Homeಮುಖಪುಟವರ್ಲಿ ಹಿಟ್ ಆಂಡ್ ರನ್ ಪ್ರಕರಣ: 72 ಗಂಟೆ ಕಳೆದರೂ ಪತ್ತೆಯಾಗದ ಪ್ರಮುಖ ಆರೋಪಿ ಮಿಹಿರ್...

ವರ್ಲಿ ಹಿಟ್ ಆಂಡ್ ರನ್ ಪ್ರಕರಣ: 72 ಗಂಟೆ ಕಳೆದರೂ ಪತ್ತೆಯಾಗದ ಪ್ರಮುಖ ಆರೋಪಿ ಮಿಹಿರ್ ಶಾ

- Advertisement -
- Advertisement -

ಮುಂಬೈನ ವರ್ಲಿಯಲ್ಲಿ ಭಾನುವಾರ ಮುಂಜಾನೆ ಕುಡಿದ ಮತ್ತಿನಲ್ಲಿ ತನ್ನ ಬಿಎಂಡಬ್ಲ್ಯೂ ಕಾರನ್ನು ಚಲಾಯಿಸಿ, ದ್ವಿಚಕ್ರ ವಾಹನದ ಹಿಂಬದಿ ಸವಾರೆಯಾದ 45 ವರ್ಷದ ಮಹಿಳೆಗೆ ಸಾವಿಗೆ ಕಾರಣನಾದ ಮಿಹಿರ್ ಶಾ ಮೂರು ದಿನಗ ಕಳೆದರೂ ಪತ್ತೆಯಾಗಿಲ್ಲ.

ಪತ್ತೆಕಾರ್ಯ ತೀವ್ರಗೊಳಿಸಿರುವ ಪೊಲೀಸರು, ಆರೋಪಿಯ ಸ್ನೇಹಿತರು ಸೇರಿದಂತೆ ಇದುವರೆಗೆ ಡಜನ್‌ಗಿಂತಲೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿದ್ದಾರೆ. ಆತನ ಪತ್ತೆಗೆ ಅನೇಕ ಕಾರ್ಯಪಡೆಗಳನ್ನು ರಚಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನಾ ಬಣದ ಸದಸ್ಯ ರಾಜಕಾರಣಿ ರಾಜೇಶ್ ಶಾ ಅವರ ಮಗ, ತನ್ನ ತಾಯಿ ಮತ್ತು ಸಹೋದರಿ ಸೇರಿದಂತೆ ಇತರ ಕುಟುಂಬ ಸದಸ್ಯರೊಂದಿಗೆ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಕುಟುಂಬದ ಎಲ್ಲ ಸದಸ್ಯರು ಮತ್ತು ಹತ್ತಿರದ ಸಂಬಂಧಿಗಳ ತಿಳಿದಿರುವ ಮೊಬೈಲ್ ಫೋನ್‌ಗಳು ಸ್ವಿಚ್ ಆಫ್ ಆಗಿವೆ.

ಭಾನುವಾರ ಬಂಧಿತರಾಗಿದ್ದ ಆರೋಪಿ ತಂದೆ, ಶಿವಸೇನಾ ನಾಯಕ ರಾಜೇಶ್ ಶಾ ಅವರು ₹15,000 ಹಣ ಪಾವತಿಸಿ 24 ಗಂಟೆಗಳಲ್ಲಿ ಜಾಮೀನು ಪಡೆದರು. ಇನ್ನೂ ಜೈಲಿನಲ್ಲಿರುವ ಏಕೈಕ ಆರೋಪಿ ರಾಜಋಷಿ ಬಿಡಾವತ್ ಎಂಬಾತ ಬಾರ್‌ನಲ್ಲಿ ಸುಮಾರು ₹20,000 ಖರ್ಚು ಮಾಡಿದ ಗಂಟೆಗಳ ನಂತರ, ಆರೋಪಿಗೆ ಕಾರು ಓಡಿಸುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದನು. ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದಾಗ, ತಾನೇ ಕಾರು ಚಲಾಯಿಸುತ್ತಿದ್ದಂತೆ ಸುಳ್ಳು ಹೇಳಿದ್ದ.

ಪೊಲೀಸರ ಪ್ರಕಾರ, ಭಾನುವಾರ ಮಿಹಿರ್ ಶಾ ಜುಹುದಲ್ಲಿರುವ ವೈಸ್ – ಗ್ಲೋಬಲ್ ತಪಸ್ ಬಾರ್‌ನಲ್ಲಿ ಪಾರ್ಟಿಗಾಗಿ ಮನೆಯಿಂದ ಹೊರಟರು. ಆ ಸಮಯದಲ್ಲಿ ಅವನು ತನ್ನ ತಂದೆ ಹೆಸರಿಗೆ ನೋಂದಾಯಿಸಿದ ಮರ್ಸಿಡಿಸ್ ಅನ್ನು ಓಡಿಸುತ್ತಿದ್ದು, ನಾಲ್ವರು ಗೆಳೆಯರು ಜೊತೆಗಿದ್ದರು ಎನ್ನಲಾಗಿದೆ.

ಐವರು ಬಾರ್‌ನಲ್ಲಿ ರಾತ್ರಿ 11 ಗಂಟೆಯವರೆಗೆ ಪಾರ್ಟಿ ಮಾಡಿದರು; 1.15 ಕ್ಕೆ (ಸೋಮವಾರ) ಮಿಹಿರ್ ಷಾ ತನ್ನ ಸ್ನೇಹಿತರನ್ನು ತನ್ನ ಮರ್ಸಿಡಿಸ್‌ನಲ್ಲಿ ಮನೆಗೆ ಹಿಂದಿರುಗಿಸಿದ್ದಾನೆ. ನಂತರ, ಮುಂಜಾನೆ 4 ಗಂಟೆಗೆ ಆತ ಬಿಡಾವತ್‌ನನ್ನು ತನ್ನ ಕಾರ್‌ನಲ್ಲಿ ಮರೈನ್ ಡ್ರೈವ್‌ನಲ್ಲಿ ‘ಜಾಲಿ ರೈಡ್’ಗೆ ಕರೆದೊಯ್ಯಲು ಹೇಳಿದ್ದಾನೆ. ಮುಂಜಾನೆ 5 ಗಂಟೆಗೆ, ಮರೀನ್ ಡ್ರೈವ್ ಮೇಲೆ ಮತ್ತು ಕೆಳಗೆ ಕಾರು ಓಡಿಸಿದ ನಂತರ, ಮನೆಗೆ ತಿರುಗಿಸಲಾಯಿತು. ಈ ಸಮಯದಲ್ಲಿ ಷಾ ಬಿಡಾವತ್ ಜೊತೆ ಸೀಟುಗಳನ್ನು ಬದಲಾಯಿಸಿಕೊಂಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದು ನಿಜವಾಗಿದ್ದರೆ, ಬೆಳಿಗ್ಗೆ 5.30 ಕ್ಕೆ ಬೈಕ್‌ಗೆ ಡಿಕ್ಕಿ ಹೊಡೆದಾಗ ಶಾ ಕಾರು ಚಲಾಯಿಸುತ್ತಿದ್ದ. ಸಾವನ್ನಪ್ಪಿರುವ ಮಹಿಳೆಯನ್ನು ಕಾವೇರಿ ನಖ್ವಾ (45) ಎಂದು ಗುರುತಿಸಲಾಗಿದೆ. ಆಕೆ ತನ್ನ ಪತಿ ಪ್ರದೀಪ್‌ನೊಂದಿಗೆ ಪ್ರಯಾಣಿಸುತ್ತಿದ್ದಳು ಮತ್ತು ಇಬ್ಬರು ಅಡುಗೆ ಮಾಡಲು ಮೀನುಗ ಕೊಳ್ಳಲು ಹೋಗಿದ್ದರು ಎಂದು ವರದಿಯಾಗಿದೆ.

1.5 ಕಿಲೋಮೀಟರ್ ಮಹಿಳೆಯನ್ನು ಎಳೆದೊಯ್ದ ಶಾ

ಬಿಎಂಡಬ್ಲ್ಯು ಬೈಕ್‌ಗೆ ಗುದ್ದಿಸಿದ ನಂಯರ ಮೃತ ಮಹಿಳೆ ನಖ್ವಾ ಅವರನ್ನು 1.5 ಕಿಮೀ ಎಳೆದೊಯ್ಯಲಾಗಿದೆ ಎಂದು ಸೂಚಿಸುವ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಅಪಘಾತದ ಭಯಾನಕ ವಿವರಗಳು ಹೊರಹೊಮ್ಮಿವೆ. ಶಾ ನಂತರ ಬಿಡಾವತ್‌ನೊಂದಿಗೆ ಸೀಟು ವಿನಿಮಯ ಮಾಡಿಕೊಂಡಿದ್ದು, ಮಹಿಳೆಯ ಶವವನ್ನು ಕಾರಿನಡಿಯಿಂದ ಹೊರತೆಗೆದು ರಸ್ತೆಯಲ್ಲಿ ಬಿಟ್ಟಿದ್ದನ್ನು ಕೂಡ ದೃಶ್ಯದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಭೀಕರವೆಂದರೆ, ಚಾಲಕನು ಸಿಸಿಟಿವಿಯ ದೃಷ್ಟಿ ಕ್ಷೇತ್ರದಿಂದ ವೇಗವಾಗಿ ಚಲಿಸುವ ಮೊದಲು ಮತ್ತೊಂದು ಬಾರಿ ಆಕೆಯ ದೇಹದ ಮೇಲೆ ಕಾರನ್ನು ಹಿಮ್ಮುಖವಾಗಿ ಓಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದ್ದರಿಂದ ಬಿಡಾವತ್ ಅವರು “ತನ್ನ ಕೃತ್ಯಗಳ ಬಗ್ಗೆ ತಿಳಿದಿದ್ದರು ಮತ್ತು ಇತರ ಆರೋಪಿಗಳಿಗೆ ಸಹಾಯ ಮಾಡಿದರು” ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾಲಕನ ವಿರುದ್ಧದ ತಪ್ಪಿತಸ್ಥ ನರಹತ್ಯೆಯ ಆರೋಪವನ್ನು ಪ್ರಶ್ನಿಸಿದ್ದಾರೆ.

ಅಪಘಾತದ ನಂತರ ಮಿಹಿರ್ ಶಾ ತಪ್ಪಿಸಿಕೊಳ್ಳುವ ಯೋಜನೆಯಲ್ಲಿ ತನ್ನ ತಂದೆಗೆ ಅನೇಕ ಫೋನ್ ಕರೆಗಳನ್ನು ಮಾಡಿದ್ದ. ಅವರು, ಕಾರನ್ನು ಬಿಟ್ಟು ಆಟೋ ರಿಕ್ಷಾದಲ್ಲಿ ಗೋರೆಗಾಂವ್‌ನಲ್ಲಿರುವ ತನ್ನ ಗೆಳತಿಯ ಮನೆಗೆ ಹೋಗುವಂತೆ ಆದೇಶ ನೀಡಿದ್ದಾರೆ. ಗಂಟೆಗಳ ನಂತರ ಆತನನ್ನು ಅಪರಿಚಿತ ವ್ಯಕ್ತಿಯೊಬ್ಬ ಗೆಳತಿ ಮನೆಯಿಂದ ಕರೆದೊಯ್ದಿದ್ದಾನೆ.

ಈ ಮಧ್ಯೆ, ರಾಜೇಶ್ ಶಾ ಮತ್ತು ಚಾಲಕ ಬಿಎಂಡಬ್ಲ್ಯು ಕಾರನ್ನು ಕಲಾನಗರಕ್ಕೆ ಓಡಿಸಿದರು, ಅಲ್ಲಿ ಅವರು ಶಿವಸೇನೆ ಸ್ಟಿಕ್ಕರ್ ಅನ್ನು ವಿಂಡ್‌ಶೀಲ್ಡ್‌ನಿಂದ ಕಿತ್ತು ಕಾರನ್ನು ಮರೆಮಾಡಲು ಪ್ರಯತ್ನಿಸಿದರು. ಆದರೆ, ವರ್ಲಿ ಠಾಣೆಯ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ; ‘ಒಬಿಸಿಗಳನ್ನು ಮರಾಠರ ವಿರುದ್ಧ ನಿಲ್ಲುವಂತೆ ಮಾಡುತ್ತಿದ್ದೀರಿ..’; ಫಡ್ನವಿಸ್‌ ವಿರುದ್ಧ ಗುಡುಗಿದ ಮನೋಜ್ ಜಾರಂಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...