Homeಮುಖಪುಟಕ್ರಿಮಿನಲ್ ಮಾನನಷ್ಟ ಪ್ರಕರಣ: ಕುಸ್ತಿಪಟು ಬಜರಂಗ್ ಪುನಿಯಾಗೆ ಜಾಮೀನು

ಕ್ರಿಮಿನಲ್ ಮಾನನಷ್ಟ ಪ್ರಕರಣ: ಕುಸ್ತಿಪಟು ಬಜರಂಗ್ ಪುನಿಯಾಗೆ ಜಾಮೀನು

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಹಾಗೂ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥರಾಗಿರುವ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧದ ಪ್ರತಿಭಟನೆಯ ವೇಳೆ ತಮ್ಮ ಪ್ರತಿಷ್ಠೆಯನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿ ಕೋಚ್‌ ಸಲ್ಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯಲ್ಲಿ ಕುಸ್ತಿಪಟು ಬಜರಂಗ್‌ ಪುನಿಯಾ ಅವರಿಗೆ ಗುರುವಾರ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕುಸ್ತಿಪಟುಗಳ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡುವ ವೇಳೆ ಭಜರಂಗ್ ಅವರು, ದಹಿಯಾ ಸ್ವತಃ ಅತ್ಯಾಚಾರ ಪ್ರಕರಣವನ್ನು ಎದುರಿಸುತ್ತಿರುವ ಕಾರಣ ಅವರಿಗೆ ಆಂದೋಲನವನ್ನು ವಿರೋಧಿಸುವ ಯಾವುದೇ ನೈತಿಕತೆ ಇಲ್ಲ” ಎಂದು ಹೇಳಿದ್ದರು.

ಈ ಹೇಳಿಕೆಯ ನಂತರ ದಹಿಯಾ ಅವರು, ನ್ಯಾಯಾಲಯದ ಮೊರೆ ಹೋಗಿದ್ದರು. ಈ ವಿಚಾರವಾಗಿ ಬಜರಂಗ್‌ಗೆ ಸಮನ್ಸ್ ನೀಡಲಾಗಿತ್ತು.

”ಭಜರಂಗ್ ಅವರು ಹಾಜರಾತಿಯಿಂದ ವಿನಾಯಿತಿ ಕೋರಿದ್ದರು ಮತ್ತು ಮೊದಲ ಮೂರು ವಿಚಾರಣೆಗಳನ್ನು ತಪ್ಪಿಸಿಕೊಂಡರು. ಅವರು ಇಂದು ದೈಹಿಕವಾಗಿ ಹಾಜರಾಗಿದ್ದರು ಮತ್ತು ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ. ಮುಂದಿನ ವಿಚಾರಣೆಯ ಪ್ರಕ್ರಿಯೆಗಳು ದಿನಾಂಕ ಮಾರ್ಚ್ 5 ಆಗಿದೆ” ಎಂದು ದಹಿಯಾ ಪರ ವಕೀಲ ರಾಜೇಶ್ ಕುಮಾರ್ ರೆಕ್ಸ್ವಾಲ್ ಅವರು ಪಿಟಿಐಗೆ ತಿಳಿಸಿದರು.

”ಭಜರಂಗ್ ಹೇಳಿದ ಅತ್ಯಾಚಾರ ಪ್ರಕರಣದಲ್ಲಿ ನಾನು ಖುಲಾಸೆಗೊಂಡಿದ್ದೇನೆ. ಅವರ ಹೇಳಿಕೆಗಳು ನನ್ನ ಹೆಸರಿಗೆ ಕಳಂಕ ತಂದಿದೆ” ಎಂದು ದಹಿಯಾ ನ್ಯಾಯಾಲಯದಲ್ಲಿ ವಾದಿಸಿದ್ದರು.

ಕುಸ್ತಿಪಟುಗಳಾದ ಬಜರಂಗ್, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ಹಲವು ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿದ್ದರು.

ಈ ವಿಚಾರದಲ್ಲಿ ಇದೀಗ ನ್ಯಾಯಾಲಯದ ಮೊಕದ್ದಮೆ ಎದುರಿಸುತ್ತಿರುವ ಸಿಂಗ್, ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಟಿಕೆಟ್‌ ರದ್ದುಗೊಳಿಸುವ ಧೈರ್ಯ ಯಾರಿಗಿದೆ?’: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...