Homeಮುಖಪುಟ'ನಾಡಾ'ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

‘ನಾಡಾ’ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

- Advertisement -
- Advertisement -

ಡೋಪಿಂಗ್ ಪರೀಕ್ಷೆ (ಮಾದಕವಸ್ತು ಪತ್ತೆ ಪರೀಕ್ಷೆ)ಗೆ ಸರಿಯಾದ ಸಮಯಕ್ಕೆ ಮೂತ್ರದ ಮಾದರಿಯನ್ನು ನೀಡದ ಆರೋಪದ ಮೇಲೆ ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಪ್ರಾಧಿಕಾರ (ನಾಡಾ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಬಜರಂಗ್ ಪುನಿಯಾ “ಮಾದಕ ವಸ್ತು ಪರೀಕ್ಷೆ ಪತ್ತೆಗೆ ಕೇಳಿರುವ ಪ್ರಶ್ನೆಯ ಬಗ್ಗೆ ನಾನು ಸ್ಪಷ್ಟಪಡಿಸುತ್ತೇನೆ. ನಾನು ನಾಡಾ ಅಧಿಕಾರಿಗಳಿಗೆ ನನ್ನ ಮಾದರಿಗಳನ್ನು ನೀಡಲು ತಿರಸ್ಕರಿಸಿಲ್ಲ. ನನ್ನ ಮಾದರಿಗಳನ್ನು ಹಾಗೂ ಮಾದಕ ದ್ರವ್ಯ ಪತ್ತೆ ಪರೀಕ್ಷೆ ನಡೆಸಲು ಅವಧಿ ಮೀರಿದ ಕಿಟ್‌ಗಳನ್ನು ತಂದ ಬಗ್ಗೆ ಕೈಗೊಂಡ ಕ್ರಮಗಳ ಕುರಿತ ನನ್ನ ಪ್ರಶ್ನೆಗೆ ಉತ್ತರಿಸಲು ಅವರಲ್ಲಿ ಮನವಿ ಮಾಡುತ್ತೇನೆ. ಅಮಾನತು ಪತ್ರಕ್ಕೆ ನನ್ನ ವಕೀಲರು ಉತ್ತರ ನೀಡಲಿದ್ದಾರೆ” ಎಂದಿದ್ದಾರೆ.

ಅಮಾನತು ಆದೇಶ ಜುಲೈ 26 ರಿಂದ ಪ್ರಾರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಬಜರಂಗ್ ಪುನಿಯಾ ಅವರಿಗೆ ತಡೆಯೊಡ್ಡುವ ಸಾಧ್ಯತೆ ಇದೆ ವರದಿಗಳು ಹೇಳಿವೆ.

ನಾಡಾ 2021ರ ಆರ್ಟಿಕಲ್ 7.4 ರ ಪ್ರಕಾರ, ಈ ವಿಷಯದಲ್ಲಿ ವಿಚಾರಣೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರುವ ಮೊದಲು ಯಾವುದೇ ಸ್ಪರ್ಧೆ ಅಥವಾ ಚಟುವಟಿಕೆಯಲ್ಲಿ ಭಾಗವಹಿಸದಂತೆ ಬಜರಂಗ್ ಪುನಿಯಾ ಅವರನ್ನು ತಕ್ಷಣವೇ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಕೆಲ ತಿಂಗಳ ಹಿಂದೆ ಪುನಿಯಾ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಪ್ರಾಧಿಕಾರ (ನಾಡಾ) ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದರು. ಅಥ್ಲೀಟ್‌ಗಳ ಮೇಲೆ ಡೋಪ್ ಪರೀಕ್ಷೆ ನಡೆಸುವಾಗ ಅವಧಿ ಮೀರಿದ ಮತ್ತು ಹಳೆಯ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಹೇಳಿದ್ದರು. ಜೊತೆಗೆ ಸಾಕ್ಷ್ಯ ಸಮೇತವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಕ್ಷಿ ಮಲ್ಲಿಕ್, ವಿನೇಶ್ ಫೋಗಟ್ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಬೀದಿಗಿಳಿದು ಹೋರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ಬಜರಂಗ್ ಪುನಿಯಾ ಅವರನ್ನು ಬೆಂಬಲಿಸಿ ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಕುಸ್ತಿಪಟುಗಳ ಹೋರಾಟದ ನಡುವೆಯೇ ನಡೆದ ಕುಸ್ತಿ ಒಕ್ಕೂಟದ ಚುನಾಣೆಯಲ್ಲಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದರಿಂದ ತೀವ್ರ ಬೇಸರಗೊಂಡಿದ್ದ
ಕುಸ್ತಿಪಟು ಸಾಕ್ಷಿ ಮಲಿಕ್​ ಕುಸ್ತಿಗೆ ವಿದಾಯ ಹೇಳಿದ್ದರು. ಅವರ ಬೆನ್ನಲ್ಲೇ ಬಜರಂಗ್ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ್ದರು.

ಬಜರಂಗ್‌ ಪುನಿಯಾ 2020ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ 65 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು.

ಇದನ್ನೂ ಓದಿ : ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...