ಶೀರ್ಷಿಕೆಯ ಈ ವರದಿ ಹೇಳುತ್ತದೆ.

ಉದಾಹರಣೆಗೆ, ಲೆಬನಾನ್‌ನಲ್ಲಿ 85% ರಷ್ಟು ಜನರು ಸಲಿಂಗಕಾಮವನ್ನು ಒಪ್ಪಿಕೊಳ್ಳಬಾರದು ಎಂದು ಹೇಳಿದರೆ, ಟುನೀಶಿಯಾದಲ್ಲಿ 72% ಜನರು ಇದನ್ನು ಹೇಳಿದ್ದಾರೆ. ಮಧ್ಯ ಮತ್ತು ಪೂರ್ವ ಯುರೋಪಿನಲ್ಲಿ ಸಲಿಂಗಕಾಮವನ್ನು ಸ್ವೀಕರಿಸುವ ಸರಾಸರಿ ದರ 46% ಆಗಿತ್ತು.

“ಆರ್ಥಿಕ ಅಭಿವೃದ್ಧಿಯ ಸೂಚಕವಾಗಿರಬಹುದಾದ ಪ್ರದೇಶಗಳಲ್ಲಿನ ವ್ಯತ್ಯಾಸಗಳು ನಿಜವಾಗಿಯೂ ಆಸಕ್ತಿದಾಯಕ ಆವಿಷ್ಕಾರಗಳಾಗಿವೆ, ಒಟ್ಟಾರೆ ಸ್ವೀಕಾರದ ಮಟ್ಟದಲ್ಲಿ ಬದಲಾವಣೆಗಳಾಗಿದ್ದರೂ ಸಹ, ಸ್ಥಿರವಾಗಿ ಉಳಿದಿವೆ” ಎಂದು ವರದಿಯ ಲೇಖಕ ಹಾಗೂ ಪ್ಯೂ ರಿಸರ್ಚ್ ಸೆಂಟರ್ನ ಜಾಗತಿಕ ವರ್ತನೆಗಳ ಸಂಶೋಧನೆಯ ಸಹಾಯಕ ನಿರ್ದೇಶಕರಾದ ಜಾಕೋಬ್ ಪೌಶ್ಟರ್ ಹೇಳಿದ್ದಾರೆ.

ಸಲಿಂಗಕಾಮದ ಬಗೆಗಿನ ವರ್ತನೆಗಳು ದೇಶದ ಸಂಪತ್ತಿನೊಂದಿಗೆ ಸಂಬಂಧ ಹೊಂದಿವೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಬಡ, ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಲ್ಲಿನ ಜನರಿಗಿಂತ ಶ್ರೀಮಂತ ದೇಶಗಳಲ್ಲಿನ ಜನರು ಸಾಮಾನ್ಯವಾಗಿ ಸಲಿಂಗಕಾಮವನ್ನು ಹೆಚ್ಚು ಒಪ್ಪಿಕೊಳ್ಳುತ್ತಿದ್ದಾರೆ.

ರಾಜಕೀಯ ಸಿದ್ಧಾಂತ ಮತ್ತು ಶಿಕ್ಷಣವು ಸಲಿಂಗಕಾಮವನ್ನು ಅಂಗೀಕರಿಸುವುದರೊಂದಿಗೆ ಪರಸ್ಪರ ಸಂಬಂಧ ಹೊಂದಿದೆ, ಎಡ-ಒಲವು ಮತ್ತು ಹೆಚ್ಚು ವಿದ್ಯಾವಂತ ಜನರು ಸಾಮಾಜಿಕ ಸ್ವೀಕಾರಕ್ಕೆ ಹೆಚ್ಚು ಬೆಂಬಲ ನೀಡುತ್ತಾರೆ.

ಕೇವಲ 29 ದೇಶಗಳಲ್ಲಿ ಸಲಿಂಗ ಮದುವೆ ಕಾನೂನುಬದ್ಧವಾಗಿದೆ ಎಂದು ಮಾನವ ಹಕ್ಕುಗಳ ಅಭಿಯಾನ ಉಲ್ಲೇಖಿಸಿದೆ.


ಓದಿ: ದೆಹಲಿಯಿಂದ ಮಂಗಳೂರಿನವರೆಗೆ CAA-NRC ವಿರೋಧಿಗಳನ್ನು ಹಣಿಯಲು ಹಿಂಬಾಗಿಲ ಸಂಚು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...