Homeಮುಖಪುಟವರ್ಲಿ ಹಿಟ್ ಆಂಡ್ ರನ್ ಪ್ರಕರಣ: 72 ಗಂಟೆ ಕಳೆದರೂ ಪತ್ತೆಯಾಗದ ಪ್ರಮುಖ ಆರೋಪಿ ಮಿಹಿರ್...

ವರ್ಲಿ ಹಿಟ್ ಆಂಡ್ ರನ್ ಪ್ರಕರಣ: 72 ಗಂಟೆ ಕಳೆದರೂ ಪತ್ತೆಯಾಗದ ಪ್ರಮುಖ ಆರೋಪಿ ಮಿಹಿರ್ ಶಾ

- Advertisement -
- Advertisement -

ಮುಂಬೈನ ವರ್ಲಿಯಲ್ಲಿ ಭಾನುವಾರ ಮುಂಜಾನೆ ಕುಡಿದ ಮತ್ತಿನಲ್ಲಿ ತನ್ನ ಬಿಎಂಡಬ್ಲ್ಯೂ ಕಾರನ್ನು ಚಲಾಯಿಸಿ, ದ್ವಿಚಕ್ರ ವಾಹನದ ಹಿಂಬದಿ ಸವಾರೆಯಾದ 45 ವರ್ಷದ ಮಹಿಳೆಗೆ ಸಾವಿಗೆ ಕಾರಣನಾದ ಮಿಹಿರ್ ಶಾ ಮೂರು ದಿನಗ ಕಳೆದರೂ ಪತ್ತೆಯಾಗಿಲ್ಲ.

ಪತ್ತೆಕಾರ್ಯ ತೀವ್ರಗೊಳಿಸಿರುವ ಪೊಲೀಸರು, ಆರೋಪಿಯ ಸ್ನೇಹಿತರು ಸೇರಿದಂತೆ ಇದುವರೆಗೆ ಡಜನ್‌ಗಿಂತಲೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿದ್ದಾರೆ. ಆತನ ಪತ್ತೆಗೆ ಅನೇಕ ಕಾರ್ಯಪಡೆಗಳನ್ನು ರಚಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನಾ ಬಣದ ಸದಸ್ಯ ರಾಜಕಾರಣಿ ರಾಜೇಶ್ ಶಾ ಅವರ ಮಗ, ತನ್ನ ತಾಯಿ ಮತ್ತು ಸಹೋದರಿ ಸೇರಿದಂತೆ ಇತರ ಕುಟುಂಬ ಸದಸ್ಯರೊಂದಿಗೆ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಕುಟುಂಬದ ಎಲ್ಲ ಸದಸ್ಯರು ಮತ್ತು ಹತ್ತಿರದ ಸಂಬಂಧಿಗಳ ತಿಳಿದಿರುವ ಮೊಬೈಲ್ ಫೋನ್‌ಗಳು ಸ್ವಿಚ್ ಆಫ್ ಆಗಿವೆ.

ಭಾನುವಾರ ಬಂಧಿತರಾಗಿದ್ದ ಆರೋಪಿ ತಂದೆ, ಶಿವಸೇನಾ ನಾಯಕ ರಾಜೇಶ್ ಶಾ ಅವರು ₹15,000 ಹಣ ಪಾವತಿಸಿ 24 ಗಂಟೆಗಳಲ್ಲಿ ಜಾಮೀನು ಪಡೆದರು. ಇನ್ನೂ ಜೈಲಿನಲ್ಲಿರುವ ಏಕೈಕ ಆರೋಪಿ ರಾಜಋಷಿ ಬಿಡಾವತ್ ಎಂಬಾತ ಬಾರ್‌ನಲ್ಲಿ ಸುಮಾರು ₹20,000 ಖರ್ಚು ಮಾಡಿದ ಗಂಟೆಗಳ ನಂತರ, ಆರೋಪಿಗೆ ಕಾರು ಓಡಿಸುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದನು. ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದಾಗ, ತಾನೇ ಕಾರು ಚಲಾಯಿಸುತ್ತಿದ್ದಂತೆ ಸುಳ್ಳು ಹೇಳಿದ್ದ.

ಪೊಲೀಸರ ಪ್ರಕಾರ, ಭಾನುವಾರ ಮಿಹಿರ್ ಶಾ ಜುಹುದಲ್ಲಿರುವ ವೈಸ್ – ಗ್ಲೋಬಲ್ ತಪಸ್ ಬಾರ್‌ನಲ್ಲಿ ಪಾರ್ಟಿಗಾಗಿ ಮನೆಯಿಂದ ಹೊರಟರು. ಆ ಸಮಯದಲ್ಲಿ ಅವನು ತನ್ನ ತಂದೆ ಹೆಸರಿಗೆ ನೋಂದಾಯಿಸಿದ ಮರ್ಸಿಡಿಸ್ ಅನ್ನು ಓಡಿಸುತ್ತಿದ್ದು, ನಾಲ್ವರು ಗೆಳೆಯರು ಜೊತೆಗಿದ್ದರು ಎನ್ನಲಾಗಿದೆ.

ಐವರು ಬಾರ್‌ನಲ್ಲಿ ರಾತ್ರಿ 11 ಗಂಟೆಯವರೆಗೆ ಪಾರ್ಟಿ ಮಾಡಿದರು; 1.15 ಕ್ಕೆ (ಸೋಮವಾರ) ಮಿಹಿರ್ ಷಾ ತನ್ನ ಸ್ನೇಹಿತರನ್ನು ತನ್ನ ಮರ್ಸಿಡಿಸ್‌ನಲ್ಲಿ ಮನೆಗೆ ಹಿಂದಿರುಗಿಸಿದ್ದಾನೆ. ನಂತರ, ಮುಂಜಾನೆ 4 ಗಂಟೆಗೆ ಆತ ಬಿಡಾವತ್‌ನನ್ನು ತನ್ನ ಕಾರ್‌ನಲ್ಲಿ ಮರೈನ್ ಡ್ರೈವ್‌ನಲ್ಲಿ ‘ಜಾಲಿ ರೈಡ್’ಗೆ ಕರೆದೊಯ್ಯಲು ಹೇಳಿದ್ದಾನೆ. ಮುಂಜಾನೆ 5 ಗಂಟೆಗೆ, ಮರೀನ್ ಡ್ರೈವ್ ಮೇಲೆ ಮತ್ತು ಕೆಳಗೆ ಕಾರು ಓಡಿಸಿದ ನಂತರ, ಮನೆಗೆ ತಿರುಗಿಸಲಾಯಿತು. ಈ ಸಮಯದಲ್ಲಿ ಷಾ ಬಿಡಾವತ್ ಜೊತೆ ಸೀಟುಗಳನ್ನು ಬದಲಾಯಿಸಿಕೊಂಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದು ನಿಜವಾಗಿದ್ದರೆ, ಬೆಳಿಗ್ಗೆ 5.30 ಕ್ಕೆ ಬೈಕ್‌ಗೆ ಡಿಕ್ಕಿ ಹೊಡೆದಾಗ ಶಾ ಕಾರು ಚಲಾಯಿಸುತ್ತಿದ್ದ. ಸಾವನ್ನಪ್ಪಿರುವ ಮಹಿಳೆಯನ್ನು ಕಾವೇರಿ ನಖ್ವಾ (45) ಎಂದು ಗುರುತಿಸಲಾಗಿದೆ. ಆಕೆ ತನ್ನ ಪತಿ ಪ್ರದೀಪ್‌ನೊಂದಿಗೆ ಪ್ರಯಾಣಿಸುತ್ತಿದ್ದಳು ಮತ್ತು ಇಬ್ಬರು ಅಡುಗೆ ಮಾಡಲು ಮೀನುಗ ಕೊಳ್ಳಲು ಹೋಗಿದ್ದರು ಎಂದು ವರದಿಯಾಗಿದೆ.

1.5 ಕಿಲೋಮೀಟರ್ ಮಹಿಳೆಯನ್ನು ಎಳೆದೊಯ್ದ ಶಾ

ಬಿಎಂಡಬ್ಲ್ಯು ಬೈಕ್‌ಗೆ ಗುದ್ದಿಸಿದ ನಂಯರ ಮೃತ ಮಹಿಳೆ ನಖ್ವಾ ಅವರನ್ನು 1.5 ಕಿಮೀ ಎಳೆದೊಯ್ಯಲಾಗಿದೆ ಎಂದು ಸೂಚಿಸುವ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಅಪಘಾತದ ಭಯಾನಕ ವಿವರಗಳು ಹೊರಹೊಮ್ಮಿವೆ. ಶಾ ನಂತರ ಬಿಡಾವತ್‌ನೊಂದಿಗೆ ಸೀಟು ವಿನಿಮಯ ಮಾಡಿಕೊಂಡಿದ್ದು, ಮಹಿಳೆಯ ಶವವನ್ನು ಕಾರಿನಡಿಯಿಂದ ಹೊರತೆಗೆದು ರಸ್ತೆಯಲ್ಲಿ ಬಿಟ್ಟಿದ್ದನ್ನು ಕೂಡ ದೃಶ್ಯದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಭೀಕರವೆಂದರೆ, ಚಾಲಕನು ಸಿಸಿಟಿವಿಯ ದೃಷ್ಟಿ ಕ್ಷೇತ್ರದಿಂದ ವೇಗವಾಗಿ ಚಲಿಸುವ ಮೊದಲು ಮತ್ತೊಂದು ಬಾರಿ ಆಕೆಯ ದೇಹದ ಮೇಲೆ ಕಾರನ್ನು ಹಿಮ್ಮುಖವಾಗಿ ಓಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದ್ದರಿಂದ ಬಿಡಾವತ್ ಅವರು “ತನ್ನ ಕೃತ್ಯಗಳ ಬಗ್ಗೆ ತಿಳಿದಿದ್ದರು ಮತ್ತು ಇತರ ಆರೋಪಿಗಳಿಗೆ ಸಹಾಯ ಮಾಡಿದರು” ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾಲಕನ ವಿರುದ್ಧದ ತಪ್ಪಿತಸ್ಥ ನರಹತ್ಯೆಯ ಆರೋಪವನ್ನು ಪ್ರಶ್ನಿಸಿದ್ದಾರೆ.

ಅಪಘಾತದ ನಂತರ ಮಿಹಿರ್ ಶಾ ತಪ್ಪಿಸಿಕೊಳ್ಳುವ ಯೋಜನೆಯಲ್ಲಿ ತನ್ನ ತಂದೆಗೆ ಅನೇಕ ಫೋನ್ ಕರೆಗಳನ್ನು ಮಾಡಿದ್ದ. ಅವರು, ಕಾರನ್ನು ಬಿಟ್ಟು ಆಟೋ ರಿಕ್ಷಾದಲ್ಲಿ ಗೋರೆಗಾಂವ್‌ನಲ್ಲಿರುವ ತನ್ನ ಗೆಳತಿಯ ಮನೆಗೆ ಹೋಗುವಂತೆ ಆದೇಶ ನೀಡಿದ್ದಾರೆ. ಗಂಟೆಗಳ ನಂತರ ಆತನನ್ನು ಅಪರಿಚಿತ ವ್ಯಕ್ತಿಯೊಬ್ಬ ಗೆಳತಿ ಮನೆಯಿಂದ ಕರೆದೊಯ್ದಿದ್ದಾನೆ.

ಈ ಮಧ್ಯೆ, ರಾಜೇಶ್ ಶಾ ಮತ್ತು ಚಾಲಕ ಬಿಎಂಡಬ್ಲ್ಯು ಕಾರನ್ನು ಕಲಾನಗರಕ್ಕೆ ಓಡಿಸಿದರು, ಅಲ್ಲಿ ಅವರು ಶಿವಸೇನೆ ಸ್ಟಿಕ್ಕರ್ ಅನ್ನು ವಿಂಡ್‌ಶೀಲ್ಡ್‌ನಿಂದ ಕಿತ್ತು ಕಾರನ್ನು ಮರೆಮಾಡಲು ಪ್ರಯತ್ನಿಸಿದರು. ಆದರೆ, ವರ್ಲಿ ಠಾಣೆಯ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ; ‘ಒಬಿಸಿಗಳನ್ನು ಮರಾಠರ ವಿರುದ್ಧ ನಿಲ್ಲುವಂತೆ ಮಾಡುತ್ತಿದ್ದೀರಿ..’; ಫಡ್ನವಿಸ್‌ ವಿರುದ್ಧ ಗುಡುಗಿದ ಮನೋಜ್ ಜಾರಂಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...