Homeಮುಖಪುಟಟಿಎಂಸಿಗೆ ಕಳವಳ: ಪಂಚಾಯತ್ ಚುನಾವಣೆಯಲ್ಲಿ ಗಮನಾರ್ಹ ಸಾಧನಗೈದ ಹೊಸ ಪಕ್ಷ ISF

ಟಿಎಂಸಿಗೆ ಕಳವಳ: ಪಂಚಾಯತ್ ಚುನಾವಣೆಯಲ್ಲಿ ಗಮನಾರ್ಹ ಸಾಧನಗೈದ ಹೊಸ ಪಕ್ಷ ISF

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮೂರು ಹಂತದ ಪಂಚಾಯತ್ ಚುನಾವಣೆಗಳಲ್ಲಿ ಮುನ್ನಡೆಸಿದೆ. ಆದರೆ ಇದೀಗ ಟಿಎಂಸಿಗೆ ಇಂಡಿಯನ್ ಸೆಕ್ಯುಲರ್ ಫ್ರಂಟ್ (ISF) ಪಕ್ಷ ಕಳವಳ ಉಂಟು ಮಾಡುವ ರೀತಿಯಲ್ಲಿ ಅನಿಯಂತ್ರಿತವಾಗಿ ಬೆಳವಣಿಗೆ ಹೊಂದುತ್ತಿದೆ.

2021 ರ ಅಸೆಂಬ್ಲಿ ಚುನಾವಣೆಯಲ್ಲಿ ಮೊದಲ ಬಾರಿಗೆ ಹೊರಹೊಮ್ಮಿದ ಮುಸ್ಲಿಂ ಸಂಘಟನೆಯು ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಇದೀಗ ದಕ್ಷಿಣ 24 ಪರಗಣ ಜಿಲ್ಲೆಯ ತನ್ನ ಭದ್ರಕೋಟೆಯಾದ ಭಂಗಾರ್‌ನಲ್ಲಿ ಗ್ರಾಮ ಪಂಚಾಯ್ತಿ ಸ್ಥಾನಗಳನ್ನು ಪಡೆದುಕೊಂಡಿತು. ಹಾಗೆಯೇ ಉತ್ತರ 24 ಪರಗಣಗಳು, ಹೌರಾ ಮತ್ತು ಇತರ ಸಮೀಪದ ಜಿಲ್ಲೆಗಳಲ್ಲಿ ಗೆಲುವು ಕಂಡಿದೆ.

ರಾಜ್ಯ ಚುನಾವಣಾ ಆಯೋಗವು ಇನ್ನೂ ಅಂತಿಮ ಅಂಕಿಅಂಶಗಳನ್ನು ಪ್ರಕಟಿಸದಿದ್ದರೂ, ಪಶ್ಚಿಮ ಬಂಗಾಳದಲ್ಲಿ ISF ಸ್ಪರ್ಧಿಸಿದ ಮೊದಲ ಪಂಚಾಯತ್ ಚುನಾವಣೆಯಲ್ಲಿ 1,300 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹಾಕಿದರು ಮತ್ತು “400 ಕ್ಕೂ ಹೆಚ್ಚು” ಗೆದ್ದಿದ್ದಾರೆ ಎಂದು ISF ಮೂಲಗಳು ತಿಳಿಸಿವೆ.

2021ರ ಅಸೆಂಬ್ಲಿ ಚುನಾವಣೆಗೆ ಮುಂಚಿತವಾಗಿ, ಬಂಗಾಳದ ಮುಸ್ಲಿಮರು ಮತ್ತು ದಲಿತರಿಗೆ “ಸಾಮಾಜಿಕ ನ್ಯಾಯವನ್ನು ನೀಡುವ” ಉದ್ದೇಶದಿಂದ ಫರ್ಫುರಾ ಷರೀಫ್ ದೇಗುಲದ ಧರ್ಮಗುರು ಪೀರ್ಜಾದಾ ಅಬ್ಬಾಸ್ ಸಿದ್ದಿಕಿ ಅವರು ಈ ISFಅನ್ನು ಘೋಷಿಸಿದರು.

ಟಿಎಂಸಿಯ ಹಿರಿಯ ನಾಯಕರೊಬ್ಬರು ISF ಕುರಿತು ಮಾತನಾಡಿದ್ದು, ”ಭೂಸ್ವಾಧೀನದ ವಿರುದ್ಧ ಹೋರಾಡಿದವರು ಈಗ ISF (ಭಾಂಗಾರ್‌ನಲ್ಲಿ) ಇದ್ದಾರೆ. ಬಹುತೇಕ ಎಲ್ಲಾ ಸಿಪಿಐ(ಎಂ) ಸದಸ್ಯರು ಕೂಡ ಈಗ ಐಎಸ್‌ಎಫ್‌ನಲ್ಲಿದ್ದಾರೆ… ಒಂದರ ಹಿಂದೆ ಒಂದರಂತೆ ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ, ಮತ್ತು ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ಸಂಪೂರ್ಣವಾಗಿ ಐಎಸ್‌ಎಫ್‌ನತ್ತ ಸಾಗಿವೆ. ಭಾಂಗಾರ್‌ನ ಅನೇಕ ಹಳ್ಳಿಗಳಲ್ಲಿ, ನಮಗೆ ಈಗ ನೆಲೆಯೂ ಇಲ್ಲ” ಎಂದು ಒಪ್ಪಿಕೊಂಡಿದ್ದಾರೆ.

ISF ನಾಯಕ ತಪಾಶ್ ಚಕ್ರವರ್ತಿ ಮಾತನಾಡಿ, ಫಲಿತಾಂಶಗಳ ವಿಚಾರದಲ್ಲಿ ನಾವು ತುಂಬಾ ಆಶಾವಾದಿಯಾಗಿದ್ದೇವೆ ಎಂದು ಹೇಳಿದ್ದಾರೆ. ”ನಾವು ಬಂಕುರಾ, ಹೌರಾ, ಹೂಗ್ಲಿಯಲ್ಲಿಯೂ ಗ್ರಾಮ ಪಂಚಾಯಿತಿ ಸ್ಥಾನಗಳನ್ನು ಗೆದ್ದಿದ್ದೇವೆ. ಪಶ್ಚಿಮ ಬಂಗಾಳದ ಜನರು ಬಿಜೆಪಿ ಮತ್ತು ಟಿಎಂಸಿ ಹೊರತುಪಡಿಸಿ ಹೊಸ ರಾಜಕೀಯ ಶಕ್ತಿಗಾಗಿ ಹುಡುಕುತ್ತಿದ್ದೇವೆ. ನಮ್ಮ ಪಕ್ಷದೊಂದಿಗೆ ಅಪಾರ ಸಂಖ್ಯೆಯ ಯುವಕರು ಸೇರಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ನಾವು ನಮ್ಮ ಸಂಘಟನೆಯನ್ನು ರಾಜ್ಯಾದ್ಯಂತ ವಿಸ್ತರಿಸುತ್ತೇವೆ” ಎಂದು ಹೇಳಿದ್ದಾರೆ. ಇದು ಸಹಜವಾಗಿ ಟಿಎಂಸಿಗೆ ಆತಂಕ ಹುಟ್ಟಿಸಿದೆ.

ಇದನ್ನೂ ಓದಿ: ಪ.ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಜಯಭೇರಿ: 2,552 ಗ್ರಾಮ ಪಂಚಾಯತ್‌ಗಳಲ್ಲಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....