Homeಮುಖಪುಟಕುಸ್ತಿಪಟುಗಳು ಮೋದಿ ವಿರುದ್ಧ ದ್ವೇಷ ಭಾಷಣ ಮಾಡಿಲ್ಲ: ನ್ಯಾಯಾಲಯಕ್ಕೆ ದೆಹಲಿ ಪೊಲೀಸರ ವರದಿ

ಕುಸ್ತಿಪಟುಗಳು ಮೋದಿ ವಿರುದ್ಧ ದ್ವೇಷ ಭಾಷಣ ಮಾಡಿಲ್ಲ: ನ್ಯಾಯಾಲಯಕ್ಕೆ ದೆಹಲಿ ಪೊಲೀಸರ ವರದಿ

- Advertisement -
- Advertisement -

ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದಾಖಲಾಗಿರುವ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ‘ಆಕ್ಷನ್‌ ಟೇಕನ್ ರಿಪೋರ್ಟ್’ ಸಲ್ಲಿಸಿದ್ದಾರೆ.

ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ನನ್ನು ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ನೂತನ ಸಂಸತ್ ಭವನ ಉದ್ಘಾಟನೆ ದಿನ ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿತ್ತು. ನೂತನ ಸಂಸತ್ ಭವನದತ್ತ ತೆರಳಿದ್ದ ಕುಸ್ತಿಪಟುಗಳನ್ನು ತಡೆದು ಬಂಧಿಸಲಾಗಿತ್ತು. ಅಲ್ಲದೆ ಕುಸ್ತಿಪಟುಗಳು ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ್ದಾರೆಂದು ವ್ಯಕ್ತಿಯೊಬ್ಬರು ದೂರು ಸಲ್ಲಿಸಿದ್ದರು.

“ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕುಸ್ತಿಪಟುಗಳು ಘೋಷಣೆಗಳನ್ನು ಕೂಗಿದ್ದಾರೆ” ಎಂದು ದೂರುದಾರರು ಆರೋಪಿಸಿದ್ದಾರೆ. “ಇದು ದ್ವೇಷ ಭಾಷಣದ ವರ್ಗಕ್ಕೆ ಸೇರಿದೆ” ಎಂದು ದೂರುದಾರರು ವಾದಿಸಿದ್ದಾರೆ.

“ಗೌರವಾನ್ವಿತ ಭಾರತದ ಪ್ರಧಾನ ಮಂತ್ರಿಯವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ದೂರುದಾರರು ಆರೋಪಿಸಿದ್ದರು.

ಇದಕ್ಕೆ ಸ್ಪಷ್ಟನೆ ನೀಡಿ ವರದಿ ನೀಡಿರುವ ದೆಹಲಿ ಪೊಲೀಸರು, “ದೂರುದಾರರು ವಿಡಿಯೊ ಒದಗಿಸಿದ್ದಾರೆ. ಆದರೆ ಆ ವಿಡಿಯೊದಲ್ಲಿ ಕುಸ್ತಿಪಟುಗಳು ಘೋಷಣೆ ಕೂಗಿದ್ದು ಕಂಡುಬಂದಿಲ್ಲ. ಯಾವುದೇ ದ್ವೇಷದ ಭಾಷಣವನ್ನೂ ಮಾಡಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

“ದೂರುದಾರರು ಒದಗಿಸಿದ ದೂರಿನ ವಿಷಯದಲ್ಲಾಗಲೀ, ವೀಡಿಯೊ ಕ್ಲಿಪ್‌ನಲ್ಲಾಗಲೀ ದ್ವೇಷದ ಭಾಷಣದ ಯಾವುದೇ ಅಪರಾಧ ಕಂಡುಬಂದಿಲ್ಲ. ಪ್ರತಿಭಟನಾಕಾರ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಇತರ ಕುಸ್ತಿಪಟುಗಳು ಅಂತಹ ಯಾವುದೇ ಘೋಷಣೆಯನ್ನು ಕೂಗಿಲ್ಲ” ಎಂದು ಪೊಲೀಸರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಅರ್ಜಿಯನ್ನು ವಜಾಗೊಳಿಸುವಂತೆ ಪೊಲೀಸರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ. ‘ಅಟಲ್ ಜನ್ ಪಾರ್ಟಿ’ಯ ರಾಷ್ಟ್ರೀಯ ಮುಖ್ಯಸ್ಥ ಎಂದು ಹೇಳಿಕೊಳ್ಳುವ ಬಮ್‌ಬಮ್‌ ಮಹಾರಾಜ್ ನೌಹತಿಯಾ ಅವರ ಪರವಾಗಿ ದೂರು ಸಲ್ಲಿಕೆಯಾಗಿತ್ತು. ನ್ಯಾಯಾಲಯವು ಪ್ರಕರಣವನ್ನು ಜುಲೈ 7ಕ್ಕೆ ಮುಂದೂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದೆ.

ಬ್ರಿಜ್‌ ಭೂಷಣ್ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಕುಸ್ತಿಪಟುಗಳ ನಡುವೆ ಬಿಕ್ಕಟ್ಟು ಏರ್ಪಟ್ಟಿದೆ. ಒಂದಿಷ್ಟು ಮಾತುಕತೆಗಳು ಜರುಗಿದ್ದು ಜೂನ್‌ 15ರವರೆಗೆ ಹೋರಾಟವನ್ನು ಕುಸ್ತಿಪಟುಗಳು ಹಿಂಪಡೆದಿದ್ದಾರೆ. ಜೂನ್‌ 15ರಂದು ಪ್ರಕರಣದ ತನಿಖೆಯನ್ನು ಪೊಲೀಸರು ಪೂರ್ಣಗೊಳಿಸಲಿದ್ದಾರೆ ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...