Homeಮುಖಪುಟಟಿಎಂಸಿಗೆ ಕಳವಳ: ಪಂಚಾಯತ್ ಚುನಾವಣೆಯಲ್ಲಿ ಗಮನಾರ್ಹ ಸಾಧನಗೈದ ಹೊಸ ಪಕ್ಷ ISF

ಟಿಎಂಸಿಗೆ ಕಳವಳ: ಪಂಚಾಯತ್ ಚುನಾವಣೆಯಲ್ಲಿ ಗಮನಾರ್ಹ ಸಾಧನಗೈದ ಹೊಸ ಪಕ್ಷ ISF

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮೂರು ಹಂತದ ಪಂಚಾಯತ್ ಚುನಾವಣೆಗಳಲ್ಲಿ ಮುನ್ನಡೆಸಿದೆ. ಆದರೆ ಇದೀಗ ಟಿಎಂಸಿಗೆ ಇಂಡಿಯನ್ ಸೆಕ್ಯುಲರ್ ಫ್ರಂಟ್ (ISF) ಪಕ್ಷ ಕಳವಳ ಉಂಟು ಮಾಡುವ ರೀತಿಯಲ್ಲಿ ಅನಿಯಂತ್ರಿತವಾಗಿ ಬೆಳವಣಿಗೆ ಹೊಂದುತ್ತಿದೆ.

2021 ರ ಅಸೆಂಬ್ಲಿ ಚುನಾವಣೆಯಲ್ಲಿ ಮೊದಲ ಬಾರಿಗೆ ಹೊರಹೊಮ್ಮಿದ ಮುಸ್ಲಿಂ ಸಂಘಟನೆಯು ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಇದೀಗ ದಕ್ಷಿಣ 24 ಪರಗಣ ಜಿಲ್ಲೆಯ ತನ್ನ ಭದ್ರಕೋಟೆಯಾದ ಭಂಗಾರ್‌ನಲ್ಲಿ ಗ್ರಾಮ ಪಂಚಾಯ್ತಿ ಸ್ಥಾನಗಳನ್ನು ಪಡೆದುಕೊಂಡಿತು. ಹಾಗೆಯೇ ಉತ್ತರ 24 ಪರಗಣಗಳು, ಹೌರಾ ಮತ್ತು ಇತರ ಸಮೀಪದ ಜಿಲ್ಲೆಗಳಲ್ಲಿ ಗೆಲುವು ಕಂಡಿದೆ.

ರಾಜ್ಯ ಚುನಾವಣಾ ಆಯೋಗವು ಇನ್ನೂ ಅಂತಿಮ ಅಂಕಿಅಂಶಗಳನ್ನು ಪ್ರಕಟಿಸದಿದ್ದರೂ, ಪಶ್ಚಿಮ ಬಂಗಾಳದಲ್ಲಿ ISF ಸ್ಪರ್ಧಿಸಿದ ಮೊದಲ ಪಂಚಾಯತ್ ಚುನಾವಣೆಯಲ್ಲಿ 1,300 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹಾಕಿದರು ಮತ್ತು “400 ಕ್ಕೂ ಹೆಚ್ಚು” ಗೆದ್ದಿದ್ದಾರೆ ಎಂದು ISF ಮೂಲಗಳು ತಿಳಿಸಿವೆ.

2021ರ ಅಸೆಂಬ್ಲಿ ಚುನಾವಣೆಗೆ ಮುಂಚಿತವಾಗಿ, ಬಂಗಾಳದ ಮುಸ್ಲಿಮರು ಮತ್ತು ದಲಿತರಿಗೆ “ಸಾಮಾಜಿಕ ನ್ಯಾಯವನ್ನು ನೀಡುವ” ಉದ್ದೇಶದಿಂದ ಫರ್ಫುರಾ ಷರೀಫ್ ದೇಗುಲದ ಧರ್ಮಗುರು ಪೀರ್ಜಾದಾ ಅಬ್ಬಾಸ್ ಸಿದ್ದಿಕಿ ಅವರು ಈ ISFಅನ್ನು ಘೋಷಿಸಿದರು.

ಟಿಎಂಸಿಯ ಹಿರಿಯ ನಾಯಕರೊಬ್ಬರು ISF ಕುರಿತು ಮಾತನಾಡಿದ್ದು, ”ಭೂಸ್ವಾಧೀನದ ವಿರುದ್ಧ ಹೋರಾಡಿದವರು ಈಗ ISF (ಭಾಂಗಾರ್‌ನಲ್ಲಿ) ಇದ್ದಾರೆ. ಬಹುತೇಕ ಎಲ್ಲಾ ಸಿಪಿಐ(ಎಂ) ಸದಸ್ಯರು ಕೂಡ ಈಗ ಐಎಸ್‌ಎಫ್‌ನಲ್ಲಿದ್ದಾರೆ… ಒಂದರ ಹಿಂದೆ ಒಂದರಂತೆ ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ, ಮತ್ತು ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ಸಂಪೂರ್ಣವಾಗಿ ಐಎಸ್‌ಎಫ್‌ನತ್ತ ಸಾಗಿವೆ. ಭಾಂಗಾರ್‌ನ ಅನೇಕ ಹಳ್ಳಿಗಳಲ್ಲಿ, ನಮಗೆ ಈಗ ನೆಲೆಯೂ ಇಲ್ಲ” ಎಂದು ಒಪ್ಪಿಕೊಂಡಿದ್ದಾರೆ.

ISF ನಾಯಕ ತಪಾಶ್ ಚಕ್ರವರ್ತಿ ಮಾತನಾಡಿ, ಫಲಿತಾಂಶಗಳ ವಿಚಾರದಲ್ಲಿ ನಾವು ತುಂಬಾ ಆಶಾವಾದಿಯಾಗಿದ್ದೇವೆ ಎಂದು ಹೇಳಿದ್ದಾರೆ. ”ನಾವು ಬಂಕುರಾ, ಹೌರಾ, ಹೂಗ್ಲಿಯಲ್ಲಿಯೂ ಗ್ರಾಮ ಪಂಚಾಯಿತಿ ಸ್ಥಾನಗಳನ್ನು ಗೆದ್ದಿದ್ದೇವೆ. ಪಶ್ಚಿಮ ಬಂಗಾಳದ ಜನರು ಬಿಜೆಪಿ ಮತ್ತು ಟಿಎಂಸಿ ಹೊರತುಪಡಿಸಿ ಹೊಸ ರಾಜಕೀಯ ಶಕ್ತಿಗಾಗಿ ಹುಡುಕುತ್ತಿದ್ದೇವೆ. ನಮ್ಮ ಪಕ್ಷದೊಂದಿಗೆ ಅಪಾರ ಸಂಖ್ಯೆಯ ಯುವಕರು ಸೇರಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ನಾವು ನಮ್ಮ ಸಂಘಟನೆಯನ್ನು ರಾಜ್ಯಾದ್ಯಂತ ವಿಸ್ತರಿಸುತ್ತೇವೆ” ಎಂದು ಹೇಳಿದ್ದಾರೆ. ಇದು ಸಹಜವಾಗಿ ಟಿಎಂಸಿಗೆ ಆತಂಕ ಹುಟ್ಟಿಸಿದೆ.

ಇದನ್ನೂ ಓದಿ: ಪ.ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಜಯಭೇರಿ: 2,552 ಗ್ರಾಮ ಪಂಚಾಯತ್‌ಗಳಲ್ಲಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...