Homeಮುಖಪುಟಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

ಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

- Advertisement -
- Advertisement -

ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಭೆಯನ್ನು ಇಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರ ಮುಂದೆ ಕುಸ್ತಿಪಟುಗಳ 5 ಬೇಡಿಕೆಗಳನ್ನು ಇಟ್ಟಿದ್ದಾರೆ. ಅದರಲ್ಲಿ ಒಂದು ಮಹಿಳಾ ಫೆಡರೇಶನ್ ಮುಖ್ಯಸ್ಥರು ಬೇಕು ಎಂದು ಹೇಳಿದ್ದಾರೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ನಿನ್ನೆ ರಾತ್ರಿ 12:47 ಕ್ಕೆ ಟ್ವೀಟ್ ಮಾಡಿದ್ದು, ”ಸರ್ಕಾರವು ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸಿದ್ಧವಾಗಿದೆ. ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಿದ್ದೇನೆ” ಎಂದು ಹೇಳಿದ್ದರು.

ಅದರಂತೆ ಇಂದು (ಬುಧವಾರ) ಅನುರಾಗ್ ಠಾಕೂರ್ ಅವರನ್ನು ಕುಸ್ತಿಪಟುಗಳು ಭೇಟಿಯಾದರು. ಈ ವೇಳೆ, ಭಾರತ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನು ಕುಸ್ತಿಪಟುಗಳು ಸಚಿವರಿಗೆ ಸಲ್ಲಿಸಿದರು. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಡಬ್ಲ್ಯುಎಫ್‌ಐ ಭಾಗವಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಕುಸ್ತಿಪಟುಗಳು ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ತಮ್ಮ ಪ್ರತಿಭಟನೆಯ ಬಗ್ಗೆ ತಮ್ಮ ವಿರುದ್ಧ ಪೋಲೀಸ್ ಪ್ರಕರಣವನ್ನು ದಾಖಲಿಸಬೇಕೆಂದು ಬಯಸುತ್ತಾರೆ. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಪ್ರತಿಭಟನೆಯ ಪ್ರಮುಖ ಮುಖವಾದ ವಿನೇಶ್ ಫೋಗಟ್ ಅವರು ಪೂರ್ವ ನಿಗದಿತ ‘ಪಂಚಾಯತ್’ ನಲ್ಲಿ ಪಾಲ್ಗೊಳ್ಳಲು ಹರಿಯಾಣದ ಬಲಾಲಿ ಗ್ರಾಮದಲ್ಲಿರುವ ಕಾರಣ ಸಭೆಗೆ ಹಾಜರಾಗುತ್ತಿಲ್ಲ.

ಐದು ದಿನಗಳಲ್ಲಿ ಕುಸ್ತಿಪಟುಗಳು ಮತ್ತು ಸರ್ಕಾರದ ನಡುವೆ ನಡೆದ ಎರಡನೇ ಸಭೆಯಾಗಿದೆ. ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕೈಗೊಳ್ಳಲು ಕುಸ್ತಿಪಟುಗಳು ಶನಿವಾರ ತಡರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಶನಿವಾರ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸರ್ಕಾರ ಮತ್ತು ಪ್ರತಿಭಟನಾ ನಿರತ ಕುಸ್ತಿಪಟುಗಳ ನಡುವಿನ ಎರಡನೇ ಸುತ್ತಿನ ಸಭೆ ಇದಾಗಿದೆ. ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ ಠಾಕೂರ್ ಅವರು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಬಿಕ್ಕಟ್ಟು ಮುರಿಯಲು ಸಭೆ ಕರೆದಿದ್ದರು.

ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ, ಏಳು ಮಹಿಳಾ ಕುಸ್ತಿಪಟುಗಳಿರ್ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಶನಿವಾರ ತಡ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಕ್ರೀಡಾಪಟುಗಳು ಮಾಧ್ಯಮದವರೊಂದಿಗೆ ಯಾವುದೇ ಮಾತುಗಳನ್ನಾಡಲಿಲ್ಲ. ಸೋಮವಾರ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಯಿತು. ಸರ್ಕಾರದೊಂದಿಗೆ ಕ್ರೀಡಾಪಟುಗಳೊಂದಿಗೆ ಡೀಲ್ ಮಾಡಿಕೊಂಡಿದ್ದಾರೆ ಎನ್ನುವ ಮಾಧ್ಯಮವರದಿಗಳು ಪ್ರಸಾರಗೊಂಡವು.

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ ಅವರು ಎಲ್ಲ ಊಹಾಪೋಹಳಿಗೆ ತೆರೆ ಎಳೆದಿದ್ದಾರೆ. ”ಅಮಿತ್ ಶಾ ಅವರೊಂದಿಗೆ ಕುಸ್ತಿಪಟುಗಳು ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಮತ್ತು ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತ ಸರ್ಕಾರದಿಂದ ಕೇಳಲಾಗಿದೆ ಎಂದು ಪುನಿಯಾ ಹೇಳಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಅಪ್ರಾಪ್ತ ವಯಸ್ಕಳು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂಬ ವರದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಯಿತು. ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ, ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಸಲ್ಲಿಸಿದ್ದಾಳೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳೊಂದಿಗೆ ಮತ್ತೊಮ್ಮೆ ಚರ್ಚಿಸಲು ಸರ್ಕಾರ ಸಿದ್ಧವಿದೆ; ಅನುರಾಗ್ ಠಾಕೂರ್‌

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ”ನಾವು ಎಲ್ಲವನ್ನೂ ಪಣಕ್ಕಿಟ್ಟಿದ್ದೇವೆ ಮತ್ತು ನಮ್ಮ ಆಂದೋಲನದಲ್ಲಿ ಒಂದು ಅಡಚಣೆಯಾದರೆ ನಮ್ಮ ಸರ್ಕಾರಿ ಉದ್ಯೋಗಗಳನ್ನು ತ್ಯಜಿಸಲು ಸಿದ್ಧರಿದ್ದೇವೆ. ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.

”ಇದು ಗೌರವ ಮತ್ತು ಘನತೆಗಾಗಿ ಹೋರಾಟವಾಗಿದೆ. ನಾವು ವದಂತಿಗಳಿಗೆ ಹೆದರುವುದಿಲ್ಲ, ಅಥವಾ ರೈಲ್ವೇ ಉದ್ಯೋಗವನ್ನು ಕಳೆದುಕೊಳ್ಳುತ್ತೇವೆ. ಯಾರಾದರೂ ನಮ್ಮ ಮೇಲೆ ಒತ್ತಡ ಹೇರಿದರೆ ನಾವು ಕೆಲಸವನ್ನು ತೊರೆಯುತ್ತೇವೆ” ಎಂದು ಪುನಿಯಾ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

”ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ದೂರಿನ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಯಾವುದೇ ಡೀಲ್ ಮಾಡಿಕೊಂಡಿಲ್ಲ” ಎಂದು ಪುನಿಯಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಪ್ರತಿಭಟನಾ ಚಳವಳಿಯು ಸತ್ತು ಹೋಗಿಲ್ಲ, ಅದು ಮುಂದುವರಿಯುತ್ತದೆ. ಅದನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ನಾವು ಕಾರ್ಯತಂತ್ರ ರೂಪಿಸುತ್ತಿದ್ದೇವೆ” ಎಂದು ಪುನಿಯಾ ಹೇಳಿದರು.

”ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದೊಂದಿಗೆ ‘ಡೀಲ್’ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ವರದಿಗಳು ಬಂದಿದ್ದವು. ಆದರೆ ನಾವು ಸಭೆಯಲ್ಲಿನ ಚಚೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸರ್ಕಾರ ಕೇಳಿಕೊಂಡಿತ್ತು. ಹಾಗಾಗಿ ನಾವುಗಳು ಮಾತನಾಡಿರಲಿಲ್ಲ. ಆದರೆ, ಆನಂತರ ಸರ್ಕಾರದೊಳಗಿನವರೇ ಚರ್ಚೆಯ ವಿಚಾರವನ್ನು ಸೋರಿಕೆ ಮಾಡಿದ್ದಾರೆ” ಎಂದು ಪುನಿಯಾ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳು ಸರ್ಕಾರದ ಪ್ರತಿಕ್ರಿಯೆಯಿಂದ ತೃಪ್ತರಾಗಿಲ್ಲ, ಅವರ ಬೇಡಿಕೆಗಳಿಗೆ ಸರ್ಕಾರವು ಮನ್ನಣೆ ನೀಡುತ್ತಿಲ್ಲ ಎಂದು ಪುನಿಯಾ ಅಸಮಧಾನ ಹೊರಹಾಕಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

0
"ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ" ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ...