Homeಮುಖಪುಟಕುಸ್ತಿಪಟುಗಳು ಮೋದಿ ವಿರುದ್ಧ ದ್ವೇಷ ಭಾಷಣ ಮಾಡಿಲ್ಲ: ನ್ಯಾಯಾಲಯಕ್ಕೆ ದೆಹಲಿ ಪೊಲೀಸರ ವರದಿ

ಕುಸ್ತಿಪಟುಗಳು ಮೋದಿ ವಿರುದ್ಧ ದ್ವೇಷ ಭಾಷಣ ಮಾಡಿಲ್ಲ: ನ್ಯಾಯಾಲಯಕ್ಕೆ ದೆಹಲಿ ಪೊಲೀಸರ ವರದಿ

- Advertisement -
- Advertisement -

ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದಾಖಲಾಗಿರುವ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ‘ಆಕ್ಷನ್‌ ಟೇಕನ್ ರಿಪೋರ್ಟ್’ ಸಲ್ಲಿಸಿದ್ದಾರೆ.

ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ನನ್ನು ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ನೂತನ ಸಂಸತ್ ಭವನ ಉದ್ಘಾಟನೆ ದಿನ ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿತ್ತು. ನೂತನ ಸಂಸತ್ ಭವನದತ್ತ ತೆರಳಿದ್ದ ಕುಸ್ತಿಪಟುಗಳನ್ನು ತಡೆದು ಬಂಧಿಸಲಾಗಿತ್ತು. ಅಲ್ಲದೆ ಕುಸ್ತಿಪಟುಗಳು ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ್ದಾರೆಂದು ವ್ಯಕ್ತಿಯೊಬ್ಬರು ದೂರು ಸಲ್ಲಿಸಿದ್ದರು.

“ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕುಸ್ತಿಪಟುಗಳು ಘೋಷಣೆಗಳನ್ನು ಕೂಗಿದ್ದಾರೆ” ಎಂದು ದೂರುದಾರರು ಆರೋಪಿಸಿದ್ದಾರೆ. “ಇದು ದ್ವೇಷ ಭಾಷಣದ ವರ್ಗಕ್ಕೆ ಸೇರಿದೆ” ಎಂದು ದೂರುದಾರರು ವಾದಿಸಿದ್ದಾರೆ.

“ಗೌರವಾನ್ವಿತ ಭಾರತದ ಪ್ರಧಾನ ಮಂತ್ರಿಯವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ದೂರುದಾರರು ಆರೋಪಿಸಿದ್ದರು.

ಇದಕ್ಕೆ ಸ್ಪಷ್ಟನೆ ನೀಡಿ ವರದಿ ನೀಡಿರುವ ದೆಹಲಿ ಪೊಲೀಸರು, “ದೂರುದಾರರು ವಿಡಿಯೊ ಒದಗಿಸಿದ್ದಾರೆ. ಆದರೆ ಆ ವಿಡಿಯೊದಲ್ಲಿ ಕುಸ್ತಿಪಟುಗಳು ಘೋಷಣೆ ಕೂಗಿದ್ದು ಕಂಡುಬಂದಿಲ್ಲ. ಯಾವುದೇ ದ್ವೇಷದ ಭಾಷಣವನ್ನೂ ಮಾಡಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

“ದೂರುದಾರರು ಒದಗಿಸಿದ ದೂರಿನ ವಿಷಯದಲ್ಲಾಗಲೀ, ವೀಡಿಯೊ ಕ್ಲಿಪ್‌ನಲ್ಲಾಗಲೀ ದ್ವೇಷದ ಭಾಷಣದ ಯಾವುದೇ ಅಪರಾಧ ಕಂಡುಬಂದಿಲ್ಲ. ಪ್ರತಿಭಟನಾಕಾರ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಇತರ ಕುಸ್ತಿಪಟುಗಳು ಅಂತಹ ಯಾವುದೇ ಘೋಷಣೆಯನ್ನು ಕೂಗಿಲ್ಲ” ಎಂದು ಪೊಲೀಸರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಅರ್ಜಿಯನ್ನು ವಜಾಗೊಳಿಸುವಂತೆ ಪೊಲೀಸರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ. ‘ಅಟಲ್ ಜನ್ ಪಾರ್ಟಿ’ಯ ರಾಷ್ಟ್ರೀಯ ಮುಖ್ಯಸ್ಥ ಎಂದು ಹೇಳಿಕೊಳ್ಳುವ ಬಮ್‌ಬಮ್‌ ಮಹಾರಾಜ್ ನೌಹತಿಯಾ ಅವರ ಪರವಾಗಿ ದೂರು ಸಲ್ಲಿಕೆಯಾಗಿತ್ತು. ನ್ಯಾಯಾಲಯವು ಪ್ರಕರಣವನ್ನು ಜುಲೈ 7ಕ್ಕೆ ಮುಂದೂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದೆ.

ಬ್ರಿಜ್‌ ಭೂಷಣ್ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಕುಸ್ತಿಪಟುಗಳ ನಡುವೆ ಬಿಕ್ಕಟ್ಟು ಏರ್ಪಟ್ಟಿದೆ. ಒಂದಿಷ್ಟು ಮಾತುಕತೆಗಳು ಜರುಗಿದ್ದು ಜೂನ್‌ 15ರವರೆಗೆ ಹೋರಾಟವನ್ನು ಕುಸ್ತಿಪಟುಗಳು ಹಿಂಪಡೆದಿದ್ದಾರೆ. ಜೂನ್‌ 15ರಂದು ಪ್ರಕರಣದ ತನಿಖೆಯನ್ನು ಪೊಲೀಸರು ಪೂರ್ಣಗೊಳಿಸಲಿದ್ದಾರೆ ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...