Homeಮುಖಪುಟಟಿಎಂಸಿಗೆ ಕಳವಳ: ಪಂಚಾಯತ್ ಚುನಾವಣೆಯಲ್ಲಿ ಗಮನಾರ್ಹ ಸಾಧನಗೈದ ಹೊಸ ಪಕ್ಷ ISF

ಟಿಎಂಸಿಗೆ ಕಳವಳ: ಪಂಚಾಯತ್ ಚುನಾವಣೆಯಲ್ಲಿ ಗಮನಾರ್ಹ ಸಾಧನಗೈದ ಹೊಸ ಪಕ್ಷ ISF

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮೂರು ಹಂತದ ಪಂಚಾಯತ್ ಚುನಾವಣೆಗಳಲ್ಲಿ ಮುನ್ನಡೆಸಿದೆ. ಆದರೆ ಇದೀಗ ಟಿಎಂಸಿಗೆ ಇಂಡಿಯನ್ ಸೆಕ್ಯುಲರ್ ಫ್ರಂಟ್ (ISF) ಪಕ್ಷ ಕಳವಳ ಉಂಟು ಮಾಡುವ ರೀತಿಯಲ್ಲಿ ಅನಿಯಂತ್ರಿತವಾಗಿ ಬೆಳವಣಿಗೆ ಹೊಂದುತ್ತಿದೆ.

2021 ರ ಅಸೆಂಬ್ಲಿ ಚುನಾವಣೆಯಲ್ಲಿ ಮೊದಲ ಬಾರಿಗೆ ಹೊರಹೊಮ್ಮಿದ ಮುಸ್ಲಿಂ ಸಂಘಟನೆಯು ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಇದೀಗ ದಕ್ಷಿಣ 24 ಪರಗಣ ಜಿಲ್ಲೆಯ ತನ್ನ ಭದ್ರಕೋಟೆಯಾದ ಭಂಗಾರ್‌ನಲ್ಲಿ ಗ್ರಾಮ ಪಂಚಾಯ್ತಿ ಸ್ಥಾನಗಳನ್ನು ಪಡೆದುಕೊಂಡಿತು. ಹಾಗೆಯೇ ಉತ್ತರ 24 ಪರಗಣಗಳು, ಹೌರಾ ಮತ್ತು ಇತರ ಸಮೀಪದ ಜಿಲ್ಲೆಗಳಲ್ಲಿ ಗೆಲುವು ಕಂಡಿದೆ.

ರಾಜ್ಯ ಚುನಾವಣಾ ಆಯೋಗವು ಇನ್ನೂ ಅಂತಿಮ ಅಂಕಿಅಂಶಗಳನ್ನು ಪ್ರಕಟಿಸದಿದ್ದರೂ, ಪಶ್ಚಿಮ ಬಂಗಾಳದಲ್ಲಿ ISF ಸ್ಪರ್ಧಿಸಿದ ಮೊದಲ ಪಂಚಾಯತ್ ಚುನಾವಣೆಯಲ್ಲಿ 1,300 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹಾಕಿದರು ಮತ್ತು “400 ಕ್ಕೂ ಹೆಚ್ಚು” ಗೆದ್ದಿದ್ದಾರೆ ಎಂದು ISF ಮೂಲಗಳು ತಿಳಿಸಿವೆ.

2021ರ ಅಸೆಂಬ್ಲಿ ಚುನಾವಣೆಗೆ ಮುಂಚಿತವಾಗಿ, ಬಂಗಾಳದ ಮುಸ್ಲಿಮರು ಮತ್ತು ದಲಿತರಿಗೆ “ಸಾಮಾಜಿಕ ನ್ಯಾಯವನ್ನು ನೀಡುವ” ಉದ್ದೇಶದಿಂದ ಫರ್ಫುರಾ ಷರೀಫ್ ದೇಗುಲದ ಧರ್ಮಗುರು ಪೀರ್ಜಾದಾ ಅಬ್ಬಾಸ್ ಸಿದ್ದಿಕಿ ಅವರು ಈ ISFಅನ್ನು ಘೋಷಿಸಿದರು.

ಟಿಎಂಸಿಯ ಹಿರಿಯ ನಾಯಕರೊಬ್ಬರು ISF ಕುರಿತು ಮಾತನಾಡಿದ್ದು, ”ಭೂಸ್ವಾಧೀನದ ವಿರುದ್ಧ ಹೋರಾಡಿದವರು ಈಗ ISF (ಭಾಂಗಾರ್‌ನಲ್ಲಿ) ಇದ್ದಾರೆ. ಬಹುತೇಕ ಎಲ್ಲಾ ಸಿಪಿಐ(ಎಂ) ಸದಸ್ಯರು ಕೂಡ ಈಗ ಐಎಸ್‌ಎಫ್‌ನಲ್ಲಿದ್ದಾರೆ… ಒಂದರ ಹಿಂದೆ ಒಂದರಂತೆ ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ, ಮತ್ತು ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ಸಂಪೂರ್ಣವಾಗಿ ಐಎಸ್‌ಎಫ್‌ನತ್ತ ಸಾಗಿವೆ. ಭಾಂಗಾರ್‌ನ ಅನೇಕ ಹಳ್ಳಿಗಳಲ್ಲಿ, ನಮಗೆ ಈಗ ನೆಲೆಯೂ ಇಲ್ಲ” ಎಂದು ಒಪ್ಪಿಕೊಂಡಿದ್ದಾರೆ.

ISF ನಾಯಕ ತಪಾಶ್ ಚಕ್ರವರ್ತಿ ಮಾತನಾಡಿ, ಫಲಿತಾಂಶಗಳ ವಿಚಾರದಲ್ಲಿ ನಾವು ತುಂಬಾ ಆಶಾವಾದಿಯಾಗಿದ್ದೇವೆ ಎಂದು ಹೇಳಿದ್ದಾರೆ. ”ನಾವು ಬಂಕುರಾ, ಹೌರಾ, ಹೂಗ್ಲಿಯಲ್ಲಿಯೂ ಗ್ರಾಮ ಪಂಚಾಯಿತಿ ಸ್ಥಾನಗಳನ್ನು ಗೆದ್ದಿದ್ದೇವೆ. ಪಶ್ಚಿಮ ಬಂಗಾಳದ ಜನರು ಬಿಜೆಪಿ ಮತ್ತು ಟಿಎಂಸಿ ಹೊರತುಪಡಿಸಿ ಹೊಸ ರಾಜಕೀಯ ಶಕ್ತಿಗಾಗಿ ಹುಡುಕುತ್ತಿದ್ದೇವೆ. ನಮ್ಮ ಪಕ್ಷದೊಂದಿಗೆ ಅಪಾರ ಸಂಖ್ಯೆಯ ಯುವಕರು ಸೇರಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ನಾವು ನಮ್ಮ ಸಂಘಟನೆಯನ್ನು ರಾಜ್ಯಾದ್ಯಂತ ವಿಸ್ತರಿಸುತ್ತೇವೆ” ಎಂದು ಹೇಳಿದ್ದಾರೆ. ಇದು ಸಹಜವಾಗಿ ಟಿಎಂಸಿಗೆ ಆತಂಕ ಹುಟ್ಟಿಸಿದೆ.

ಇದನ್ನೂ ಓದಿ: ಪ.ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಜಯಭೇರಿ: 2,552 ಗ್ರಾಮ ಪಂಚಾಯತ್‌ಗಳಲ್ಲಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...