Homeಮುಖಪುಟಕ್ರಿಮಿನಲ್ ಮಾನನಷ್ಟ ಪ್ರಕರಣ: ಕುಸ್ತಿಪಟು ಬಜರಂಗ್ ಪುನಿಯಾಗೆ ಜಾಮೀನು

ಕ್ರಿಮಿನಲ್ ಮಾನನಷ್ಟ ಪ್ರಕರಣ: ಕುಸ್ತಿಪಟು ಬಜರಂಗ್ ಪುನಿಯಾಗೆ ಜಾಮೀನು

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಹಾಗೂ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥರಾಗಿರುವ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧದ ಪ್ರತಿಭಟನೆಯ ವೇಳೆ ತಮ್ಮ ಪ್ರತಿಷ್ಠೆಯನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿ ಕೋಚ್‌ ಸಲ್ಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯಲ್ಲಿ ಕುಸ್ತಿಪಟು ಬಜರಂಗ್‌ ಪುನಿಯಾ ಅವರಿಗೆ ಗುರುವಾರ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕುಸ್ತಿಪಟುಗಳ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡುವ ವೇಳೆ ಭಜರಂಗ್ ಅವರು, ದಹಿಯಾ ಸ್ವತಃ ಅತ್ಯಾಚಾರ ಪ್ರಕರಣವನ್ನು ಎದುರಿಸುತ್ತಿರುವ ಕಾರಣ ಅವರಿಗೆ ಆಂದೋಲನವನ್ನು ವಿರೋಧಿಸುವ ಯಾವುದೇ ನೈತಿಕತೆ ಇಲ್ಲ” ಎಂದು ಹೇಳಿದ್ದರು.

ಈ ಹೇಳಿಕೆಯ ನಂತರ ದಹಿಯಾ ಅವರು, ನ್ಯಾಯಾಲಯದ ಮೊರೆ ಹೋಗಿದ್ದರು. ಈ ವಿಚಾರವಾಗಿ ಬಜರಂಗ್‌ಗೆ ಸಮನ್ಸ್ ನೀಡಲಾಗಿತ್ತು.

”ಭಜರಂಗ್ ಅವರು ಹಾಜರಾತಿಯಿಂದ ವಿನಾಯಿತಿ ಕೋರಿದ್ದರು ಮತ್ತು ಮೊದಲ ಮೂರು ವಿಚಾರಣೆಗಳನ್ನು ತಪ್ಪಿಸಿಕೊಂಡರು. ಅವರು ಇಂದು ದೈಹಿಕವಾಗಿ ಹಾಜರಾಗಿದ್ದರು ಮತ್ತು ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ. ಮುಂದಿನ ವಿಚಾರಣೆಯ ಪ್ರಕ್ರಿಯೆಗಳು ದಿನಾಂಕ ಮಾರ್ಚ್ 5 ಆಗಿದೆ” ಎಂದು ದಹಿಯಾ ಪರ ವಕೀಲ ರಾಜೇಶ್ ಕುಮಾರ್ ರೆಕ್ಸ್ವಾಲ್ ಅವರು ಪಿಟಿಐಗೆ ತಿಳಿಸಿದರು.

”ಭಜರಂಗ್ ಹೇಳಿದ ಅತ್ಯಾಚಾರ ಪ್ರಕರಣದಲ್ಲಿ ನಾನು ಖುಲಾಸೆಗೊಂಡಿದ್ದೇನೆ. ಅವರ ಹೇಳಿಕೆಗಳು ನನ್ನ ಹೆಸರಿಗೆ ಕಳಂಕ ತಂದಿದೆ” ಎಂದು ದಹಿಯಾ ನ್ಯಾಯಾಲಯದಲ್ಲಿ ವಾದಿಸಿದ್ದರು.

ಕುಸ್ತಿಪಟುಗಳಾದ ಬಜರಂಗ್, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ಹಲವು ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿದ್ದರು.

ಈ ವಿಚಾರದಲ್ಲಿ ಇದೀಗ ನ್ಯಾಯಾಲಯದ ಮೊಕದ್ದಮೆ ಎದುರಿಸುತ್ತಿರುವ ಸಿಂಗ್, ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಟಿಕೆಟ್‌ ರದ್ದುಗೊಳಿಸುವ ಧೈರ್ಯ ಯಾರಿಗಿದೆ?’: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...