Homeಮುಖಪುಟ'ನಾಡಾ'ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

‘ನಾಡಾ’ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

- Advertisement -
- Advertisement -

ಡೋಪಿಂಗ್ ಪರೀಕ್ಷೆ (ಮಾದಕವಸ್ತು ಪತ್ತೆ ಪರೀಕ್ಷೆ)ಗೆ ಸರಿಯಾದ ಸಮಯಕ್ಕೆ ಮೂತ್ರದ ಮಾದರಿಯನ್ನು ನೀಡದ ಆರೋಪದ ಮೇಲೆ ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಪ್ರಾಧಿಕಾರ (ನಾಡಾ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಬಜರಂಗ್ ಪುನಿಯಾ “ಮಾದಕ ವಸ್ತು ಪರೀಕ್ಷೆ ಪತ್ತೆಗೆ ಕೇಳಿರುವ ಪ್ರಶ್ನೆಯ ಬಗ್ಗೆ ನಾನು ಸ್ಪಷ್ಟಪಡಿಸುತ್ತೇನೆ. ನಾನು ನಾಡಾ ಅಧಿಕಾರಿಗಳಿಗೆ ನನ್ನ ಮಾದರಿಗಳನ್ನು ನೀಡಲು ತಿರಸ್ಕರಿಸಿಲ್ಲ. ನನ್ನ ಮಾದರಿಗಳನ್ನು ಹಾಗೂ ಮಾದಕ ದ್ರವ್ಯ ಪತ್ತೆ ಪರೀಕ್ಷೆ ನಡೆಸಲು ಅವಧಿ ಮೀರಿದ ಕಿಟ್‌ಗಳನ್ನು ತಂದ ಬಗ್ಗೆ ಕೈಗೊಂಡ ಕ್ರಮಗಳ ಕುರಿತ ನನ್ನ ಪ್ರಶ್ನೆಗೆ ಉತ್ತರಿಸಲು ಅವರಲ್ಲಿ ಮನವಿ ಮಾಡುತ್ತೇನೆ. ಅಮಾನತು ಪತ್ರಕ್ಕೆ ನನ್ನ ವಕೀಲರು ಉತ್ತರ ನೀಡಲಿದ್ದಾರೆ” ಎಂದಿದ್ದಾರೆ.

ಅಮಾನತು ಆದೇಶ ಜುಲೈ 26 ರಿಂದ ಪ್ರಾರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಬಜರಂಗ್ ಪುನಿಯಾ ಅವರಿಗೆ ತಡೆಯೊಡ್ಡುವ ಸಾಧ್ಯತೆ ಇದೆ ವರದಿಗಳು ಹೇಳಿವೆ.

ನಾಡಾ 2021ರ ಆರ್ಟಿಕಲ್ 7.4 ರ ಪ್ರಕಾರ, ಈ ವಿಷಯದಲ್ಲಿ ವಿಚಾರಣೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರುವ ಮೊದಲು ಯಾವುದೇ ಸ್ಪರ್ಧೆ ಅಥವಾ ಚಟುವಟಿಕೆಯಲ್ಲಿ ಭಾಗವಹಿಸದಂತೆ ಬಜರಂಗ್ ಪುನಿಯಾ ಅವರನ್ನು ತಕ್ಷಣವೇ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಕೆಲ ತಿಂಗಳ ಹಿಂದೆ ಪುನಿಯಾ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಪ್ರಾಧಿಕಾರ (ನಾಡಾ) ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದರು. ಅಥ್ಲೀಟ್‌ಗಳ ಮೇಲೆ ಡೋಪ್ ಪರೀಕ್ಷೆ ನಡೆಸುವಾಗ ಅವಧಿ ಮೀರಿದ ಮತ್ತು ಹಳೆಯ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಹೇಳಿದ್ದರು. ಜೊತೆಗೆ ಸಾಕ್ಷ್ಯ ಸಮೇತವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಕ್ಷಿ ಮಲ್ಲಿಕ್, ವಿನೇಶ್ ಫೋಗಟ್ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಬೀದಿಗಿಳಿದು ಹೋರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ಬಜರಂಗ್ ಪುನಿಯಾ ಅವರನ್ನು ಬೆಂಬಲಿಸಿ ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಕುಸ್ತಿಪಟುಗಳ ಹೋರಾಟದ ನಡುವೆಯೇ ನಡೆದ ಕುಸ್ತಿ ಒಕ್ಕೂಟದ ಚುನಾಣೆಯಲ್ಲಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದರಿಂದ ತೀವ್ರ ಬೇಸರಗೊಂಡಿದ್ದ
ಕುಸ್ತಿಪಟು ಸಾಕ್ಷಿ ಮಲಿಕ್​ ಕುಸ್ತಿಗೆ ವಿದಾಯ ಹೇಳಿದ್ದರು. ಅವರ ಬೆನ್ನಲ್ಲೇ ಬಜರಂಗ್ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ್ದರು.

ಬಜರಂಗ್‌ ಪುನಿಯಾ 2020ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ 65 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು.

ಇದನ್ನೂ ಓದಿ : ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...